ಹಣದ ಲಭ್ಯತೆ ಆಧಾರಿಸಿ ಎಲ್ಲಾ ರೈತರಿಗೆ 5 ಲಕ್ಷ ರೂಪಾಯಿ ಬಡ್ಡಿರಹಿತ ಸಾಲಸೌಲಭ್ಯ

March 20, 2025
7:19 AM
2023-24 ಸಾಲಿನಲ್ಲಿ 6,744 ರೈತರಿಗೆ 290.51 ಕೋಟಿ ರೂಪಾಯಿ ಹಾಗೂ  2024-25 ಸಾಲಿನಲ್ಲಿ ಫೆಬ್ರವರಿವರೆಗೆ 13,689 ರೈತರಿಗೆ 589.12 ಕೋಟಿ ರೂಪಾಯಿ ಮೊತ್ತದ ಸಾಲ ರೈತರಿಗೆ ವಿತರಿಸಲಾಗಿದೆ.

ಮುಂಬರುವ ದಿನಗಳಲ್ಲಿ ಹಣದ ಲಭ್ಯತೆ ಆಧಾರಿಸಿ ಎಲ್ಲಾ ರೈತರಿಗೆ ಮೂರು ಲಕ್ಷದಿಂದ 5 ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ, ಹೇಳಿದ್ದಾರೆ.………ಮುಂದೆ ಓದಿ……..

Advertisement

ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸದ್ಯ ಅರ್ಹ ರೈತರಿಗೆ ಮಾತ್ರ ಈ ಸೌಲಭ್ಯ ದೊರೆಯುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ರೈತರಿಗೂ ದೊರಕಿಸಲಾಗುವುದು ಎಂದು ತಿಳಿಸಿದರು.  ‌2023-24ನೇ ಸಾಲಿನ ಆಯವ್ಯಯ ಮಂಡನೆ ಸಂದರ್ಭದಲ್ಲಿ ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ ಬೆಳೆ ಸಾಲದ ಮಿತಿಯನ್ನು 3  ಲಕ್ಷದಿಂದ 5.00 ಲಕ್ಷ ರೂಪಾಯಿಗೆ ಏರಿಸಲಾಗಿದ್ದು, ಈ ಮಿತಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು 2023-24 ಸಾಲಿನಲ್ಲಿ 6,744 ರೈತರಿಗೆ 290.51 ಕೋಟಿ ರೂಪಾಯಿ ಹಾಗೂ  2024-25 ಸಾಲಿನಲ್ಲಿ ಫೆಬ್ರವರಿವರೆಗೆ 13,689 ರೈತರಿಗೆ 589.12 ಕೋಟಿ ರೂಪಾಯಿ ಮೊತ್ತದ ಸಾಲ ವಿತರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದ 10 ಕೃಷಿ ವಲಯಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ತಜ್ಞರ ಸಮಿತಿಯಲ್ಲಿ ಪ್ರತಿ ಬೆಳೆಗೆ ನಿಗದಿಪಡಿಸಿದ ಸ್ಕೆಲ್ ಆಫ್ ಫೈನಾನ್ಸ್ ಮಿತಿ, ರೈತರು ಹೊಂದಿರುವ ಭೂ ಹಿಡುವಳಿ ಹಾಗೂ ಬೆಳೆಯುವ ಬೆಳೆ ಆಧರಿಸಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಪ್ರತಿ ರೈತರಿಗೆ ಗರಿಷ್ಠ ಸಾಲದ ಮಿತಿಯನ್ನು ನಿಗದಿಪಡಿಸಿದ್ದು ಇದರನ್ವಯ 1,73,449 ರೈತರು 5.00 ಲಕ್ಷಗಳವರೆಗಿನ ಸಾಲ ಪಡೆಯಲು ಅರ್ಹರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.ಇದರಲ್ಲಿ ಫೆಬ್ರವರಿವರೆಗೆ 13,689 ರೈತರಿಗೆ ರೂ.589.12 ಕೋಟಿ ಸಾಲವನ್ನು ವಿತರಣೆ ಮಾಡಲಾಗಿದೆ.ಕೆಲವು ಕಾರಣಗಳಿಂದ ಸಾಲ ವಿತರಣೆ ಮಾಡಲು ಸಮಸ್ಯೆಯಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.

ಮುಂದೆ ರೈತರ ಬೇಡಿಕೆ, ನಬಾರ್ಡ್ ಮತ್ತು ಡಿಸಿಸಿ ಬ್ಯಾಂಕುಗಳ ಬಂಡವಾಳ ಆಧರಿಸಿ ಪ್ರತಿ ವರ್ಷ ಶೇ.10 ರಿಂದ ಶೇ.20 ರಷ್ಟು ಪ್ರಮಾಣದಲ್ಲಿ ಮಾತ್ರ ಹೆಚ್ಚುವರಿ ಸಾಲವನ್ನು ವಿತರಿಸಲು ಸಹಕಾರ ಸಂಘಗಳು ಸಶಕ್ತವಾಗಿರುತ್ತವೆ. ಇದರ ಆಧಾರದ ಮೇಲೆ 2024-25ನೇ ಸಾಲಿಗೆ 35.10 ಲಕ್ಷ ರೈತರಿಗೆ 25,000 ಕೋಟಿ ರೂಪಾಯಿ ವಿತರಿಸುವ ಗುರಿ ಹೊಂದಲಾಗಿದ್ದು, ಈ ಮಿತಿಯನ್ನು ವರ್ಷದಲ್ಲಿ ತಲುಪಲು ಕ್ರಮವಹಿಸಲಾಗಿದೆ ಎಂದು ಪ್ರತಾಪ್‌ ಸಿಂಹ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ
July 16, 2025
7:17 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group