ರೈತರ ಹಿತದೃಷ್ಟಿಯಿಂದ ಕೇಂದ್ರ ಸಚಿವ ಸಂಪುಟ ಮೂರು ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದೆ. ಬೆಳೆ ಹಾನಿಗೆ ಸೂಕ್ತ ವಿಮೆ ನೀಡಲಾಗುತ್ತಿದೆ. ಕಟಾವಿನ ನಂತರ ಬೆಳೆ ಹಾನಿಯಾದರೂ ಸಹ ವಿಮೆಯನ್ನು ನೀಡಲಾಗುವುದು. ಬಿತ್ತನೆಯಿಂದ ಕಟಾವಿನ ನಂತರದವರೆಗೂ ಹಾನಿಗೆ ವಿಮೆ ಒದಗಿಸಲಾಗುವುದು ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಕಳೆದ ವರ್ಷ ನಾಲ್ಕು ಕೋಟಿ ರೈತರು ಫಸಲ್ ಬಿಮಾ ಯೋಜನೆಯ ಸೌಲಭ್ಯ ಪಡೆದಿದ್ದಾರೆ. ಬೆಳೆ ಹಾನಿ ಅಂದಾಜಿಸಲು ದೂರಸಂವೇದಿ ಮಾಪನ ಬಳಸಿಕೊಳ್ಳಲಾಗುತ್ತಿದೆ. ಫಸಲ್ ಬಿಮಾ ಯೋಜನೆಯಡಿ ತಂತ್ರಜ್ಞಾನ ಮತ್ತು ಆವಿಷ್ಕಾರಕ್ಕೆ 850 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಹೇಳಿದರು. ಈ ಬಾರಿ ಕೃಷಿ ಮತ್ತು ಸಂಬಂಧಿತ ವಲಯದಲ್ಲಿ ಉತ್ತಮ ಪ್ರಗತಿಯಾಗಿದೆ. ಅಕ್ಕಿ ರಫ್ತಿಗೆ ಕನಿಷ್ಠ ರಪ್ತು ದರ ರದ್ದುಪಡಿಸಲಾಗಿದ್ದು, ಅಕ್ಕಿ ರಫ್ತಿಗೆ ಅನುಮತಿಸಲಾಗಿದೆ. ಇಂಡೋನೇಷ್ಯಾಗೆ 10 ಲಕ್ಷ ಮೆಟ್ರಿಕ್ ಟನ್ ಬಾಸುಮತಿ ಅಕ್ಕಿ ರಫ್ತು ಮಾಡಲು ಅಲ್ಲಿನ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…