Advertisement
MIRROR FOCUS

ಹವಾಮಾನ | ಸಮುದ್ರದ ಕೆಳಭಾಗದಲ್ಲಿ ಹೆಚ್ಚುತ್ತಿರುವ ಹೀಟ್‌ ವೇವ್‌ | ಅಧ್ಯಯನ ಮುಂದುವರಿಸಿದ ವಿಜ್ಞಾನಿಗಳು | ಭವಿಷ್ಯದ ಮೇಲೆ ಪರಿಣಾಮ ಏನು ? |

Share

ಸಮುದ್ರದ ತಳಭಾಗದಲ್ಲಿ ಹೀಟ್‌ವೇಟ್‌ ಹರಿದಾಡುವುದನ್ನು  ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಇದುವರೆಗೆ ಭೂಮಿಯ ಮೇಲ್ಮೈ ಹಾಗೂ ಸಮುದ್ರದ ಮೇಲ್ಮೈಯ ಹೀಟ್‌ ವೇವ್‌ ಬಗ್ಗೆ ಅಧ್ಯಯನ ನಡಸಲಾಗುತ್ತಿತ್ತು. ಇದೀಗ ಸಮುದ್ರದ ತಳಭಾಗದಲ್ಲಿಯೂ ಈ ಅಲೆಗಳು ಹೆಚ್ಚುತ್ತಿರುವುದನ್ನು  ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ.  ಈ  ಅಲೆಗಳು ಜಗತ್ತಿನಾದ್ಯಂತ ಸಾಗರ ಪರಿಸರ ವ್ಯವಸ್ಥೆಗಳ  ಮೇಲೆ ಪ್ರಭಾವ ಬೀರುತ್ತಿವೆ. ಇದರ ಸಾಧಕ-ಬಾಧಕಗಳ ಬಗ್ಗೆಯೂ ಅಧ್ಯಯನ ನಡೆಸುತ್ತಿದ್ದಾರೆ.

ನ್ಯಾಷನಲ್ ಓಷಿಯಾನಿಕ್ ಅಂಡ್ ಅಟ್ಮಾಸ್ಫಿಯರಿಕ್ ಅಡ್ಮಿನಿಸ್ಟ್ರೇಷನ್ (NOAA) ಸಂಶೋಧಕರ ನೇತೃತ್ವದ ತಂಡದ ಅಧ್ಯಯನವು ಹೊಸ ಸಂಗತಿಗಳನ್ನು  ತಿಳಿಸಿದೆ. ನೇಚರ್ ಕಮ್ಯುನಿಕೇಷನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನವು ಈ  ಅಲೆಗಳ ಗುಣಲಕ್ಷಣಗಳನ್ನು ಮತ್ತು ಸಮುದ್ರ ಹಾಗೂ ಪ್ರಪಂಚದ ಮೇಲೆ ಬೀರುವ ಪ್ರಭಾವವನ್ನು ಮತ್ತಷ್ಟು ಅಧ್ಯಯನ ಮಾಡಲು ಪ್ರಯತ್ನ ಮಾಡುತ್ತಿದೆ.

ಸಮುದ್ರದ ಈ ಹೀಟ್‌ ವೇವ್‌ ಹೆಚ್ಚಿನ ತೀವ್ರತೆಯನ್ನು ಹೊಂದಿವೆ ಎಂದು ಅಧ್ಯಯನ ವರದಿ ಹೇಳಿದೆ. ಸಾಗರಗಳ ಆಳದಲ್ಲಿ 0.5 ಡಿಗ್ರಿಗಳಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣತೆ ಬದಲಾಗುತ್ತದೆ. ಕಳೆದ 100 ವರ್ಷಗಳಲ್ಲಿ ಸಾಗರವು ಸುಮಾರು 1.5 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿದೆ. ಜಾಗತಿಕ ತಾಪಮಾನದಿಂದಲೇ 90% ಹೆಚ್ಚುವರಿ ಉಷ್ಣತೆ ಸಾಗರವು ಸೆಳೆದುಕೊಂಡಿದೆ  ಎಂದು ಅಧ್ಯಯನವು ಹೇಳುತ್ತದೆ. ಹೀಗಾಗಿ ಕಳೆದ ಹತ್ತು ವರ್ಷಗಳಲ್ಲಿ ಸಮುದ್ರದ ಶಾಖದ ಅಲೆಗಳ ಆವರ್ತನವು ಸುಮಾರು 50% ರಷ್ಟು ಹೆಚ್ಚಾಗಿದೆ. ಈ  ಅಲೆಗಳು ಪ್ರಪಂಚದಾದ್ಯಂತದ ಸಾಗರ ಪರಿಸರ ವ್ಯವಸ್ಥೆಗಳ ಆರೋಗ್ಯದ ಮೇಲೆ  ಪ್ರಭಾವ ಬೀರಿವೆ. ಮೀನುಗಳು ಹಾಗೂ ಸಮುದ್ರ ಜೀವಿಗಳ ಮೇಲೆಯೂ ಪರಿಣಾಮ ಬೀರಲು ಆರಂಭವಾಗಿದೆ.

ಈ ಎಲ್ಲದರ ನಡುವೆಯೇ ಈಚೆಗೆ ವಾಯುಭಾರ ಕುಸಿತ, ವಿಪರೀತ ಮಳೆ, ಹವಾಮಾನ ಬದಲಾವಣೆಗಳು ಹೆಚ್ಚಾಗಲು ಆರಂಭವಾಗಿದೆ. ಈ ಎಲ್ಲದರ ಬಗ್ಗೆಯೂ ವಿಜ್ಞಾನಿಗಳು ಹೆಚ್ಚಿನ ಅಧ್ಯಯನ ನಡೆಸಲು ಆರಂಭಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

9 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

9 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago