Advertisement
Opinion

ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ | ಧನ್ವಂತರಿ ಜಯಂತಿ | ಆರೋಗ್ಯಕ್ಕಾಗಿ ಆಯುರ್ವೇದ

Share

ಎಲ್ಲರಿಗೂ 8 ನೇ ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ( International Ayurveda Day) ಹಾಗೂ ಧನ್ವಂತರಿ ಜಯಂತಿಯ(dhanvantari jayanti) ಹಾರ್ದಿಕ ಶುಭಾಶಯಗಳು. ಆಯುರ್ವೇದವು(Aayurveda) 3,000 ವರ್ಷಗಳಿಗೂ ಹಳೆಯದಾದ ಭಾರತದಲ್ಲಿ(Bharat) ಹುಟ್ಟಿದ ಔಷಧ ಮತ್ತು ಚಿಕಿತ್ಸಾ ಪದ್ಧತಿ(Medicine and therapy)ಯಾಗಿದೆ. ನೈಸರ್ಗಿಕ ಚಿಕಿತ್ಸಾ ಪದ್ಧತಿ ಆಗಿದ್ದು ಯಾವುದೇ ಅಡ್ಡ ಪರಿಣಾಮಗಳಿಂದ ಮುಕ್ತವಾಗಿರುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಆರೋಗ್(Health)ಯ ಹಾಗೂ ದೀರ್ಘ ಆಯಸ್ಸು(Long life) ಪಡೆಯುವುದು ಹೇಗೆ ಎಂಬುದನ್ನು ಹೇಳುವುದೇ ಆಯುರ್ವೇದದ ಮೂಲ ಉದ್ದೇಶ.

ಹಿಂದೂ ಸಂಪ್ರದಾಯಕ್ಕೆ ಹೊಂದಿಕೊಂಡಂತಿರುವ ಈ ಆಯುರ್ವೇದ ಚಿಕಿತ್ಸೆ ಪ್ರಾಚೀನ ಭಾರತದಿಂದ ಬೆಳೆದು ಬಂದಿದೆ. ಆಯುರ್ವೇದ ಎಂಬುವುದು ಜೀವ ವಿಜ್ಞಾನ ನಮ್ಮ ಹಿರಿಯರ, ಋಷಿಮುನಿಗಳ ಸಾವಿರಾರು ವರ್ಷಗಳ ಅನ್ವೇಷಣೆಯ ಫಲ ಇದಾಗಿದೆ. ಮಾನವನ ಶರೀರ, ಇಂದ್ರಿಯ, ಮನಸ್ಸು ಹಾಗೂ ಆತ್ಮ ಈ ನಾಲ್ಕು ಭಾಗಗಳು ಸಮತೋಲನದಲ್ಲಿರುವುದೇ ಸ್ವಾಸ್ಥ್ಯ /ಆರೋಗ್ಯ ಎಂಬುದಾಗಿ ಹೇಳಲಾಗುತ್ತದೆ.

ಸ್ವಸ್ಥಸ್ಯ ಸ್ವಾಸ್ತ್ಯ ರಕ್ಷಣಂ ಆತುರಸ್ಯ ವಿಕಾರ ಪ್ರಶಮನo  ರೋಗಬಾರದ ಹಾಗೆ ಮುನ್ನೆಚ್ಚರಿಕೆಯಿಂದ ಇರಲು ಬೇಕಾದ ಸುಲಭೋಪಾಯಗಳನ್ನು ತಿಳಿಸುವುದು ಹಾಗೂ ರೋಗ ಬಂದಾಗ ಅದರ ಮೂಲ ಕಾರಣವನ್ನು ತಿಳಿದು ನಿವಾರಣೋಪಾಯವನ್ನು ತಿಳಿಸುವುದೇ ಆಯುರ್ವೇದದ ಮೂಲ ಉದ್ದೇಶ.

ಚತುರ್ವೇದಗಳಲ್ಲಿ ಒಂದಾದ ಅಥರ್ವ ವೇದದಲ್ಲಿ ಆಯುರ್ವೇದದ ಬಗ್ಗೆ ಅತ್ಯದ್ಭುತ ಹಾಗೂ ವಿಚಾರಪೂರಿತ ವಿವರಗಳನ್ನು ವರ್ಣಿಸಲಾಗಿದೆ. ಮೊಟ್ಟಮೊದಲಾಗಿ ಆಯುರ್ವೇದವನ್ನು ಜಗತ್ತಿಗೆ ಕೊಟ್ಟವರು ಶ್ರೀ ಧನ್ವಂತರಿ ಎಂಬ ದಿವ್ಯತೇಜಸ್ವಿ ಹಾಗೂ ದೇವಪುರುಷ ಎಂಬುದಾಗಿ ತಿಳಿದು ಬಂದಿದೆ.. ಆಯುರ್ವೇದದ ಆದಿದೇವತೆ ಎಂದು ಪೂಜಿಸಲ್ಪಡುವ ಶ್ರೀ ಧನ್ವಂತರಿ ಜಯಂತಿಯಂದು ಆಯುರ್ವೇದ ದಿನಾಚರಣೆಯನ್ನಾಗಿ ಪ್ರತಿ ವರ್ಷವೂ ಆಚರಿಸಲಾಗುತ್ತದೆ. ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಪಂಚಕರ್ಮ ಚಿಕಿತ್ಸೆ,. ದಿನಾಚರ್ಯ,ಪಥ್ಯ ಆಹಾರ ವಿಹಾರ, ಯೋಗಾಸನ, ವ್ಯಾಯಾಮ, ನೈಸರ್ಗಿಕ ಗಿಡ ಮೂಲಿಕೆಗಳಿಂದ ತಯಾರಿಸಿದ ಔಷಧಿಗಳ ಬಳಕೆ ಇವುಗಳನ್ನು ವಿವರವಾಗಿ ತಿಳಿಸಲಾಗಿದೆ.

ಪ್ರಾಚೀನ ಭಾರತದಿಂದ ಬೆಳೆದು ಬಂದ ಈ ಆಯುರ್ವೇದ ವೈದ್ಯ ಪದ್ಧತಿಯನ್ನು ತಾವೆಲ್ಲರೂ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಲಿ. ಭಗವಾನ್ ಶ್ರೀ ಧನ್ವಂತರಿಯು ಎಲ್ಲರಿಗೂ ಉತ್ತಮವಾದ ಆರೋಗ್ಯವನ್ನು ನೀಡಲಿ ಎಂದು ಶುಭ ಹಾರೈಸುವ…

Advertisement
ಬರಹ :
ಡಾ. ಜ್ಯೋತಿ ಕೆ BAMS MD, ಲಕ್ಷ್ಮೀ ಕ್ಲಿನಿಕ್ ಮಂಗಳೂರು
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

3 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

4 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

4 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

4 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

4 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

21 hours ago