ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ | ಧನ್ವಂತರಿ ಜಯಂತಿ | ಆರೋಗ್ಯಕ್ಕಾಗಿ ಆಯುರ್ವೇದ

November 10, 2023
11:10 AM
ಇಂದು ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ ಹಾಗೂ ಧನ್ವಂತರಿ ಜಯಂತಿ.

ಎಲ್ಲರಿಗೂ 8 ನೇ ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ( International Ayurveda Day) ಹಾಗೂ ಧನ್ವಂತರಿ ಜಯಂತಿಯ(dhanvantari jayanti) ಹಾರ್ದಿಕ ಶುಭಾಶಯಗಳು. ಆಯುರ್ವೇದವು(Aayurveda) 3,000 ವರ್ಷಗಳಿಗೂ ಹಳೆಯದಾದ ಭಾರತದಲ್ಲಿ(Bharat) ಹುಟ್ಟಿದ ಔಷಧ ಮತ್ತು ಚಿಕಿತ್ಸಾ ಪದ್ಧತಿ(Medicine and therapy)ಯಾಗಿದೆ. ನೈಸರ್ಗಿಕ ಚಿಕಿತ್ಸಾ ಪದ್ಧತಿ ಆಗಿದ್ದು ಯಾವುದೇ ಅಡ್ಡ ಪರಿಣಾಮಗಳಿಂದ ಮುಕ್ತವಾಗಿರುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಆರೋಗ್(Health)ಯ ಹಾಗೂ ದೀರ್ಘ ಆಯಸ್ಸು(Long life) ಪಡೆಯುವುದು ಹೇಗೆ ಎಂಬುದನ್ನು ಹೇಳುವುದೇ ಆಯುರ್ವೇದದ ಮೂಲ ಉದ್ದೇಶ.

Advertisement
Advertisement

ಹಿಂದೂ ಸಂಪ್ರದಾಯಕ್ಕೆ ಹೊಂದಿಕೊಂಡಂತಿರುವ ಈ ಆಯುರ್ವೇದ ಚಿಕಿತ್ಸೆ ಪ್ರಾಚೀನ ಭಾರತದಿಂದ ಬೆಳೆದು ಬಂದಿದೆ. ಆಯುರ್ವೇದ ಎಂಬುವುದು ಜೀವ ವಿಜ್ಞಾನ ನಮ್ಮ ಹಿರಿಯರ, ಋಷಿಮುನಿಗಳ ಸಾವಿರಾರು ವರ್ಷಗಳ ಅನ್ವೇಷಣೆಯ ಫಲ ಇದಾಗಿದೆ. ಮಾನವನ ಶರೀರ, ಇಂದ್ರಿಯ, ಮನಸ್ಸು ಹಾಗೂ ಆತ್ಮ ಈ ನಾಲ್ಕು ಭಾಗಗಳು ಸಮತೋಲನದಲ್ಲಿರುವುದೇ ಸ್ವಾಸ್ಥ್ಯ /ಆರೋಗ್ಯ ಎಂಬುದಾಗಿ ಹೇಳಲಾಗುತ್ತದೆ.

Advertisement

ಸ್ವಸ್ಥಸ್ಯ ಸ್ವಾಸ್ತ್ಯ ರಕ್ಷಣಂ ಆತುರಸ್ಯ ವಿಕಾರ ಪ್ರಶಮನo  ರೋಗಬಾರದ ಹಾಗೆ ಮುನ್ನೆಚ್ಚರಿಕೆಯಿಂದ ಇರಲು ಬೇಕಾದ ಸುಲಭೋಪಾಯಗಳನ್ನು ತಿಳಿಸುವುದು ಹಾಗೂ ರೋಗ ಬಂದಾಗ ಅದರ ಮೂಲ ಕಾರಣವನ್ನು ತಿಳಿದು ನಿವಾರಣೋಪಾಯವನ್ನು ತಿಳಿಸುವುದೇ ಆಯುರ್ವೇದದ ಮೂಲ ಉದ್ದೇಶ.

ಚತುರ್ವೇದಗಳಲ್ಲಿ ಒಂದಾದ ಅಥರ್ವ ವೇದದಲ್ಲಿ ಆಯುರ್ವೇದದ ಬಗ್ಗೆ ಅತ್ಯದ್ಭುತ ಹಾಗೂ ವಿಚಾರಪೂರಿತ ವಿವರಗಳನ್ನು ವರ್ಣಿಸಲಾಗಿದೆ. ಮೊಟ್ಟಮೊದಲಾಗಿ ಆಯುರ್ವೇದವನ್ನು ಜಗತ್ತಿಗೆ ಕೊಟ್ಟವರು ಶ್ರೀ ಧನ್ವಂತರಿ ಎಂಬ ದಿವ್ಯತೇಜಸ್ವಿ ಹಾಗೂ ದೇವಪುರುಷ ಎಂಬುದಾಗಿ ತಿಳಿದು ಬಂದಿದೆ.. ಆಯುರ್ವೇದದ ಆದಿದೇವತೆ ಎಂದು ಪೂಜಿಸಲ್ಪಡುವ ಶ್ರೀ ಧನ್ವಂತರಿ ಜಯಂತಿಯಂದು ಆಯುರ್ವೇದ ದಿನಾಚರಣೆಯನ್ನಾಗಿ ಪ್ರತಿ ವರ್ಷವೂ ಆಚರಿಸಲಾಗುತ್ತದೆ. ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಪಂಚಕರ್ಮ ಚಿಕಿತ್ಸೆ,. ದಿನಾಚರ್ಯ,ಪಥ್ಯ ಆಹಾರ ವಿಹಾರ, ಯೋಗಾಸನ, ವ್ಯಾಯಾಮ, ನೈಸರ್ಗಿಕ ಗಿಡ ಮೂಲಿಕೆಗಳಿಂದ ತಯಾರಿಸಿದ ಔಷಧಿಗಳ ಬಳಕೆ ಇವುಗಳನ್ನು ವಿವರವಾಗಿ ತಿಳಿಸಲಾಗಿದೆ.

Advertisement

ಪ್ರಾಚೀನ ಭಾರತದಿಂದ ಬೆಳೆದು ಬಂದ ಈ ಆಯುರ್ವೇದ ವೈದ್ಯ ಪದ್ಧತಿಯನ್ನು ತಾವೆಲ್ಲರೂ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಲಿ. ಭಗವಾನ್ ಶ್ರೀ ಧನ್ವಂತರಿಯು ಎಲ್ಲರಿಗೂ ಉತ್ತಮವಾದ ಆರೋಗ್ಯವನ್ನು ನೀಡಲಿ ಎಂದು ಶುಭ ಹಾರೈಸುವ…

ಬರಹ :
ಡಾ. ಜ್ಯೋತಿ ಕೆ BAMS MD, ಲಕ್ಷ್ಮೀ ಕ್ಲಿನಿಕ್ ಮಂಗಳೂರು
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ
May 15, 2024
11:31 PM
by: The Rural Mirror ಸುದ್ದಿಜಾಲ
ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ
May 15, 2024
11:09 PM
by: The Rural Mirror ಸುದ್ದಿಜಾಲ
ಇಂದು ಅಂತಾರಾಷ್ಟ್ರೀಯ ಕುಟುಂಬ ದಿನ : ಅಂದಿನ ಕೂಡು ಕುಟುಂಬ ಇಂದಿನ ವಿಭಕ್ತ ಕುಟುಂಬ
May 15, 2024
10:50 PM
by: The Rural Mirror ಸುದ್ದಿಜಾಲ
ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ
May 15, 2024
10:36 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror