ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು ವಿವಿಧ ರಾಜ್ಯಗಳ ಮುಖಂಡರು ಮತ್ತು ರೈತರೊಂದಿಗೆ ಚರ್ಚೆ ನಡೆಸಿದರು.ಈ ಸಂದರ್ಭ ಕೃಷಿ ಲಾಭದಾಯಕವಾಗಿಸಲು ” ಮಾದರಿ ತೋಟ” ಸರ್ಕಾರ ರಚಿಸುವ ಮೂಲಕ ರೈತರಿಗೆ ಮಾಹಿತಿ ನೀಡಬೇಕು ಎಂದು ರೈತರು ಸಲಹೆ ನೀಡಿದರು.
ರೈತರು ಮತ್ತು ಕೃಷಿ ಸಂಸ್ಥೆಗಳೊಂದಿಗೆ ಸಂವಾದದಲ್ಲಿ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರೈತರು ಸಲಹೆಗಳನ್ನು ನೀಡಿದರು. ಒಂದರಿಂದ ಎರಡೂವರೆ ಎಕರೆ ಭೂಮಿಯಲ್ಲಿಯೂ ಕೃಷಿಯನ್ನು ಲಾಭದಾಯಕವಾಗಿ ಮಾಡುವ ಮಾರ್ಗಗಳ ಕುರಿತು ಮಾಹಿತಿ ನೀಡುವ ಮಾದರಿ ಕೃಷಿಯನ್ನು ರಚಿಸಲು ರೈತರು ಸರ್ಕಾರಕ್ಕೆ ಸಲಹೆ ನೀಡಿದರು. ಇದೇ ವೇಳೆ ರೈತರು ಒಂದು ಎಕರೆ ಜಮೀನಿನಲ್ಲಿ ಲಾಭದಾಯಕ ಕೃಷಿ ಮಾಡುವ ಕೆಲವು ಉದಾಹರಣೆಗಳನ್ನುವಿವರಿಸಿದರು.
ಸಕಾಲದಲ್ಲಿ ನೀರು ಒದಗಿಸುವುದು, ರಸಗೊಬ್ಬರಗಳ ಬಳಕೆ, ಮಣ್ಣನ್ನು ಆರೋಗ್ಯಕರವಾಗಿಸುವುದು, ನೈಸರ್ಗಿಕ ವಿಕೋಪಗಳಿಂದಾಗುವ ತೊಂದರೆಗಳು, ಸಕ್ಕರೆ ಕಾರ್ಖಾನೆಗಳ ಮುಚ್ಚುವಿಕೆ ಮತ್ತು ಬೀದಿ ಪ್ರಾಣಿಗಳ ಸಮಸ್ಯೆಗಳು ಇತ್ಯಾದಿಗಳ ಬಗ್ಗೆ ಚರ್ಚಿಸಿದರು. ಇದೇ ವೇಳೆ ಸರ್ಕಾರ ಅಥವಾ ಇಲಾಖೆಗಳು ಸರಿಯಾದ ಮಾಹಿತಿಯನ್ನು ಕೃಷಿಕರಿಗೆ ನೀಡದೇ ಇದ್ದರೆ ಯಾರೋ ಮದ್ಯರ್ತಿಗಳು, ಕೆಲವು ನಕಲಿ ಕಂಪನಿಗಳು ರೈತರ ದಾರಿ ತಪ್ಪಿಸಿ ಗೊಬ್ಬರ ಮಾರಾಟ ಮಾಡುತ್ತವೆ ಎಂದೂ ಸಚಿವರು ಬಳಿ ಮನವಿ ಮಾಡಿಕೊಂಡರು. ಅದಕ್ಕಾಗಿ ವಿವಿಧ ಸಂಸ್ಥೆಗಳ ಮೂಲಕ ಕಾಲಕಾಲಕ್ಕೆ ಮಾಹಿತಿ ನೀಡುವ ಕೆಲಸ ಆಗಬೇಕು ಎಂದು ರೈತರು ಸಲಹೆ ನೀಡಿದರು. ಈ ಸಂದರ್ಭ ರಾಬಿ ಬೆಳೆಗಳ MSP ಹೆಚ್ಚಿಸುವ ಕುರಿತು ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರು.
ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್…
ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನಮ್ಮ ದೇಶದ ನ್ಯಾಯವಾದಿಗಳ ವಲಯದಲ್ಲಿಯೇ ವರ್ಮಾರಿಗೆ ವರ್ಗಾವಣೆ ಶಿಕ್ಷೆ ಮಾತ್ರ ನೀಡಿದ್ದು ಸಮಾಧಾನಕರವೆನ್ನಿಸಿರಲಿಲ್ಲ.…
"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…