ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು ವಿವಿಧ ರಾಜ್ಯಗಳ ಮುಖಂಡರು ಮತ್ತು ರೈತರೊಂದಿಗೆ ಚರ್ಚೆ ನಡೆಸಿದರು.ಈ ಸಂದರ್ಭ ಕೃಷಿ ಲಾಭದಾಯಕವಾಗಿಸಲು ” ಮಾದರಿ ತೋಟ” ಸರ್ಕಾರ ರಚಿಸುವ ಮೂಲಕ ರೈತರಿಗೆ ಮಾಹಿತಿ ನೀಡಬೇಕು ಎಂದು ರೈತರು ಸಲಹೆ ನೀಡಿದರು.
ರೈತರು ಮತ್ತು ಕೃಷಿ ಸಂಸ್ಥೆಗಳೊಂದಿಗೆ ಸಂವಾದದಲ್ಲಿ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರೈತರು ಸಲಹೆಗಳನ್ನು ನೀಡಿದರು. ಒಂದರಿಂದ ಎರಡೂವರೆ ಎಕರೆ ಭೂಮಿಯಲ್ಲಿಯೂ ಕೃಷಿಯನ್ನು ಲಾಭದಾಯಕವಾಗಿ ಮಾಡುವ ಮಾರ್ಗಗಳ ಕುರಿತು ಮಾಹಿತಿ ನೀಡುವ ಮಾದರಿ ಕೃಷಿಯನ್ನು ರಚಿಸಲು ರೈತರು ಸರ್ಕಾರಕ್ಕೆ ಸಲಹೆ ನೀಡಿದರು. ಇದೇ ವೇಳೆ ರೈತರು ಒಂದು ಎಕರೆ ಜಮೀನಿನಲ್ಲಿ ಲಾಭದಾಯಕ ಕೃಷಿ ಮಾಡುವ ಕೆಲವು ಉದಾಹರಣೆಗಳನ್ನುವಿವರಿಸಿದರು.
ಸಕಾಲದಲ್ಲಿ ನೀರು ಒದಗಿಸುವುದು, ರಸಗೊಬ್ಬರಗಳ ಬಳಕೆ, ಮಣ್ಣನ್ನು ಆರೋಗ್ಯಕರವಾಗಿಸುವುದು, ನೈಸರ್ಗಿಕ ವಿಕೋಪಗಳಿಂದಾಗುವ ತೊಂದರೆಗಳು, ಸಕ್ಕರೆ ಕಾರ್ಖಾನೆಗಳ ಮುಚ್ಚುವಿಕೆ ಮತ್ತು ಬೀದಿ ಪ್ರಾಣಿಗಳ ಸಮಸ್ಯೆಗಳು ಇತ್ಯಾದಿಗಳ ಬಗ್ಗೆ ಚರ್ಚಿಸಿದರು. ಇದೇ ವೇಳೆ ಸರ್ಕಾರ ಅಥವಾ ಇಲಾಖೆಗಳು ಸರಿಯಾದ ಮಾಹಿತಿಯನ್ನು ಕೃಷಿಕರಿಗೆ ನೀಡದೇ ಇದ್ದರೆ ಯಾರೋ ಮದ್ಯರ್ತಿಗಳು, ಕೆಲವು ನಕಲಿ ಕಂಪನಿಗಳು ರೈತರ ದಾರಿ ತಪ್ಪಿಸಿ ಗೊಬ್ಬರ ಮಾರಾಟ ಮಾಡುತ್ತವೆ ಎಂದೂ ಸಚಿವರು ಬಳಿ ಮನವಿ ಮಾಡಿಕೊಂಡರು. ಅದಕ್ಕಾಗಿ ವಿವಿಧ ಸಂಸ್ಥೆಗಳ ಮೂಲಕ ಕಾಲಕಾಲಕ್ಕೆ ಮಾಹಿತಿ ನೀಡುವ ಕೆಲಸ ಆಗಬೇಕು ಎಂದು ರೈತರು ಸಲಹೆ ನೀಡಿದರು. ಈ ಸಂದರ್ಭ ರಾಬಿ ಬೆಳೆಗಳ MSP ಹೆಚ್ಚಿಸುವ ಕುರಿತು ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರು.
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…