ರೈತರ ಹಿತದೃಷ್ಟಿಯಿಂದ ಕೇಂದ್ರ ಸಚಿವ ಸಂಪುಟ ಮೂರು ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದೆ. ಬೆಳೆ ಹಾನಿಗೆ ಸೂಕ್ತ ವಿಮೆ ನೀಡಲಾಗುತ್ತಿದೆ. ಕಟಾವಿನ ನಂತರ ಬೆಳೆ ಹಾನಿಯಾದರೂ ಸಹ ವಿಮೆಯನ್ನು ನೀಡಲಾಗುವುದು. ಬಿತ್ತನೆಯಿಂದ ಕಟಾವಿನ ನಂತರದವರೆಗೂ ಹಾನಿಗೆ ವಿಮೆ ಒದಗಿಸಲಾಗುವುದು ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಕಳೆದ ವರ್ಷ ನಾಲ್ಕು ಕೋಟಿ ರೈತರು ಫಸಲ್ ಬಿಮಾ ಯೋಜನೆಯ ಸೌಲಭ್ಯ ಪಡೆದಿದ್ದಾರೆ. ಬೆಳೆ ಹಾನಿ ಅಂದಾಜಿಸಲು ದೂರಸಂವೇದಿ ಮಾಪನ ಬಳಸಿಕೊಳ್ಳಲಾಗುತ್ತಿದೆ. ಫಸಲ್ ಬಿಮಾ ಯೋಜನೆಯಡಿ ತಂತ್ರಜ್ಞಾನ ಮತ್ತು ಆವಿಷ್ಕಾರಕ್ಕೆ 850 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಹೇಳಿದರು. ಈ ಬಾರಿ ಕೃಷಿ ಮತ್ತು ಸಂಬಂಧಿತ ವಲಯದಲ್ಲಿ ಉತ್ತಮ ಪ್ರಗತಿಯಾಗಿದೆ. ಅಕ್ಕಿ ರಫ್ತಿಗೆ ಕನಿಷ್ಠ ರಪ್ತು ದರ ರದ್ದುಪಡಿಸಲಾಗಿದ್ದು, ಅಕ್ಕಿ ರಫ್ತಿಗೆ ಅನುಮತಿಸಲಾಗಿದೆ. ಇಂಡೋನೇಷ್ಯಾಗೆ 10 ಲಕ್ಷ ಮೆಟ್ರಿಕ್ ಟನ್ ಬಾಸುಮತಿ ಅಕ್ಕಿ ರಫ್ತು ಮಾಡಲು ಅಲ್ಲಿನ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…