ರೈತರ ಹಿತದೃಷ್ಟಿಯಿಂದ ಕೇಂದ್ರ ಸಚಿವ ಸಂಪುಟ ಮೂರು ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದೆ. ಬೆಳೆ ಹಾನಿಗೆ ಸೂಕ್ತ ವಿಮೆ ನೀಡಲಾಗುತ್ತಿದೆ. ಕಟಾವಿನ ನಂತರ ಬೆಳೆ ಹಾನಿಯಾದರೂ ಸಹ ವಿಮೆಯನ್ನು ನೀಡಲಾಗುವುದು. ಬಿತ್ತನೆಯಿಂದ ಕಟಾವಿನ ನಂತರದವರೆಗೂ ಹಾನಿಗೆ ವಿಮೆ ಒದಗಿಸಲಾಗುವುದು ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಕಳೆದ ವರ್ಷ ನಾಲ್ಕು ಕೋಟಿ ರೈತರು ಫಸಲ್ ಬಿಮಾ ಯೋಜನೆಯ ಸೌಲಭ್ಯ ಪಡೆದಿದ್ದಾರೆ. ಬೆಳೆ ಹಾನಿ ಅಂದಾಜಿಸಲು ದೂರಸಂವೇದಿ ಮಾಪನ ಬಳಸಿಕೊಳ್ಳಲಾಗುತ್ತಿದೆ. ಫಸಲ್ ಬಿಮಾ ಯೋಜನೆಯಡಿ ತಂತ್ರಜ್ಞಾನ ಮತ್ತು ಆವಿಷ್ಕಾರಕ್ಕೆ 850 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಹೇಳಿದರು. ಈ ಬಾರಿ ಕೃಷಿ ಮತ್ತು ಸಂಬಂಧಿತ ವಲಯದಲ್ಲಿ ಉತ್ತಮ ಪ್ರಗತಿಯಾಗಿದೆ. ಅಕ್ಕಿ ರಫ್ತಿಗೆ ಕನಿಷ್ಠ ರಪ್ತು ದರ ರದ್ದುಪಡಿಸಲಾಗಿದ್ದು, ಅಕ್ಕಿ ರಫ್ತಿಗೆ ಅನುಮತಿಸಲಾಗಿದೆ. ಇಂಡೋನೇಷ್ಯಾಗೆ 10 ಲಕ್ಷ ಮೆಟ್ರಿಕ್ ಟನ್ ಬಾಸುಮತಿ ಅಕ್ಕಿ ರಫ್ತು ಮಾಡಲು ಅಲ್ಲಿನ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…