Advertisement
Opinion

ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ | ಧನ್ವಂತರಿ ಜಯಂತಿ | ಆರೋಗ್ಯಕ್ಕಾಗಿ ಆಯುರ್ವೇದ

Share

ಎಲ್ಲರಿಗೂ 8 ನೇ ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ( International Ayurveda Day) ಹಾಗೂ ಧನ್ವಂತರಿ ಜಯಂತಿಯ(dhanvantari jayanti) ಹಾರ್ದಿಕ ಶುಭಾಶಯಗಳು. ಆಯುರ್ವೇದವು(Aayurveda) 3,000 ವರ್ಷಗಳಿಗೂ ಹಳೆಯದಾದ ಭಾರತದಲ್ಲಿ(Bharat) ಹುಟ್ಟಿದ ಔಷಧ ಮತ್ತು ಚಿಕಿತ್ಸಾ ಪದ್ಧತಿ(Medicine and therapy)ಯಾಗಿದೆ. ನೈಸರ್ಗಿಕ ಚಿಕಿತ್ಸಾ ಪದ್ಧತಿ ಆಗಿದ್ದು ಯಾವುದೇ ಅಡ್ಡ ಪರಿಣಾಮಗಳಿಂದ ಮುಕ್ತವಾಗಿರುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಆರೋಗ್(Health)ಯ ಹಾಗೂ ದೀರ್ಘ ಆಯಸ್ಸು(Long life) ಪಡೆಯುವುದು ಹೇಗೆ ಎಂಬುದನ್ನು ಹೇಳುವುದೇ ಆಯುರ್ವೇದದ ಮೂಲ ಉದ್ದೇಶ.

Advertisement

ಹಿಂದೂ ಸಂಪ್ರದಾಯಕ್ಕೆ ಹೊಂದಿಕೊಂಡಂತಿರುವ ಈ ಆಯುರ್ವೇದ ಚಿಕಿತ್ಸೆ ಪ್ರಾಚೀನ ಭಾರತದಿಂದ ಬೆಳೆದು ಬಂದಿದೆ. ಆಯುರ್ವೇದ ಎಂಬುವುದು ಜೀವ ವಿಜ್ಞಾನ ನಮ್ಮ ಹಿರಿಯರ, ಋಷಿಮುನಿಗಳ ಸಾವಿರಾರು ವರ್ಷಗಳ ಅನ್ವೇಷಣೆಯ ಫಲ ಇದಾಗಿದೆ. ಮಾನವನ ಶರೀರ, ಇಂದ್ರಿಯ, ಮನಸ್ಸು ಹಾಗೂ ಆತ್ಮ ಈ ನಾಲ್ಕು ಭಾಗಗಳು ಸಮತೋಲನದಲ್ಲಿರುವುದೇ ಸ್ವಾಸ್ಥ್ಯ /ಆರೋಗ್ಯ ಎಂಬುದಾಗಿ ಹೇಳಲಾಗುತ್ತದೆ.

ಸ್ವಸ್ಥಸ್ಯ ಸ್ವಾಸ್ತ್ಯ ರಕ್ಷಣಂ ಆತುರಸ್ಯ ವಿಕಾರ ಪ್ರಶಮನo  ರೋಗಬಾರದ ಹಾಗೆ ಮುನ್ನೆಚ್ಚರಿಕೆಯಿಂದ ಇರಲು ಬೇಕಾದ ಸುಲಭೋಪಾಯಗಳನ್ನು ತಿಳಿಸುವುದು ಹಾಗೂ ರೋಗ ಬಂದಾಗ ಅದರ ಮೂಲ ಕಾರಣವನ್ನು ತಿಳಿದು ನಿವಾರಣೋಪಾಯವನ್ನು ತಿಳಿಸುವುದೇ ಆಯುರ್ವೇದದ ಮೂಲ ಉದ್ದೇಶ.

ಚತುರ್ವೇದಗಳಲ್ಲಿ ಒಂದಾದ ಅಥರ್ವ ವೇದದಲ್ಲಿ ಆಯುರ್ವೇದದ ಬಗ್ಗೆ ಅತ್ಯದ್ಭುತ ಹಾಗೂ ವಿಚಾರಪೂರಿತ ವಿವರಗಳನ್ನು ವರ್ಣಿಸಲಾಗಿದೆ. ಮೊಟ್ಟಮೊದಲಾಗಿ ಆಯುರ್ವೇದವನ್ನು ಜಗತ್ತಿಗೆ ಕೊಟ್ಟವರು ಶ್ರೀ ಧನ್ವಂತರಿ ಎಂಬ ದಿವ್ಯತೇಜಸ್ವಿ ಹಾಗೂ ದೇವಪುರುಷ ಎಂಬುದಾಗಿ ತಿಳಿದು ಬಂದಿದೆ.. ಆಯುರ್ವೇದದ ಆದಿದೇವತೆ ಎಂದು ಪೂಜಿಸಲ್ಪಡುವ ಶ್ರೀ ಧನ್ವಂತರಿ ಜಯಂತಿಯಂದು ಆಯುರ್ವೇದ ದಿನಾಚರಣೆಯನ್ನಾಗಿ ಪ್ರತಿ ವರ್ಷವೂ ಆಚರಿಸಲಾಗುತ್ತದೆ. ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಪಂಚಕರ್ಮ ಚಿಕಿತ್ಸೆ,. ದಿನಾಚರ್ಯ,ಪಥ್ಯ ಆಹಾರ ವಿಹಾರ, ಯೋಗಾಸನ, ವ್ಯಾಯಾಮ, ನೈಸರ್ಗಿಕ ಗಿಡ ಮೂಲಿಕೆಗಳಿಂದ ತಯಾರಿಸಿದ ಔಷಧಿಗಳ ಬಳಕೆ ಇವುಗಳನ್ನು ವಿವರವಾಗಿ ತಿಳಿಸಲಾಗಿದೆ.

ಪ್ರಾಚೀನ ಭಾರತದಿಂದ ಬೆಳೆದು ಬಂದ ಈ ಆಯುರ್ವೇದ ವೈದ್ಯ ಪದ್ಧತಿಯನ್ನು ತಾವೆಲ್ಲರೂ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಲಿ. ಭಗವಾನ್ ಶ್ರೀ ಧನ್ವಂತರಿಯು ಎಲ್ಲರಿಗೂ ಉತ್ತಮವಾದ ಆರೋಗ್ಯವನ್ನು ನೀಡಲಿ ಎಂದು ಶುಭ ಹಾರೈಸುವ…

ಬರಹ :
ಡಾ. ಜ್ಯೋತಿ ಕೆ BAMS MD, ಲಕ್ಷ್ಮೀ ಕ್ಲಿನಿಕ್ ಮಂಗಳೂರು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

5 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

6 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

6 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

6 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

6 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

6 hours ago