ಎಲ್ಲರಿಗೂ 8 ನೇ ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ( International Ayurveda Day) ಹಾಗೂ ಧನ್ವಂತರಿ ಜಯಂತಿಯ(dhanvantari jayanti) ಹಾರ್ದಿಕ ಶುಭಾಶಯಗಳು. ಆಯುರ್ವೇದವು(Aayurveda) 3,000 ವರ್ಷಗಳಿಗೂ ಹಳೆಯದಾದ ಭಾರತದಲ್ಲಿ(Bharat) ಹುಟ್ಟಿದ ಔಷಧ ಮತ್ತು ಚಿಕಿತ್ಸಾ ಪದ್ಧತಿ(Medicine and therapy)ಯಾಗಿದೆ. ನೈಸರ್ಗಿಕ ಚಿಕಿತ್ಸಾ ಪದ್ಧತಿ ಆಗಿದ್ದು ಯಾವುದೇ ಅಡ್ಡ ಪರಿಣಾಮಗಳಿಂದ ಮುಕ್ತವಾಗಿರುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಆರೋಗ್(Health)ಯ ಹಾಗೂ ದೀರ್ಘ ಆಯಸ್ಸು(Long life) ಪಡೆಯುವುದು ಹೇಗೆ ಎಂಬುದನ್ನು ಹೇಳುವುದೇ ಆಯುರ್ವೇದದ ಮೂಲ ಉದ್ದೇಶ.
ಹಿಂದೂ ಸಂಪ್ರದಾಯಕ್ಕೆ ಹೊಂದಿಕೊಂಡಂತಿರುವ ಈ ಆಯುರ್ವೇದ ಚಿಕಿತ್ಸೆ ಪ್ರಾಚೀನ ಭಾರತದಿಂದ ಬೆಳೆದು ಬಂದಿದೆ. ಆಯುರ್ವೇದ ಎಂಬುವುದು ಜೀವ ವಿಜ್ಞಾನ ನಮ್ಮ ಹಿರಿಯರ, ಋಷಿಮುನಿಗಳ ಸಾವಿರಾರು ವರ್ಷಗಳ ಅನ್ವೇಷಣೆಯ ಫಲ ಇದಾಗಿದೆ. ಮಾನವನ ಶರೀರ, ಇಂದ್ರಿಯ, ಮನಸ್ಸು ಹಾಗೂ ಆತ್ಮ ಈ ನಾಲ್ಕು ಭಾಗಗಳು ಸಮತೋಲನದಲ್ಲಿರುವುದೇ ಸ್ವಾಸ್ಥ್ಯ /ಆರೋಗ್ಯ ಎಂಬುದಾಗಿ ಹೇಳಲಾಗುತ್ತದೆ.
ಸ್ವಸ್ಥಸ್ಯ ಸ್ವಾಸ್ತ್ಯ ರಕ್ಷಣಂ ಆತುರಸ್ಯ ವಿಕಾರ ಪ್ರಶಮನo ರೋಗಬಾರದ ಹಾಗೆ ಮುನ್ನೆಚ್ಚರಿಕೆಯಿಂದ ಇರಲು ಬೇಕಾದ ಸುಲಭೋಪಾಯಗಳನ್ನು ತಿಳಿಸುವುದು ಹಾಗೂ ರೋಗ ಬಂದಾಗ ಅದರ ಮೂಲ ಕಾರಣವನ್ನು ತಿಳಿದು ನಿವಾರಣೋಪಾಯವನ್ನು ತಿಳಿಸುವುದೇ ಆಯುರ್ವೇದದ ಮೂಲ ಉದ್ದೇಶ.
ಚತುರ್ವೇದಗಳಲ್ಲಿ ಒಂದಾದ ಅಥರ್ವ ವೇದದಲ್ಲಿ ಆಯುರ್ವೇದದ ಬಗ್ಗೆ ಅತ್ಯದ್ಭುತ ಹಾಗೂ ವಿಚಾರಪೂರಿತ ವಿವರಗಳನ್ನು ವರ್ಣಿಸಲಾಗಿದೆ. ಮೊಟ್ಟಮೊದಲಾಗಿ ಆಯುರ್ವೇದವನ್ನು ಜಗತ್ತಿಗೆ ಕೊಟ್ಟವರು ಶ್ರೀ ಧನ್ವಂತರಿ ಎಂಬ ದಿವ್ಯತೇಜಸ್ವಿ ಹಾಗೂ ದೇವಪುರುಷ ಎಂಬುದಾಗಿ ತಿಳಿದು ಬಂದಿದೆ.. ಆಯುರ್ವೇದದ ಆದಿದೇವತೆ ಎಂದು ಪೂಜಿಸಲ್ಪಡುವ ಶ್ರೀ ಧನ್ವಂತರಿ ಜಯಂತಿಯಂದು ಆಯುರ್ವೇದ ದಿನಾಚರಣೆಯನ್ನಾಗಿ ಪ್ರತಿ ವರ್ಷವೂ ಆಚರಿಸಲಾಗುತ್ತದೆ. ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಪಂಚಕರ್ಮ ಚಿಕಿತ್ಸೆ,. ದಿನಾಚರ್ಯ,ಪಥ್ಯ ಆಹಾರ ವಿಹಾರ, ಯೋಗಾಸನ, ವ್ಯಾಯಾಮ, ನೈಸರ್ಗಿಕ ಗಿಡ ಮೂಲಿಕೆಗಳಿಂದ ತಯಾರಿಸಿದ ಔಷಧಿಗಳ ಬಳಕೆ ಇವುಗಳನ್ನು ವಿವರವಾಗಿ ತಿಳಿಸಲಾಗಿದೆ.
ಪ್ರಾಚೀನ ಭಾರತದಿಂದ ಬೆಳೆದು ಬಂದ ಈ ಆಯುರ್ವೇದ ವೈದ್ಯ ಪದ್ಧತಿಯನ್ನು ತಾವೆಲ್ಲರೂ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಲಿ. ಭಗವಾನ್ ಶ್ರೀ ಧನ್ವಂತರಿಯು ಎಲ್ಲರಿಗೂ ಉತ್ತಮವಾದ ಆರೋಗ್ಯವನ್ನು ನೀಡಲಿ ಎಂದು ಶುಭ ಹಾರೈಸುವ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…