Advertisement
Opinion

ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ | ಧನ್ವಂತರಿ ಜಯಂತಿ | ಆರೋಗ್ಯಕ್ಕಾಗಿ ಆಯುರ್ವೇದ

Share

ಎಲ್ಲರಿಗೂ 8 ನೇ ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ( International Ayurveda Day) ಹಾಗೂ ಧನ್ವಂತರಿ ಜಯಂತಿಯ(dhanvantari jayanti) ಹಾರ್ದಿಕ ಶುಭಾಶಯಗಳು. ಆಯುರ್ವೇದವು(Aayurveda) 3,000 ವರ್ಷಗಳಿಗೂ ಹಳೆಯದಾದ ಭಾರತದಲ್ಲಿ(Bharat) ಹುಟ್ಟಿದ ಔಷಧ ಮತ್ತು ಚಿಕಿತ್ಸಾ ಪದ್ಧತಿ(Medicine and therapy)ಯಾಗಿದೆ. ನೈಸರ್ಗಿಕ ಚಿಕಿತ್ಸಾ ಪದ್ಧತಿ ಆಗಿದ್ದು ಯಾವುದೇ ಅಡ್ಡ ಪರಿಣಾಮಗಳಿಂದ ಮುಕ್ತವಾಗಿರುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಆರೋಗ್(Health)ಯ ಹಾಗೂ ದೀರ್ಘ ಆಯಸ್ಸು(Long life) ಪಡೆಯುವುದು ಹೇಗೆ ಎಂಬುದನ್ನು ಹೇಳುವುದೇ ಆಯುರ್ವೇದದ ಮೂಲ ಉದ್ದೇಶ.

ಹಿಂದೂ ಸಂಪ್ರದಾಯಕ್ಕೆ ಹೊಂದಿಕೊಂಡಂತಿರುವ ಈ ಆಯುರ್ವೇದ ಚಿಕಿತ್ಸೆ ಪ್ರಾಚೀನ ಭಾರತದಿಂದ ಬೆಳೆದು ಬಂದಿದೆ. ಆಯುರ್ವೇದ ಎಂಬುವುದು ಜೀವ ವಿಜ್ಞಾನ ನಮ್ಮ ಹಿರಿಯರ, ಋಷಿಮುನಿಗಳ ಸಾವಿರಾರು ವರ್ಷಗಳ ಅನ್ವೇಷಣೆಯ ಫಲ ಇದಾಗಿದೆ. ಮಾನವನ ಶರೀರ, ಇಂದ್ರಿಯ, ಮನಸ್ಸು ಹಾಗೂ ಆತ್ಮ ಈ ನಾಲ್ಕು ಭಾಗಗಳು ಸಮತೋಲನದಲ್ಲಿರುವುದೇ ಸ್ವಾಸ್ಥ್ಯ /ಆರೋಗ್ಯ ಎಂಬುದಾಗಿ ಹೇಳಲಾಗುತ್ತದೆ.

ಸ್ವಸ್ಥಸ್ಯ ಸ್ವಾಸ್ತ್ಯ ರಕ್ಷಣಂ ಆತುರಸ್ಯ ವಿಕಾರ ಪ್ರಶಮನo  ರೋಗಬಾರದ ಹಾಗೆ ಮುನ್ನೆಚ್ಚರಿಕೆಯಿಂದ ಇರಲು ಬೇಕಾದ ಸುಲಭೋಪಾಯಗಳನ್ನು ತಿಳಿಸುವುದು ಹಾಗೂ ರೋಗ ಬಂದಾಗ ಅದರ ಮೂಲ ಕಾರಣವನ್ನು ತಿಳಿದು ನಿವಾರಣೋಪಾಯವನ್ನು ತಿಳಿಸುವುದೇ ಆಯುರ್ವೇದದ ಮೂಲ ಉದ್ದೇಶ.

ಚತುರ್ವೇದಗಳಲ್ಲಿ ಒಂದಾದ ಅಥರ್ವ ವೇದದಲ್ಲಿ ಆಯುರ್ವೇದದ ಬಗ್ಗೆ ಅತ್ಯದ್ಭುತ ಹಾಗೂ ವಿಚಾರಪೂರಿತ ವಿವರಗಳನ್ನು ವರ್ಣಿಸಲಾಗಿದೆ. ಮೊಟ್ಟಮೊದಲಾಗಿ ಆಯುರ್ವೇದವನ್ನು ಜಗತ್ತಿಗೆ ಕೊಟ್ಟವರು ಶ್ರೀ ಧನ್ವಂತರಿ ಎಂಬ ದಿವ್ಯತೇಜಸ್ವಿ ಹಾಗೂ ದೇವಪುರುಷ ಎಂಬುದಾಗಿ ತಿಳಿದು ಬಂದಿದೆ.. ಆಯುರ್ವೇದದ ಆದಿದೇವತೆ ಎಂದು ಪೂಜಿಸಲ್ಪಡುವ ಶ್ರೀ ಧನ್ವಂತರಿ ಜಯಂತಿಯಂದು ಆಯುರ್ವೇದ ದಿನಾಚರಣೆಯನ್ನಾಗಿ ಪ್ರತಿ ವರ್ಷವೂ ಆಚರಿಸಲಾಗುತ್ತದೆ. ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಪಂಚಕರ್ಮ ಚಿಕಿತ್ಸೆ,. ದಿನಾಚರ್ಯ,ಪಥ್ಯ ಆಹಾರ ವಿಹಾರ, ಯೋಗಾಸನ, ವ್ಯಾಯಾಮ, ನೈಸರ್ಗಿಕ ಗಿಡ ಮೂಲಿಕೆಗಳಿಂದ ತಯಾರಿಸಿದ ಔಷಧಿಗಳ ಬಳಕೆ ಇವುಗಳನ್ನು ವಿವರವಾಗಿ ತಿಳಿಸಲಾಗಿದೆ.

ಪ್ರಾಚೀನ ಭಾರತದಿಂದ ಬೆಳೆದು ಬಂದ ಈ ಆಯುರ್ವೇದ ವೈದ್ಯ ಪದ್ಧತಿಯನ್ನು ತಾವೆಲ್ಲರೂ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಲಿ. ಭಗವಾನ್ ಶ್ರೀ ಧನ್ವಂತರಿಯು ಎಲ್ಲರಿಗೂ ಉತ್ತಮವಾದ ಆರೋಗ್ಯವನ್ನು ನೀಡಲಿ ಎಂದು ಶುಭ ಹಾರೈಸುವ…

ಬರಹ :
ಡಾ. ಜ್ಯೋತಿ ಕೆ BAMS MD, ಲಕ್ಷ್ಮೀ ಕ್ಲಿನಿಕ್ ಮಂಗಳೂರು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

5 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

6 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

10 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

10 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

10 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

10 hours ago