ಕಾಫಿ ಬೆಳೆಗಾರರು ಮತ್ತು ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರಿನಲ್ಲಿ ಸಭೆ ನಡೆಸಿದರು.ಅಧಿಕಾರಿಗಳು ಜನರ ಪರವಾಗಿ ಕೆಲಸ ಮಾಡುವ ಮೂಲಕ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭ ಕಾಫಿ ಬೆಳೆಗಾರರು ತಮ್ಮ ಸಂಕಷ್ಟವನ್ನು ಮುಂದಿಟ್ಟರು. ಕಾಫಿ ಬೆಳೆಗಾರರು ಬ್ಯಾಂಕಿನಿಂದ ಪಡೆದ ಸಾಲ ವಸೂಲಾತಿ ಕುರಿತು ಇನ್ನಿತರ ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡರು.ಕಾಫಿ ಬೆಳೆಗಾರರಿಗೆ ಸಾಲ ವಸೂಲಾತಿಯಲ್ಲಿ ಬ್ಯಾಂಕ್ ಅಧಿಕಾರಿಗಳು ನಡೆದುಕೊಳ್ಳುವ ರೀತಿ ಸರಿಯಲ್ಲ ಎಂದು ರೈತರ ಅಸಮಾಧಾನ ವ್ಯಕ್ತಪಡಿಸಿದರು. ಬ್ಯಾಂಕುಗಳು ಕಾಫಿ ಬೆಳೆಗಾರರ ಹಿತ ಕಾಪಾಡಲು ಕೆಲಸ ಮಾಡಬೇಕು ಎಂದು ರೈತರು ಮನವಿ ಮಾಡಿದರು.
ಈ ಸಂದರ್ಭ ಮಾತನಾಡಿದ ಸಿ ಟಿ ರವಿ ಕಾಫಿ ಬೆಳೆಗಾರರ ಮೇಲೆ ಇರುವ ಸಾಲ ವಸೂಲಾತಿಯ ಒತ್ತಡವನ್ನು ಹಿಂಪಡೆಯಲು ಉನ್ನತ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಈ ವೇಳೆ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ ಪ್ರಾಣೇಶ್, ಶಾಸಕ ಎಚ್. ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಕಾಫಿ ಬೋರ್ಡ್ ಅಧ್ಯಕ್ಷ ದಿನೇಶ್ ಅಧಿಕಾರಿಗಳು ಮತ್ತು ರೈತರು ಉಪಸ್ಥಿತರಿದ್ದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…