ರೈತರ ಹಿತದೃಷ್ಟಿಯಿಂದ ಕೇಂದ್ರ ಸಚಿವ ಸಂಪುಟ ಮೂರು ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದೆ. ಬೆಳೆ ಹಾನಿಗೆ ಸೂಕ್ತ ವಿಮೆ ನೀಡಲಾಗುತ್ತಿದೆ. ಕಟಾವಿನ ನಂತರ ಬೆಳೆ ಹಾನಿಯಾದರೂ ಸಹ ವಿಮೆಯನ್ನು ನೀಡಲಾಗುವುದು. ಬಿತ್ತನೆಯಿಂದ ಕಟಾವಿನ ನಂತರದವರೆಗೂ ಹಾನಿಗೆ ವಿಮೆ ಒದಗಿಸಲಾಗುವುದು ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಕಳೆದ ವರ್ಷ ನಾಲ್ಕು ಕೋಟಿ ರೈತರು ಫಸಲ್ ಬಿಮಾ ಯೋಜನೆಯ ಸೌಲಭ್ಯ ಪಡೆದಿದ್ದಾರೆ. ಬೆಳೆ ಹಾನಿ ಅಂದಾಜಿಸಲು ದೂರಸಂವೇದಿ ಮಾಪನ ಬಳಸಿಕೊಳ್ಳಲಾಗುತ್ತಿದೆ. ಫಸಲ್ ಬಿಮಾ ಯೋಜನೆಯಡಿ ತಂತ್ರಜ್ಞಾನ ಮತ್ತು ಆವಿಷ್ಕಾರಕ್ಕೆ 850 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಹೇಳಿದರು. ಈ ಬಾರಿ ಕೃಷಿ ಮತ್ತು ಸಂಬಂಧಿತ ವಲಯದಲ್ಲಿ ಉತ್ತಮ ಪ್ರಗತಿಯಾಗಿದೆ. ಅಕ್ಕಿ ರಫ್ತಿಗೆ ಕನಿಷ್ಠ ರಪ್ತು ದರ ರದ್ದುಪಡಿಸಲಾಗಿದ್ದು, ಅಕ್ಕಿ ರಫ್ತಿಗೆ ಅನುಮತಿಸಲಾಗಿದೆ. ಇಂಡೋನೇಷ್ಯಾಗೆ 10 ಲಕ್ಷ ಮೆಟ್ರಿಕ್ ಟನ್ ಬಾಸುಮತಿ ಅಕ್ಕಿ ರಫ್ತು ಮಾಡಲು ಅಲ್ಲಿನ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…