ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು ವಿವಿಧ ರಾಜ್ಯಗಳ ಮುಖಂಡರು ಮತ್ತು ರೈತರೊಂದಿಗೆ ಚರ್ಚೆ ನಡೆಸಿದರು.ಈ ಸಂದರ್ಭ ಕೃಷಿ ಲಾಭದಾಯಕವಾಗಿಸಲು ” ಮಾದರಿ ತೋಟ” ಸರ್ಕಾರ ರಚಿಸುವ ಮೂಲಕ ರೈತರಿಗೆ ಮಾಹಿತಿ ನೀಡಬೇಕು ಎಂದು ರೈತರು ಸಲಹೆ ನೀಡಿದರು.
ರೈತರು ಮತ್ತು ಕೃಷಿ ಸಂಸ್ಥೆಗಳೊಂದಿಗೆ ಸಂವಾದದಲ್ಲಿ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರೈತರು ಸಲಹೆಗಳನ್ನು ನೀಡಿದರು. ಒಂದರಿಂದ ಎರಡೂವರೆ ಎಕರೆ ಭೂಮಿಯಲ್ಲಿಯೂ ಕೃಷಿಯನ್ನು ಲಾಭದಾಯಕವಾಗಿ ಮಾಡುವ ಮಾರ್ಗಗಳ ಕುರಿತು ಮಾಹಿತಿ ನೀಡುವ ಮಾದರಿ ಕೃಷಿಯನ್ನು ರಚಿಸಲು ರೈತರು ಸರ್ಕಾರಕ್ಕೆ ಸಲಹೆ ನೀಡಿದರು. ಇದೇ ವೇಳೆ ರೈತರು ಒಂದು ಎಕರೆ ಜಮೀನಿನಲ್ಲಿ ಲಾಭದಾಯಕ ಕೃಷಿ ಮಾಡುವ ಕೆಲವು ಉದಾಹರಣೆಗಳನ್ನುವಿವರಿಸಿದರು.
ಸಕಾಲದಲ್ಲಿ ನೀರು ಒದಗಿಸುವುದು, ರಸಗೊಬ್ಬರಗಳ ಬಳಕೆ, ಮಣ್ಣನ್ನು ಆರೋಗ್ಯಕರವಾಗಿಸುವುದು, ನೈಸರ್ಗಿಕ ವಿಕೋಪಗಳಿಂದಾಗುವ ತೊಂದರೆಗಳು, ಸಕ್ಕರೆ ಕಾರ್ಖಾನೆಗಳ ಮುಚ್ಚುವಿಕೆ ಮತ್ತು ಬೀದಿ ಪ್ರಾಣಿಗಳ ಸಮಸ್ಯೆಗಳು ಇತ್ಯಾದಿಗಳ ಬಗ್ಗೆ ಚರ್ಚಿಸಿದರು. ಇದೇ ವೇಳೆ ಸರ್ಕಾರ ಅಥವಾ ಇಲಾಖೆಗಳು ಸರಿಯಾದ ಮಾಹಿತಿಯನ್ನು ಕೃಷಿಕರಿಗೆ ನೀಡದೇ ಇದ್ದರೆ ಯಾರೋ ಮದ್ಯರ್ತಿಗಳು, ಕೆಲವು ನಕಲಿ ಕಂಪನಿಗಳು ರೈತರ ದಾರಿ ತಪ್ಪಿಸಿ ಗೊಬ್ಬರ ಮಾರಾಟ ಮಾಡುತ್ತವೆ ಎಂದೂ ಸಚಿವರು ಬಳಿ ಮನವಿ ಮಾಡಿಕೊಂಡರು. ಅದಕ್ಕಾಗಿ ವಿವಿಧ ಸಂಸ್ಥೆಗಳ ಮೂಲಕ ಕಾಲಕಾಲಕ್ಕೆ ಮಾಹಿತಿ ನೀಡುವ ಕೆಲಸ ಆಗಬೇಕು ಎಂದು ರೈತರು ಸಲಹೆ ನೀಡಿದರು. ಈ ಸಂದರ್ಭ ರಾಬಿ ಬೆಳೆಗಳ MSP ಹೆಚ್ಚಿಸುವ ಕುರಿತು ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…