ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಖಾತೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿವೆ. ಸಾರ್ವಜನಿಕರ ಸಹಕಾರದಿಂದ ಮಾತ್ರ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳಿಗೆ ಕಡಿವಾಣ ಹಾಕಲು ಸಾಧ್ಯ. ಪ್ರತಿಯೊಬ್ಬರೂ ತಮ್ಮ ಮನೆ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದಕ್ಕೆ ಆದ್ಯತೆ ನೀಡಬೇಕು ಎಂದರು. ಡೆಂಗ್ಯೂ ಸ್ವಚ್ಛ ನೀರಿನಲ್ಲಿಯೇ ಹುಟ್ಟುವುದರಿಂದ ಸಾರ್ವಜನಿಕರು ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ಬಗ್ಗೆ ಜಾಗೃತಿ ಮೂಢಿಸಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಸಚಿವರು ಹೇಳಿದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…