ಕಾಫಿ ಬೆಳೆಗಾರರ ಹಿತ ಕಾಪಾಡಬೇಕು | ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿ – ಕೋಟ ಶ್ರೀನಿವಾಸ ಪೂಜಾರಿ

October 22, 2024
6:10 AM

ಕಾಫಿ ಬೆಳೆಗಾರರು ಮತ್ತು ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳೊಂದಿಗೆ  ಸಂಸದ ಕೋಟಾ  ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರಿನಲ್ಲಿ   ಸಭೆ ನಡೆಸಿದರು.ಅಧಿಕಾರಿಗಳು  ಜನರ ಪರವಾಗಿ ಕೆಲಸ ಮಾಡುವ ಮೂಲಕ  ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭ ಕಾಫಿ ಬೆಳೆಗಾರರು ತಮ್ಮ ಸಂಕಷ್ಟವನ್ನು ಮುಂದಿಟ್ಟರು. ಕಾಫಿ ಬೆಳೆಗಾರರು ಬ್ಯಾಂಕಿನಿಂದ ಪಡೆದ ಸಾಲ ವಸೂಲಾತಿ ಕುರಿತು  ಇನ್ನಿತರ ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡರು.ಕಾಫಿ ಬೆಳೆಗಾರರಿಗೆ ಸಾಲ ವಸೂಲಾತಿಯಲ್ಲಿ ಬ್ಯಾಂಕ್ ಅಧಿಕಾರಿಗಳು ನಡೆದುಕೊಳ್ಳುವ  ರೀತಿ  ಸರಿಯಲ್ಲ ಎಂದು ರೈತರ ಅಸಮಾಧಾನ ವ್ಯಕ್ತಪಡಿಸಿದರು. ಬ್ಯಾಂಕುಗಳು ಕಾಫಿ ಬೆಳೆಗಾರರ ಹಿತ ಕಾಪಾಡಲು ಕೆಲಸ ಮಾಡಬೇಕು ಎಂದು ರೈತರು ಮನವಿ ಮಾಡಿದರು.

ಈ ಸಂದರ್ಭ ಮಾತನಾಡಿದ ಸಿ ಟಿ ರವಿ ಕಾಫಿ ಬೆಳೆಗಾರರ ಮೇಲೆ ಇರುವ ಸಾಲ ವಸೂಲಾತಿಯ ಒತ್ತಡವನ್ನು ಹಿಂಪಡೆಯಲು ಉನ್ನತ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಈ ವೇಳೆ  ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ  ಪ್ರಾಣೇಶ್, ಶಾಸಕ ಎಚ್. ಡಿ. ತಮ್ಮಯ್ಯ,  ವಿಧಾನ ಪರಿಷತ್ ಸದಸ್ಯ  ಸಿ.ಟಿ ರವಿ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಕಾಫಿ ಬೋರ್ಡ್ ಅಧ್ಯಕ್ಷ ದಿನೇಶ್ ಅಧಿಕಾರಿಗಳು ಮತ್ತು ರೈತರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ
2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ
March 3, 2026
9:53 AM
by: ಮಿರರ್‌ ಡೆಸ್ಕ್
ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ
March 3, 2026
9:37 AM
by: ಮಿರರ್‌ ಡೆಸ್ಕ್
ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ
March 3, 2026
9:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror