ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ ಹೊರಡಿಸಲಾಗಿದೆ. ನೀರಾವರಿ ಈರುಳ್ಳಿ ಮತ್ತು ಕೆಂಪು ಮೆಣಸಿನಕಾಯಿ ಬೆಳೆಗೆ ವಿಮೆ ಕಂತು ಪಾವತಿಗೆ ಜುಲೈ 31 ಕೊನೆಯ ದಿನವಾಗಿದೆ. ಮಳೆಯಾಶ್ರಿತ ಈರುಳ್ಳಿ ಮತ್ತು ಕೆಂಪು ಮೆಣಸಿನಕಾಯಿ ಬೆಳೆಗೆ ವಿಮೆ ಕಂತು ಪಾವತಿಗೆ ಅಗಸ್ಟ್ 16 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಗದಗ ಜಿಲ್ಲಾ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಕಚೇರಿಯಿಂದ ಮಾಹಿತಿ ಪಡೆಯಬಹುದೆಂದು ಗದಗ ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel