ರೈತರೊಂದಿಗೆ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಂವಾದ | ಲಾಭದಾಯಕ ಕೃಷಿಗಾಗಿ “ಮಾದರಿ ತೋಟ” ರಚಿಸಲು ರೈತರ ಮನವಿ |

October 19, 2024
7:27 AM

ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು  ವಿವಿಧ ರಾಜ್ಯಗಳ ಮುಖಂಡರು ಮತ್ತು ರೈತರೊಂದಿಗೆ ಚರ್ಚೆ ನಡೆಸಿದರು.ಈ ಸಂದರ್ಭ ಕೃಷಿ ಲಾಭದಾಯಕವಾಗಿಸಲು ” ಮಾದರಿ ತೋಟ” ಸರ್ಕಾರ ರಚಿಸುವ ಮೂಲಕ ರೈತರಿಗೆ ಮಾಹಿತಿ ನೀಡಬೇಕು ಎಂದು ರೈತರು ಸಲಹೆ ನೀಡಿದರು.

ರೈತರು ಮತ್ತು ಕೃಷಿ ಸಂಸ್ಥೆಗಳೊಂದಿಗೆ  ಸಂವಾದದಲ್ಲಿ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರೈತರು ಸಲಹೆಗಳನ್ನು ನೀಡಿದರು. ಒಂದರಿಂದ ಎರಡೂವರೆ ಎಕರೆ ಭೂಮಿಯಲ್ಲಿಯೂ ಕೃಷಿಯನ್ನು ಲಾಭದಾಯಕವಾಗಿ ಮಾಡುವ ಮಾರ್ಗಗಳ ಕುರಿತು ಮಾಹಿತಿ ನೀಡುವ ಮಾದರಿ ಕೃಷಿಯನ್ನು ರಚಿಸಲು ರೈತರು ಸರ್ಕಾರಕ್ಕೆ ಸಲಹೆ ನೀಡಿದರು. ಇದೇ ವೇಳೆ ರೈತರು ಒಂದು ಎಕರೆ ಜಮೀನಿನಲ್ಲಿ ಲಾಭದಾಯಕ ಕೃಷಿ ಮಾಡುವ ಕೆಲವು ಉದಾಹರಣೆಗಳನ್ನುವಿವರಿಸಿದರು.

ಸಕಾಲದಲ್ಲಿ ನೀರು ಒದಗಿಸುವುದು, ರಸಗೊಬ್ಬರಗಳ ಬಳಕೆ, ಮಣ್ಣನ್ನು ಆರೋಗ್ಯಕರವಾಗಿಸುವುದು, ನೈಸರ್ಗಿಕ ವಿಕೋಪಗಳಿಂದಾಗುವ ತೊಂದರೆಗಳು, ಸಕ್ಕರೆ ಕಾರ್ಖಾನೆಗಳ ಮುಚ್ಚುವಿಕೆ ಮತ್ತು ಬೀದಿ ಪ್ರಾಣಿಗಳ ಸಮಸ್ಯೆಗಳು ಇತ್ಯಾದಿಗಳ ಬಗ್ಗೆ ಚರ್ಚಿಸಿದರು. ಇದೇ ವೇಳೆ ಸರ್ಕಾರ ಅಥವಾ ಇಲಾಖೆಗಳು ಸರಿಯಾದ ಮಾಹಿತಿಯನ್ನು ಕೃಷಿಕರಿಗೆ ನೀಡದೇ ಇದ್ದರೆ ಯಾರೋ ಮದ್ಯರ್ತಿಗಳು, ಕೆಲವು ನಕಲಿ ಕಂಪನಿಗಳು ರೈತರ ದಾರಿ ತಪ್ಪಿಸಿ ಗೊಬ್ಬರ ಮಾರಾಟ ಮಾಡುತ್ತವೆ ಎಂದೂ ಸಚಿವರು ಬಳಿ ಮನವಿ ಮಾಡಿಕೊಂಡರು. ಅದಕ್ಕಾಗಿ ವಿವಿಧ ಸಂಸ್ಥೆಗಳ ಮೂಲಕ ಕಾಲಕಾಲಕ್ಕೆ ಮಾಹಿತಿ ನೀಡುವ ಕೆಲಸ ಆಗಬೇಕು ಎಂದು ರೈತರು ಸಲಹೆ ನೀಡಿದರು. ಈ ಸಂದರ್ಭ ರಾಬಿ ಬೆಳೆಗಳ MSP ಹೆಚ್ಚಿಸುವ ಕುರಿತು ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror