ಕಾಫಿ ಬೆಳೆಗಾರರು ಮತ್ತು ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರಿನಲ್ಲಿ ಸಭೆ ನಡೆಸಿದರು.ಅಧಿಕಾರಿಗಳು ಜನರ ಪರವಾಗಿ ಕೆಲಸ ಮಾಡುವ ಮೂಲಕ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭ ಕಾಫಿ ಬೆಳೆಗಾರರು ತಮ್ಮ ಸಂಕಷ್ಟವನ್ನು ಮುಂದಿಟ್ಟರು. ಕಾಫಿ ಬೆಳೆಗಾರರು ಬ್ಯಾಂಕಿನಿಂದ ಪಡೆದ ಸಾಲ ವಸೂಲಾತಿ ಕುರಿತು ಇನ್ನಿತರ ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡರು.ಕಾಫಿ ಬೆಳೆಗಾರರಿಗೆ ಸಾಲ ವಸೂಲಾತಿಯಲ್ಲಿ ಬ್ಯಾಂಕ್ ಅಧಿಕಾರಿಗಳು ನಡೆದುಕೊಳ್ಳುವ ರೀತಿ ಸರಿಯಲ್ಲ ಎಂದು ರೈತರ ಅಸಮಾಧಾನ ವ್ಯಕ್ತಪಡಿಸಿದರು. ಬ್ಯಾಂಕುಗಳು ಕಾಫಿ ಬೆಳೆಗಾರರ ಹಿತ ಕಾಪಾಡಲು ಕೆಲಸ ಮಾಡಬೇಕು ಎಂದು ರೈತರು ಮನವಿ ಮಾಡಿದರು.
ಈ ಸಂದರ್ಭ ಮಾತನಾಡಿದ ಸಿ ಟಿ ರವಿ ಕಾಫಿ ಬೆಳೆಗಾರರ ಮೇಲೆ ಇರುವ ಸಾಲ ವಸೂಲಾತಿಯ ಒತ್ತಡವನ್ನು ಹಿಂಪಡೆಯಲು ಉನ್ನತ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಈ ವೇಳೆ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ ಪ್ರಾಣೇಶ್, ಶಾಸಕ ಎಚ್. ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಕಾಫಿ ಬೋರ್ಡ್ ಅಧ್ಯಕ್ಷ ದಿನೇಶ್ ಅಧಿಕಾರಿಗಳು ಮತ್ತು ರೈತರು ಉಪಸ್ಥಿತರಿದ್ದರು.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…