Advertisement
Opinion

ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ | ಧನ್ವಂತರಿ ಜಯಂತಿ | ಆರೋಗ್ಯಕ್ಕಾಗಿ ಆಯುರ್ವೇದ

Share

ಎಲ್ಲರಿಗೂ 8 ನೇ ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ( International Ayurveda Day) ಹಾಗೂ ಧನ್ವಂತರಿ ಜಯಂತಿಯ(dhanvantari jayanti) ಹಾರ್ದಿಕ ಶುಭಾಶಯಗಳು. ಆಯುರ್ವೇದವು(Aayurveda) 3,000 ವರ್ಷಗಳಿಗೂ ಹಳೆಯದಾದ ಭಾರತದಲ್ಲಿ(Bharat) ಹುಟ್ಟಿದ ಔಷಧ ಮತ್ತು ಚಿಕಿತ್ಸಾ ಪದ್ಧತಿ(Medicine and therapy)ಯಾಗಿದೆ. ನೈಸರ್ಗಿಕ ಚಿಕಿತ್ಸಾ ಪದ್ಧತಿ ಆಗಿದ್ದು ಯಾವುದೇ ಅಡ್ಡ ಪರಿಣಾಮಗಳಿಂದ ಮುಕ್ತವಾಗಿರುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಆರೋಗ್(Health)ಯ ಹಾಗೂ ದೀರ್ಘ ಆಯಸ್ಸು(Long life) ಪಡೆಯುವುದು ಹೇಗೆ ಎಂಬುದನ್ನು ಹೇಳುವುದೇ ಆಯುರ್ವೇದದ ಮೂಲ ಉದ್ದೇಶ.

Advertisement
Advertisement

ಹಿಂದೂ ಸಂಪ್ರದಾಯಕ್ಕೆ ಹೊಂದಿಕೊಂಡಂತಿರುವ ಈ ಆಯುರ್ವೇದ ಚಿಕಿತ್ಸೆ ಪ್ರಾಚೀನ ಭಾರತದಿಂದ ಬೆಳೆದು ಬಂದಿದೆ. ಆಯುರ್ವೇದ ಎಂಬುವುದು ಜೀವ ವಿಜ್ಞಾನ ನಮ್ಮ ಹಿರಿಯರ, ಋಷಿಮುನಿಗಳ ಸಾವಿರಾರು ವರ್ಷಗಳ ಅನ್ವೇಷಣೆಯ ಫಲ ಇದಾಗಿದೆ. ಮಾನವನ ಶರೀರ, ಇಂದ್ರಿಯ, ಮನಸ್ಸು ಹಾಗೂ ಆತ್ಮ ಈ ನಾಲ್ಕು ಭಾಗಗಳು ಸಮತೋಲನದಲ್ಲಿರುವುದೇ ಸ್ವಾಸ್ಥ್ಯ /ಆರೋಗ್ಯ ಎಂಬುದಾಗಿ ಹೇಳಲಾಗುತ್ತದೆ.

ಸ್ವಸ್ಥಸ್ಯ ಸ್ವಾಸ್ತ್ಯ ರಕ್ಷಣಂ ಆತುರಸ್ಯ ವಿಕಾರ ಪ್ರಶಮನo  ರೋಗಬಾರದ ಹಾಗೆ ಮುನ್ನೆಚ್ಚರಿಕೆಯಿಂದ ಇರಲು ಬೇಕಾದ ಸುಲಭೋಪಾಯಗಳನ್ನು ತಿಳಿಸುವುದು ಹಾಗೂ ರೋಗ ಬಂದಾಗ ಅದರ ಮೂಲ ಕಾರಣವನ್ನು ತಿಳಿದು ನಿವಾರಣೋಪಾಯವನ್ನು ತಿಳಿಸುವುದೇ ಆಯುರ್ವೇದದ ಮೂಲ ಉದ್ದೇಶ.

ಚತುರ್ವೇದಗಳಲ್ಲಿ ಒಂದಾದ ಅಥರ್ವ ವೇದದಲ್ಲಿ ಆಯುರ್ವೇದದ ಬಗ್ಗೆ ಅತ್ಯದ್ಭುತ ಹಾಗೂ ವಿಚಾರಪೂರಿತ ವಿವರಗಳನ್ನು ವರ್ಣಿಸಲಾಗಿದೆ. ಮೊಟ್ಟಮೊದಲಾಗಿ ಆಯುರ್ವೇದವನ್ನು ಜಗತ್ತಿಗೆ ಕೊಟ್ಟವರು ಶ್ರೀ ಧನ್ವಂತರಿ ಎಂಬ ದಿವ್ಯತೇಜಸ್ವಿ ಹಾಗೂ ದೇವಪುರುಷ ಎಂಬುದಾಗಿ ತಿಳಿದು ಬಂದಿದೆ.. ಆಯುರ್ವೇದದ ಆದಿದೇವತೆ ಎಂದು ಪೂಜಿಸಲ್ಪಡುವ ಶ್ರೀ ಧನ್ವಂತರಿ ಜಯಂತಿಯಂದು ಆಯುರ್ವೇದ ದಿನಾಚರಣೆಯನ್ನಾಗಿ ಪ್ರತಿ ವರ್ಷವೂ ಆಚರಿಸಲಾಗುತ್ತದೆ. ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಪಂಚಕರ್ಮ ಚಿಕಿತ್ಸೆ,. ದಿನಾಚರ್ಯ,ಪಥ್ಯ ಆಹಾರ ವಿಹಾರ, ಯೋಗಾಸನ, ವ್ಯಾಯಾಮ, ನೈಸರ್ಗಿಕ ಗಿಡ ಮೂಲಿಕೆಗಳಿಂದ ತಯಾರಿಸಿದ ಔಷಧಿಗಳ ಬಳಕೆ ಇವುಗಳನ್ನು ವಿವರವಾಗಿ ತಿಳಿಸಲಾಗಿದೆ.

ಪ್ರಾಚೀನ ಭಾರತದಿಂದ ಬೆಳೆದು ಬಂದ ಈ ಆಯುರ್ವೇದ ವೈದ್ಯ ಪದ್ಧತಿಯನ್ನು ತಾವೆಲ್ಲರೂ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಲಿ. ಭಗವಾನ್ ಶ್ರೀ ಧನ್ವಂತರಿಯು ಎಲ್ಲರಿಗೂ ಉತ್ತಮವಾದ ಆರೋಗ್ಯವನ್ನು ನೀಡಲಿ ಎಂದು ಶುಭ ಹಾರೈಸುವ…

ಬರಹ :
ಡಾ. ಜ್ಯೋತಿ ಕೆ BAMS MD, ಲಕ್ಷ್ಮೀ ಕ್ಲಿನಿಕ್ ಮಂಗಳೂರು
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

2 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

2 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

12 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

12 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

12 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

13 hours ago