ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಜೆಸ್ಕಾಂನ ವಿದ್ಯುತ್ ಮೀಟರ್ ರೀಡರ್ಗಳು ಮನೆ ಮನೆಗೆ ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಯಾದಗಿರಿ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಮೀಕ್ಷೆ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ವಾಸದ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ ಇರುವುದನ್ನು ಖಾತ್ರಿ ಪಡಿಸಿಕೊಂಡು, ಆರ್ಆರ್ ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಬೇಕು. ಅಲ್ಲಿರುವ ಜನರ ಸಮೀಕ್ಷೆ ಮಾಡಿ, ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗದಂತೆ ನಿಗಾವಹಿಸಬೇಕು. ಮೀಟರ್ ನಂಬರ್ ಇಲ್ಲದ ಅಲೆಮಾರಿ, ಅರೆ ಅಲೆಮಾರಿ ವಾಸಸ್ಥಳ ಮತ್ತು ಕೊಳಚೆ ಪ್ರದೇಶಗಳ, ಅರಣ್ಯ ಪ್ರದೇಶಗಳ ಪ್ರತಿ ಕುಟುಂಬದ ಸಂಖ್ಯೆ ಯುಎಚ್ಐಡಿ ಸೃಜಿಸಬೇಕು ಎಂದರು. ಇಂಧನ ಇಲಾಖೆ ಮೀಟರ್ ರೀಡರ್ಗಳು ಆರ್.ಆರ್ ನಂಬರ್ ಪ್ರಕಾರ ಜಿಯೋ ಟ್ಯಾಗಿಂಗ್ ಸ್ಟಿಕರ್ ಅಂಟಿಸುವ ಕಾರ್ಯ ಆರಂಭಿಸಿದೆ. ಇದಾದ ನಂತರ ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಲು 150 ಕುಟುಂಬಕ್ಕೆ ಒಬ್ಬ ಗಣತಿದಾರರಂತೆ 2 ಸಾವಿರಕ್ಕೂ ಹೆಚ್ಚು ಗಣತಿದಾರರನ್ನು ನಿಯೋಜನೆ ಮಾಡಲಾಗುವುದು. ಪ್ರತಿ 20 ಗಣತಿದಾರಿಗೆ ಒಬ್ಬರು ಮೇಲ್ವಿಚಾರಕರನ್ನು ಮತ್ತು ಜಿಲ್ಲೆಗೆ 50 ಮಾಸ್ಟರ್ ಟ್ರೈನರ್ ಗಳನ್ನು ಗುರುತಿಸಿ ನಿಗದಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…