ರೈತರ ಹಿತದೃಷ್ಟಿಯಿಂದ ಕೇಂದ್ರ ಸಚಿವ ಸಂಪುಟ ಮೂರು ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದೆ. ಬೆಳೆ ಹಾನಿಗೆ ಸೂಕ್ತ ವಿಮೆ ನೀಡಲಾಗುತ್ತಿದೆ. ಕಟಾವಿನ ನಂತರ ಬೆಳೆ ಹಾನಿಯಾದರೂ ಸಹ ವಿಮೆಯನ್ನು ನೀಡಲಾಗುವುದು. ಬಿತ್ತನೆಯಿಂದ ಕಟಾವಿನ ನಂತರದವರೆಗೂ ಹಾನಿಗೆ ವಿಮೆ ಒದಗಿಸಲಾಗುವುದು ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಕಳೆದ ವರ್ಷ ನಾಲ್ಕು ಕೋಟಿ ರೈತರು ಫಸಲ್ ಬಿಮಾ ಯೋಜನೆಯ ಸೌಲಭ್ಯ ಪಡೆದಿದ್ದಾರೆ. ಬೆಳೆ ಹಾನಿ ಅಂದಾಜಿಸಲು ದೂರಸಂವೇದಿ ಮಾಪನ ಬಳಸಿಕೊಳ್ಳಲಾಗುತ್ತಿದೆ. ಫಸಲ್ ಬಿಮಾ ಯೋಜನೆಯಡಿ ತಂತ್ರಜ್ಞಾನ ಮತ್ತು ಆವಿಷ್ಕಾರಕ್ಕೆ 850 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಹೇಳಿದರು. ಈ ಬಾರಿ ಕೃಷಿ ಮತ್ತು ಸಂಬಂಧಿತ ವಲಯದಲ್ಲಿ ಉತ್ತಮ ಪ್ರಗತಿಯಾಗಿದೆ. ಅಕ್ಕಿ ರಫ್ತಿಗೆ ಕನಿಷ್ಠ ರಪ್ತು ದರ ರದ್ದುಪಡಿಸಲಾಗಿದ್ದು, ಅಕ್ಕಿ ರಫ್ತಿಗೆ ಅನುಮತಿಸಲಾಗಿದೆ. ಇಂಡೋನೇಷ್ಯಾಗೆ 10 ಲಕ್ಷ ಮೆಟ್ರಿಕ್ ಟನ್ ಬಾಸುಮತಿ ಅಕ್ಕಿ ರಫ್ತು ಮಾಡಲು ಅಲ್ಲಿನ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…