ಕಾಫಿ ಬೆಳೆಗಾರರು ಮತ್ತು ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರಿನಲ್ಲಿ ಸಭೆ ನಡೆಸಿದರು.ಅಧಿಕಾರಿಗಳು ಜನರ ಪರವಾಗಿ ಕೆಲಸ ಮಾಡುವ ಮೂಲಕ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭ ಕಾಫಿ ಬೆಳೆಗಾರರು ತಮ್ಮ ಸಂಕಷ್ಟವನ್ನು ಮುಂದಿಟ್ಟರು. ಕಾಫಿ ಬೆಳೆಗಾರರು ಬ್ಯಾಂಕಿನಿಂದ ಪಡೆದ ಸಾಲ ವಸೂಲಾತಿ ಕುರಿತು ಇನ್ನಿತರ ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡರು.ಕಾಫಿ ಬೆಳೆಗಾರರಿಗೆ ಸಾಲ ವಸೂಲಾತಿಯಲ್ಲಿ ಬ್ಯಾಂಕ್ ಅಧಿಕಾರಿಗಳು ನಡೆದುಕೊಳ್ಳುವ ರೀತಿ ಸರಿಯಲ್ಲ ಎಂದು ರೈತರ ಅಸಮಾಧಾನ ವ್ಯಕ್ತಪಡಿಸಿದರು. ಬ್ಯಾಂಕುಗಳು ಕಾಫಿ ಬೆಳೆಗಾರರ ಹಿತ ಕಾಪಾಡಲು ಕೆಲಸ ಮಾಡಬೇಕು ಎಂದು ರೈತರು ಮನವಿ ಮಾಡಿದರು.
ಈ ಸಂದರ್ಭ ಮಾತನಾಡಿದ ಸಿ ಟಿ ರವಿ ಕಾಫಿ ಬೆಳೆಗಾರರ ಮೇಲೆ ಇರುವ ಸಾಲ ವಸೂಲಾತಿಯ ಒತ್ತಡವನ್ನು ಹಿಂಪಡೆಯಲು ಉನ್ನತ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಈ ವೇಳೆ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ ಪ್ರಾಣೇಶ್, ಶಾಸಕ ಎಚ್. ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಕಾಫಿ ಬೋರ್ಡ್ ಅಧ್ಯಕ್ಷ ದಿನೇಶ್ ಅಧಿಕಾರಿಗಳು ಮತ್ತು ರೈತರು ಉಪಸ್ಥಿತರಿದ್ದರು.
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…