ರೈತರ ಹಿತದೃಷ್ಟಿಯಿಂದ ಕೇಂದ್ರ ಸಚಿವ ಸಂಪುಟ ಮೂರು ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದೆ. ಬೆಳೆ ಹಾನಿಗೆ ಸೂಕ್ತ ವಿಮೆ ನೀಡಲಾಗುತ್ತಿದೆ. ಕಟಾವಿನ ನಂತರ ಬೆಳೆ ಹಾನಿಯಾದರೂ ಸಹ ವಿಮೆಯನ್ನು ನೀಡಲಾಗುವುದು. ಬಿತ್ತನೆಯಿಂದ ಕಟಾವಿನ ನಂತರದವರೆಗೂ ಹಾನಿಗೆ ವಿಮೆ ಒದಗಿಸಲಾಗುವುದು ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಕಳೆದ ವರ್ಷ ನಾಲ್ಕು ಕೋಟಿ ರೈತರು ಫಸಲ್ ಬಿಮಾ ಯೋಜನೆಯ ಸೌಲಭ್ಯ ಪಡೆದಿದ್ದಾರೆ. ಬೆಳೆ ಹಾನಿ ಅಂದಾಜಿಸಲು ದೂರಸಂವೇದಿ ಮಾಪನ ಬಳಸಿಕೊಳ್ಳಲಾಗುತ್ತಿದೆ. ಫಸಲ್ ಬಿಮಾ ಯೋಜನೆಯಡಿ ತಂತ್ರಜ್ಞಾನ ಮತ್ತು ಆವಿಷ್ಕಾರಕ್ಕೆ 850 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಹೇಳಿದರು. ಈ ಬಾರಿ ಕೃಷಿ ಮತ್ತು ಸಂಬಂಧಿತ ವಲಯದಲ್ಲಿ ಉತ್ತಮ ಪ್ರಗತಿಯಾಗಿದೆ. ಅಕ್ಕಿ ರಫ್ತಿಗೆ ಕನಿಷ್ಠ ರಪ್ತು ದರ ರದ್ದುಪಡಿಸಲಾಗಿದ್ದು, ಅಕ್ಕಿ ರಫ್ತಿಗೆ ಅನುಮತಿಸಲಾಗಿದೆ. ಇಂಡೋನೇಷ್ಯಾಗೆ 10 ಲಕ್ಷ ಮೆಟ್ರಿಕ್ ಟನ್ ಬಾಸುಮತಿ ಅಕ್ಕಿ ರಫ್ತು ಮಾಡಲು ಅಲ್ಲಿನ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…