ಕಾಫಿ ಬೆಳೆಗಾರರು ಮತ್ತು ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರಿನಲ್ಲಿ ಸಭೆ ನಡೆಸಿದರು.ಅಧಿಕಾರಿಗಳು ಜನರ ಪರವಾಗಿ ಕೆಲಸ ಮಾಡುವ ಮೂಲಕ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭ ಕಾಫಿ ಬೆಳೆಗಾರರು ತಮ್ಮ ಸಂಕಷ್ಟವನ್ನು ಮುಂದಿಟ್ಟರು. ಕಾಫಿ ಬೆಳೆಗಾರರು ಬ್ಯಾಂಕಿನಿಂದ ಪಡೆದ ಸಾಲ ವಸೂಲಾತಿ ಕುರಿತು ಇನ್ನಿತರ ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡರು.ಕಾಫಿ ಬೆಳೆಗಾರರಿಗೆ ಸಾಲ ವಸೂಲಾತಿಯಲ್ಲಿ ಬ್ಯಾಂಕ್ ಅಧಿಕಾರಿಗಳು ನಡೆದುಕೊಳ್ಳುವ ರೀತಿ ಸರಿಯಲ್ಲ ಎಂದು ರೈತರ ಅಸಮಾಧಾನ ವ್ಯಕ್ತಪಡಿಸಿದರು. ಬ್ಯಾಂಕುಗಳು ಕಾಫಿ ಬೆಳೆಗಾರರ ಹಿತ ಕಾಪಾಡಲು ಕೆಲಸ ಮಾಡಬೇಕು ಎಂದು ರೈತರು ಮನವಿ ಮಾಡಿದರು.
ಈ ಸಂದರ್ಭ ಮಾತನಾಡಿದ ಸಿ ಟಿ ರವಿ ಕಾಫಿ ಬೆಳೆಗಾರರ ಮೇಲೆ ಇರುವ ಸಾಲ ವಸೂಲಾತಿಯ ಒತ್ತಡವನ್ನು ಹಿಂಪಡೆಯಲು ಉನ್ನತ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಈ ವೇಳೆ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ ಪ್ರಾಣೇಶ್, ಶಾಸಕ ಎಚ್. ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಕಾಫಿ ಬೋರ್ಡ್ ಅಧ್ಯಕ್ಷ ದಿನೇಶ್ ಅಧಿಕಾರಿಗಳು ಮತ್ತು ರೈತರು ಉಪಸ್ಥಿತರಿದ್ದರು.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…