Advertisement
MIRROR FOCUS

ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ

Share

ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಬಳಕೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ (Integrated Digital Crop Survey) ಜಾರಿಗೆ ಮುಂದಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಹಾಗೂ ಐಟಿ-ಬಿಟಿ ಇಲಾಖೆಗಳ ಸಹಯೋಗದಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನಗೊಳ್ಳಲಿದೆ.

ಮೊದಲ ಹಂತದಲ್ಲಿ ರಾಜ್ಯದ ಎಲ್ಲಾ ಭೌಗೋಳಿಕ ಪ್ರದೇಶಗಳನ್ನು ಪ್ರತಿನಿಧಿಸುವಂತೆ ಆಯ್ಕೆ ಮಾಡಲಾದ ಐದು ಹೋಬಳಿಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ.

ಅತ್ಯಾಧುನಿಕ ತಂತ್ರಜ್ಞಾನ ಬಳಕೆಯ ಈ ಹೊಸ ಮಾದರಿಯಲ್ಲಿ, ಉನ್ನತ ರೆಸಲ್ಯೂಷನ್ ಉಪಗ್ರಹ ಚಿತ್ರಣ, ಡ್ರೋನ್ ಸಮೀಕ್ಷೆ , ಜಿಐಎಸ್ (GIS) ದತ್ತಾಂಶ, ಕೃತಕ ಬುದ್ಧಿಮತ್ತೆ (AI), ಮಷಿನ್ ಲರ್ನಿಂಗ್ (Machine Learning) ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಈಗಿರುವ ಬೆಳೆ ಸಮೀಕ್ಷೆಯ ದತ್ತಾಂಶದೊಂದಿಗೆ ಸಂಯೋಜಿಸಿ ನಿಖರ ಮತ್ತು ಪಾರದರ್ಶಕ ಡಿಜಿಟಲ್ ಬೆಳೆ ಸಮೀಕ್ಷೆ ನಡೆಸಲಾಗುತ್ತದೆ.

ರೈತರಿಗೆ ಏನು ಪ್ರಯೋಜನ? :

  • ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆಯಿಂದ, ಬೆಳೆ ಮಾಹಿತಿಯ ನಿಖರತೆ ಹೆಚ್ಚಲಿದೆ.
  • ಬೆಳೆ ನಷ್ಟದ ಮೌಲ್ಯಮಾಪನ ವೇಗವಾಗಿ ಸಾಧ್ಯವಾಗಲಿದೆ.
  • ಬೆಳೆ ವಿಮೆ, ಪರಿಹಾರ ಮತ್ತು ಸರ್ಕಾರಿ ಯೋಜನೆಗಳ ಅನುಷ್ಠಾನ ಹೆಚ್ಚು ಪಾರದರ್ಶಕವಾಗಲಿದೆ.
  • ಕೃಷಿ ಯೋಜನೆ ರೂಪಿಸಲು ವಿಶ್ವಾಸಾರ್ಹ ದತ್ತಾಂಶ ಲಭ್ಯವಾಗಲಿದೆ.
  • ರೈತರಿಗೆ ಸರ್ಕಾರದ ಸೇವೆಗಳು ತ್ವರಿತವಾಗಿ ತಲುಪುವ ಸಾಧ್ಯತೆ ಹೆಚ್ಚಲಿದೆ.

ಡಿಜಿಟಲ್ ಕೃಷಿಯತ್ತ ಮತ್ತೊಂದು ಹೆಜ್ಜೆ : ರಾಜ್ಯ ಸರ್ಕಾರದ ಈ ಯೋಜನೆಯು ಕೃಷಿ ಕ್ಷೇತ್ರದಲ್ಲಿ ಡಿಜಿಟಲ್ ಆಡಳಿತ, ನಿಖರ ಕೃಷಿ (Precision Agriculture) ಮತ್ತು ದತ್ತಾಂಶ ಆಧಾರಿತ ನಿರ್ಧಾರ ವ್ಯವಸ್ಥೆಗೆ ಬಲ ನೀಡುವ ಮಹತ್ವದ ಹೆಜ್ಜೆಯಾಗಿದೆ. ಪ್ರಾಯೋಗಿಕ ಹಂತದ ಯಶಸ್ಸಿನ ಬಳಿಕ ಈ ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸುವ ನಿರೀಕ್ಷೆಯಿದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

The Karnataka government has launched a pilot Integrated Digital Crop Survey using satellite imagery, drones, GIS, artificial intelligence, and machine learning. The project will initially be implemented in five selected hoblis to improve crop data accuracy and strengthen digital governance in agriculture.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

15 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

22 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago