ಕಾಫಿ ಬೆಳೆಗಾರರು ಮತ್ತು ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರಿನಲ್ಲಿ ಸಭೆ ನಡೆಸಿದರು.ಅಧಿಕಾರಿಗಳು ಜನರ ಪರವಾಗಿ ಕೆಲಸ ಮಾಡುವ ಮೂಲಕ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭ ಕಾಫಿ ಬೆಳೆಗಾರರು ತಮ್ಮ ಸಂಕಷ್ಟವನ್ನು ಮುಂದಿಟ್ಟರು. ಕಾಫಿ ಬೆಳೆಗಾರರು ಬ್ಯಾಂಕಿನಿಂದ ಪಡೆದ ಸಾಲ ವಸೂಲಾತಿ ಕುರಿತು ಇನ್ನಿತರ ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡರು.ಕಾಫಿ ಬೆಳೆಗಾರರಿಗೆ ಸಾಲ ವಸೂಲಾತಿಯಲ್ಲಿ ಬ್ಯಾಂಕ್ ಅಧಿಕಾರಿಗಳು ನಡೆದುಕೊಳ್ಳುವ ರೀತಿ ಸರಿಯಲ್ಲ ಎಂದು ರೈತರ ಅಸಮಾಧಾನ ವ್ಯಕ್ತಪಡಿಸಿದರು. ಬ್ಯಾಂಕುಗಳು ಕಾಫಿ ಬೆಳೆಗಾರರ ಹಿತ ಕಾಪಾಡಲು ಕೆಲಸ ಮಾಡಬೇಕು ಎಂದು ರೈತರು ಮನವಿ ಮಾಡಿದರು.
ಈ ಸಂದರ್ಭ ಮಾತನಾಡಿದ ಸಿ ಟಿ ರವಿ ಕಾಫಿ ಬೆಳೆಗಾರರ ಮೇಲೆ ಇರುವ ಸಾಲ ವಸೂಲಾತಿಯ ಒತ್ತಡವನ್ನು ಹಿಂಪಡೆಯಲು ಉನ್ನತ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಈ ವೇಳೆ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ ಪ್ರಾಣೇಶ್, ಶಾಸಕ ಎಚ್. ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಕಾಫಿ ಬೋರ್ಡ್ ಅಧ್ಯಕ್ಷ ದಿನೇಶ್ ಅಧಿಕಾರಿಗಳು ಮತ್ತು ರೈತರು ಉಪಸ್ಥಿತರಿದ್ದರು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…