ರೈತರ ಹಿತದೃಷ್ಟಿಯಿಂದ ಕೇಂದ್ರ ಸಚಿವ ಸಂಪುಟ ಮೂರು ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದೆ. ಬೆಳೆ ಹಾನಿಗೆ ಸೂಕ್ತ ವಿಮೆ ನೀಡಲಾಗುತ್ತಿದೆ. ಕಟಾವಿನ ನಂತರ ಬೆಳೆ ಹಾನಿಯಾದರೂ ಸಹ ವಿಮೆಯನ್ನು ನೀಡಲಾಗುವುದು. ಬಿತ್ತನೆಯಿಂದ ಕಟಾವಿನ ನಂತರದವರೆಗೂ ಹಾನಿಗೆ ವಿಮೆ ಒದಗಿಸಲಾಗುವುದು ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಕಳೆದ ವರ್ಷ ನಾಲ್ಕು ಕೋಟಿ ರೈತರು ಫಸಲ್ ಬಿಮಾ ಯೋಜನೆಯ ಸೌಲಭ್ಯ ಪಡೆದಿದ್ದಾರೆ. ಬೆಳೆ ಹಾನಿ ಅಂದಾಜಿಸಲು ದೂರಸಂವೇದಿ ಮಾಪನ ಬಳಸಿಕೊಳ್ಳಲಾಗುತ್ತಿದೆ. ಫಸಲ್ ಬಿಮಾ ಯೋಜನೆಯಡಿ ತಂತ್ರಜ್ಞಾನ ಮತ್ತು ಆವಿಷ್ಕಾರಕ್ಕೆ 850 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಹೇಳಿದರು. ಈ ಬಾರಿ ಕೃಷಿ ಮತ್ತು ಸಂಬಂಧಿತ ವಲಯದಲ್ಲಿ ಉತ್ತಮ ಪ್ರಗತಿಯಾಗಿದೆ. ಅಕ್ಕಿ ರಫ್ತಿಗೆ ಕನಿಷ್ಠ ರಪ್ತು ದರ ರದ್ದುಪಡಿಸಲಾಗಿದ್ದು, ಅಕ್ಕಿ ರಫ್ತಿಗೆ ಅನುಮತಿಸಲಾಗಿದೆ. ಇಂಡೋನೇಷ್ಯಾಗೆ 10 ಲಕ್ಷ ಮೆಟ್ರಿಕ್ ಟನ್ ಬಾಸುಮತಿ ಅಕ್ಕಿ ರಫ್ತು ಮಾಡಲು ಅಲ್ಲಿನ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…
ರಾಜ್ಯದಲ್ಲಿ ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು ಆರೋಗ್ಯ ಸಚಿವ…
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490