Advertisement
MIRROR FOCUS

ರೈತರೊಂದಿಗೆ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಂವಾದ | ಲಾಭದಾಯಕ ಕೃಷಿಗಾಗಿ “ಮಾದರಿ ತೋಟ” ರಚಿಸಲು ರೈತರ ಮನವಿ |

Share

ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು  ವಿವಿಧ ರಾಜ್ಯಗಳ ಮುಖಂಡರು ಮತ್ತು ರೈತರೊಂದಿಗೆ ಚರ್ಚೆ ನಡೆಸಿದರು.ಈ ಸಂದರ್ಭ ಕೃಷಿ ಲಾಭದಾಯಕವಾಗಿಸಲು ” ಮಾದರಿ ತೋಟ” ಸರ್ಕಾರ ರಚಿಸುವ ಮೂಲಕ ರೈತರಿಗೆ ಮಾಹಿತಿ ನೀಡಬೇಕು ಎಂದು ರೈತರು ಸಲಹೆ ನೀಡಿದರು.

ರೈತರು ಮತ್ತು ಕೃಷಿ ಸಂಸ್ಥೆಗಳೊಂದಿಗೆ  ಸಂವಾದದಲ್ಲಿ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರೈತರು ಸಲಹೆಗಳನ್ನು ನೀಡಿದರು. ಒಂದರಿಂದ ಎರಡೂವರೆ ಎಕರೆ ಭೂಮಿಯಲ್ಲಿಯೂ ಕೃಷಿಯನ್ನು ಲಾಭದಾಯಕವಾಗಿ ಮಾಡುವ ಮಾರ್ಗಗಳ ಕುರಿತು ಮಾಹಿತಿ ನೀಡುವ ಮಾದರಿ ಕೃಷಿಯನ್ನು ರಚಿಸಲು ರೈತರು ಸರ್ಕಾರಕ್ಕೆ ಸಲಹೆ ನೀಡಿದರು. ಇದೇ ವೇಳೆ ರೈತರು ಒಂದು ಎಕರೆ ಜಮೀನಿನಲ್ಲಿ ಲಾಭದಾಯಕ ಕೃಷಿ ಮಾಡುವ ಕೆಲವು ಉದಾಹರಣೆಗಳನ್ನುವಿವರಿಸಿದರು.

ಸಕಾಲದಲ್ಲಿ ನೀರು ಒದಗಿಸುವುದು, ರಸಗೊಬ್ಬರಗಳ ಬಳಕೆ, ಮಣ್ಣನ್ನು ಆರೋಗ್ಯಕರವಾಗಿಸುವುದು, ನೈಸರ್ಗಿಕ ವಿಕೋಪಗಳಿಂದಾಗುವ ತೊಂದರೆಗಳು, ಸಕ್ಕರೆ ಕಾರ್ಖಾನೆಗಳ ಮುಚ್ಚುವಿಕೆ ಮತ್ತು ಬೀದಿ ಪ್ರಾಣಿಗಳ ಸಮಸ್ಯೆಗಳು ಇತ್ಯಾದಿಗಳ ಬಗ್ಗೆ ಚರ್ಚಿಸಿದರು. ಇದೇ ವೇಳೆ ಸರ್ಕಾರ ಅಥವಾ ಇಲಾಖೆಗಳು ಸರಿಯಾದ ಮಾಹಿತಿಯನ್ನು ಕೃಷಿಕರಿಗೆ ನೀಡದೇ ಇದ್ದರೆ ಯಾರೋ ಮದ್ಯರ್ತಿಗಳು, ಕೆಲವು ನಕಲಿ ಕಂಪನಿಗಳು ರೈತರ ದಾರಿ ತಪ್ಪಿಸಿ ಗೊಬ್ಬರ ಮಾರಾಟ ಮಾಡುತ್ತವೆ ಎಂದೂ ಸಚಿವರು ಬಳಿ ಮನವಿ ಮಾಡಿಕೊಂಡರು. ಅದಕ್ಕಾಗಿ ವಿವಿಧ ಸಂಸ್ಥೆಗಳ ಮೂಲಕ ಕಾಲಕಾಲಕ್ಕೆ ಮಾಹಿತಿ ನೀಡುವ ಕೆಲಸ ಆಗಬೇಕು ಎಂದು ರೈತರು ಸಲಹೆ ನೀಡಿದರು. ಈ ಸಂದರ್ಭ ರಾಬಿ ಬೆಳೆಗಳ MSP ಹೆಚ್ಚಿಸುವ ಕುರಿತು ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 hour ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 hour ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

8 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

10 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

17 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

20 hours ago