Advertisement
MIRROR FOCUS

ಹವಾಮಾನ | ಸಮುದ್ರದ ಕೆಳಭಾಗದಲ್ಲಿ ಹೆಚ್ಚುತ್ತಿರುವ ಹೀಟ್‌ ವೇವ್‌ | ಅಧ್ಯಯನ ಮುಂದುವರಿಸಿದ ವಿಜ್ಞಾನಿಗಳು | ಭವಿಷ್ಯದ ಮೇಲೆ ಪರಿಣಾಮ ಏನು ? |

Share

ಸಮುದ್ರದ ತಳಭಾಗದಲ್ಲಿ ಹೀಟ್‌ವೇಟ್‌ ಹರಿದಾಡುವುದನ್ನು  ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಇದುವರೆಗೆ ಭೂಮಿಯ ಮೇಲ್ಮೈ ಹಾಗೂ ಸಮುದ್ರದ ಮೇಲ್ಮೈಯ ಹೀಟ್‌ ವೇವ್‌ ಬಗ್ಗೆ ಅಧ್ಯಯನ ನಡಸಲಾಗುತ್ತಿತ್ತು. ಇದೀಗ ಸಮುದ್ರದ ತಳಭಾಗದಲ್ಲಿಯೂ ಈ ಅಲೆಗಳು ಹೆಚ್ಚುತ್ತಿರುವುದನ್ನು  ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ.  ಈ  ಅಲೆಗಳು ಜಗತ್ತಿನಾದ್ಯಂತ ಸಾಗರ ಪರಿಸರ ವ್ಯವಸ್ಥೆಗಳ  ಮೇಲೆ ಪ್ರಭಾವ ಬೀರುತ್ತಿವೆ. ಇದರ ಸಾಧಕ-ಬಾಧಕಗಳ ಬಗ್ಗೆಯೂ ಅಧ್ಯಯನ ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement

ನ್ಯಾಷನಲ್ ಓಷಿಯಾನಿಕ್ ಅಂಡ್ ಅಟ್ಮಾಸ್ಫಿಯರಿಕ್ ಅಡ್ಮಿನಿಸ್ಟ್ರೇಷನ್ (NOAA) ಸಂಶೋಧಕರ ನೇತೃತ್ವದ ತಂಡದ ಅಧ್ಯಯನವು ಹೊಸ ಸಂಗತಿಗಳನ್ನು  ತಿಳಿಸಿದೆ. ನೇಚರ್ ಕಮ್ಯುನಿಕೇಷನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನವು ಈ  ಅಲೆಗಳ ಗುಣಲಕ್ಷಣಗಳನ್ನು ಮತ್ತು ಸಮುದ್ರ ಹಾಗೂ ಪ್ರಪಂಚದ ಮೇಲೆ ಬೀರುವ ಪ್ರಭಾವವನ್ನು ಮತ್ತಷ್ಟು ಅಧ್ಯಯನ ಮಾಡಲು ಪ್ರಯತ್ನ ಮಾಡುತ್ತಿದೆ.

Advertisement

ಸಮುದ್ರದ ಈ ಹೀಟ್‌ ವೇವ್‌ ಹೆಚ್ಚಿನ ತೀವ್ರತೆಯನ್ನು ಹೊಂದಿವೆ ಎಂದು ಅಧ್ಯಯನ ವರದಿ ಹೇಳಿದೆ. ಸಾಗರಗಳ ಆಳದಲ್ಲಿ 0.5 ಡಿಗ್ರಿಗಳಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣತೆ ಬದಲಾಗುತ್ತದೆ. ಕಳೆದ 100 ವರ್ಷಗಳಲ್ಲಿ ಸಾಗರವು ಸುಮಾರು 1.5 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿದೆ. ಜಾಗತಿಕ ತಾಪಮಾನದಿಂದಲೇ 90% ಹೆಚ್ಚುವರಿ ಉಷ್ಣತೆ ಸಾಗರವು ಸೆಳೆದುಕೊಂಡಿದೆ  ಎಂದು ಅಧ್ಯಯನವು ಹೇಳುತ್ತದೆ. ಹೀಗಾಗಿ ಕಳೆದ ಹತ್ತು ವರ್ಷಗಳಲ್ಲಿ ಸಮುದ್ರದ ಶಾಖದ ಅಲೆಗಳ ಆವರ್ತನವು ಸುಮಾರು 50% ರಷ್ಟು ಹೆಚ್ಚಾಗಿದೆ. ಈ  ಅಲೆಗಳು ಪ್ರಪಂಚದಾದ್ಯಂತದ ಸಾಗರ ಪರಿಸರ ವ್ಯವಸ್ಥೆಗಳ ಆರೋಗ್ಯದ ಮೇಲೆ  ಪ್ರಭಾವ ಬೀರಿವೆ. ಮೀನುಗಳು ಹಾಗೂ ಸಮುದ್ರ ಜೀವಿಗಳ ಮೇಲೆಯೂ ಪರಿಣಾಮ ಬೀರಲು ಆರಂಭವಾಗಿದೆ.

ಈ ಎಲ್ಲದರ ನಡುವೆಯೇ ಈಚೆಗೆ ವಾಯುಭಾರ ಕುಸಿತ, ವಿಪರೀತ ಮಳೆ, ಹವಾಮಾನ ಬದಲಾವಣೆಗಳು ಹೆಚ್ಚಾಗಲು ಆರಂಭವಾಗಿದೆ. ಈ ಎಲ್ಲದರ ಬಗ್ಗೆಯೂ ವಿಜ್ಞಾನಿಗಳು ಹೆಚ್ಚಿನ ಅಧ್ಯಯನ ನಡೆಸಲು ಆರಂಭಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

2 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

2 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

2 hours ago

ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…

2 hours ago

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…

2 hours ago

ಅಡಿಕೆ ಒಂದು ಸಮೂಹದ ಅನಿವಾರ್ಯತೆ ಮತ್ತು ಬದುಕು

ಅಡಿಕೆಯ ಮೇಲೆ ಯಾವುದೇ ಋಣಾತ್ಮಕ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಬೇಕಾದ ಹಲವು ಅಂಶಗಳು…

16 hours ago