Advertisement
Opinion

ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ | ಧನ್ವಂತರಿ ಜಯಂತಿ | ಆರೋಗ್ಯಕ್ಕಾಗಿ ಆಯುರ್ವೇದ

Share

ಎಲ್ಲರಿಗೂ 8 ನೇ ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ( International Ayurveda Day) ಹಾಗೂ ಧನ್ವಂತರಿ ಜಯಂತಿಯ(dhanvantari jayanti) ಹಾರ್ದಿಕ ಶುಭಾಶಯಗಳು. ಆಯುರ್ವೇದವು(Aayurveda) 3,000 ವರ್ಷಗಳಿಗೂ ಹಳೆಯದಾದ ಭಾರತದಲ್ಲಿ(Bharat) ಹುಟ್ಟಿದ ಔಷಧ ಮತ್ತು ಚಿಕಿತ್ಸಾ ಪದ್ಧತಿ(Medicine and therapy)ಯಾಗಿದೆ. ನೈಸರ್ಗಿಕ ಚಿಕಿತ್ಸಾ ಪದ್ಧತಿ ಆಗಿದ್ದು ಯಾವುದೇ ಅಡ್ಡ ಪರಿಣಾಮಗಳಿಂದ ಮುಕ್ತವಾಗಿರುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಆರೋಗ್(Health)ಯ ಹಾಗೂ ದೀರ್ಘ ಆಯಸ್ಸು(Long life) ಪಡೆಯುವುದು ಹೇಗೆ ಎಂಬುದನ್ನು ಹೇಳುವುದೇ ಆಯುರ್ವೇದದ ಮೂಲ ಉದ್ದೇಶ.

ಹಿಂದೂ ಸಂಪ್ರದಾಯಕ್ಕೆ ಹೊಂದಿಕೊಂಡಂತಿರುವ ಈ ಆಯುರ್ವೇದ ಚಿಕಿತ್ಸೆ ಪ್ರಾಚೀನ ಭಾರತದಿಂದ ಬೆಳೆದು ಬಂದಿದೆ. ಆಯುರ್ವೇದ ಎಂಬುವುದು ಜೀವ ವಿಜ್ಞಾನ ನಮ್ಮ ಹಿರಿಯರ, ಋಷಿಮುನಿಗಳ ಸಾವಿರಾರು ವರ್ಷಗಳ ಅನ್ವೇಷಣೆಯ ಫಲ ಇದಾಗಿದೆ. ಮಾನವನ ಶರೀರ, ಇಂದ್ರಿಯ, ಮನಸ್ಸು ಹಾಗೂ ಆತ್ಮ ಈ ನಾಲ್ಕು ಭಾಗಗಳು ಸಮತೋಲನದಲ್ಲಿರುವುದೇ ಸ್ವಾಸ್ಥ್ಯ /ಆರೋಗ್ಯ ಎಂಬುದಾಗಿ ಹೇಳಲಾಗುತ್ತದೆ.

ಸ್ವಸ್ಥಸ್ಯ ಸ್ವಾಸ್ತ್ಯ ರಕ್ಷಣಂ ಆತುರಸ್ಯ ವಿಕಾರ ಪ್ರಶಮನo  ರೋಗಬಾರದ ಹಾಗೆ ಮುನ್ನೆಚ್ಚರಿಕೆಯಿಂದ ಇರಲು ಬೇಕಾದ ಸುಲಭೋಪಾಯಗಳನ್ನು ತಿಳಿಸುವುದು ಹಾಗೂ ರೋಗ ಬಂದಾಗ ಅದರ ಮೂಲ ಕಾರಣವನ್ನು ತಿಳಿದು ನಿವಾರಣೋಪಾಯವನ್ನು ತಿಳಿಸುವುದೇ ಆಯುರ್ವೇದದ ಮೂಲ ಉದ್ದೇಶ.

ಚತುರ್ವೇದಗಳಲ್ಲಿ ಒಂದಾದ ಅಥರ್ವ ವೇದದಲ್ಲಿ ಆಯುರ್ವೇದದ ಬಗ್ಗೆ ಅತ್ಯದ್ಭುತ ಹಾಗೂ ವಿಚಾರಪೂರಿತ ವಿವರಗಳನ್ನು ವರ್ಣಿಸಲಾಗಿದೆ. ಮೊಟ್ಟಮೊದಲಾಗಿ ಆಯುರ್ವೇದವನ್ನು ಜಗತ್ತಿಗೆ ಕೊಟ್ಟವರು ಶ್ರೀ ಧನ್ವಂತರಿ ಎಂಬ ದಿವ್ಯತೇಜಸ್ವಿ ಹಾಗೂ ದೇವಪುರುಷ ಎಂಬುದಾಗಿ ತಿಳಿದು ಬಂದಿದೆ.. ಆಯುರ್ವೇದದ ಆದಿದೇವತೆ ಎಂದು ಪೂಜಿಸಲ್ಪಡುವ ಶ್ರೀ ಧನ್ವಂತರಿ ಜಯಂತಿಯಂದು ಆಯುರ್ವೇದ ದಿನಾಚರಣೆಯನ್ನಾಗಿ ಪ್ರತಿ ವರ್ಷವೂ ಆಚರಿಸಲಾಗುತ್ತದೆ. ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಪಂಚಕರ್ಮ ಚಿಕಿತ್ಸೆ,. ದಿನಾಚರ್ಯ,ಪಥ್ಯ ಆಹಾರ ವಿಹಾರ, ಯೋಗಾಸನ, ವ್ಯಾಯಾಮ, ನೈಸರ್ಗಿಕ ಗಿಡ ಮೂಲಿಕೆಗಳಿಂದ ತಯಾರಿಸಿದ ಔಷಧಿಗಳ ಬಳಕೆ ಇವುಗಳನ್ನು ವಿವರವಾಗಿ ತಿಳಿಸಲಾಗಿದೆ.

ಪ್ರಾಚೀನ ಭಾರತದಿಂದ ಬೆಳೆದು ಬಂದ ಈ ಆಯುರ್ವೇದ ವೈದ್ಯ ಪದ್ಧತಿಯನ್ನು ತಾವೆಲ್ಲರೂ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಲಿ. ಭಗವಾನ್ ಶ್ರೀ ಧನ್ವಂತರಿಯು ಎಲ್ಲರಿಗೂ ಉತ್ತಮವಾದ ಆರೋಗ್ಯವನ್ನು ನೀಡಲಿ ಎಂದು ಶುಭ ಹಾರೈಸುವ…

ಬರಹ :
ಡಾ. ಜ್ಯೋತಿ ಕೆ BAMS MD, ಲಕ್ಷ್ಮೀ ಕ್ಲಿನಿಕ್ ಮಂಗಳೂರು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

20 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago