Advertisement
MIRROR FOCUS

ಮನೆ ಮನೆಗೆ ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯವನ್ನು ಪೂರ್ಣಗೊಳಿಸುವಂತೆ ಸೂಚನೆ

Share

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಜೆಸ್ಕಾಂನ ವಿದ್ಯುತ್ ಮೀಟರ್ ರೀಡರ್‌ಗಳು ಮನೆ ಮನೆಗೆ ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಯಾದಗಿರಿ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಮೀಕ್ಷೆ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ವಾಸದ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ ಇರುವುದನ್ನು ಖಾತ್ರಿ ಪಡಿಸಿಕೊಂಡು, ಆರ್‌ಆರ್ ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಬೇಕು. ಅಲ್ಲಿರುವ ಜನರ ಸಮೀಕ್ಷೆ ಮಾಡಿ, ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗದಂತೆ ನಿಗಾವಹಿಸಬೇಕು. ಮೀಟರ್ ನಂಬರ್ ಇಲ್ಲದ ಅಲೆಮಾರಿ, ಅರೆ ಅಲೆಮಾರಿ ವಾಸಸ್ಥಳ ಮತ್ತು ಕೊಳಚೆ ಪ್ರದೇಶಗಳ, ಅರಣ್ಯ ಪ್ರದೇಶಗಳ ಪ್ರತಿ ಕುಟುಂಬದ ಸಂಖ್ಯೆ ಯುಎಚ್‌ಐಡಿ ಸೃಜಿಸಬೇಕು ಎಂದರು. ಇಂಧನ ಇಲಾಖೆ ಮೀಟರ್ ರೀಡರ್‌ಗಳು ಆರ್.ಆರ್ ನಂಬರ್ ಪ್ರಕಾರ ಜಿಯೋ ಟ್ಯಾಗಿಂಗ್ ಸ್ಟಿಕರ್ ಅಂಟಿಸುವ ಕಾರ್ಯ ಆರಂಭಿಸಿದೆ. ಇದಾದ ನಂತರ ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಲು 150 ಕುಟುಂಬಕ್ಕೆ ಒಬ್ಬ ಗಣತಿದಾರರಂತೆ 2 ಸಾವಿರಕ್ಕೂ ಹೆಚ್ಚು ಗಣತಿದಾರರನ್ನು ನಿಯೋಜನೆ ಮಾಡಲಾಗುವುದು. ಪ್ರತಿ 20 ಗಣತಿದಾರಿಗೆ ಒಬ್ಬರು ಮೇಲ್ವಿಚಾರಕರನ್ನು ಮತ್ತು ಜಿಲ್ಲೆಗೆ 50 ಮಾಸ್ಟರ್ ಟ್ರೈನರ್ ಗಳನ್ನು ಗುರುತಿಸಿ ನಿಗದಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

36 minutes ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 hour ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

3 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

6 hours ago