Advertisement
Opinion

ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ | ಧನ್ವಂತರಿ ಜಯಂತಿ | ಆರೋಗ್ಯಕ್ಕಾಗಿ ಆಯುರ್ವೇದ

Share

ಎಲ್ಲರಿಗೂ 8 ನೇ ಅಂತರಾಷ್ಟ್ರೀಯ ಆಯುರ್ವೇದ ದಿನಾಚರಣೆ( International Ayurveda Day) ಹಾಗೂ ಧನ್ವಂತರಿ ಜಯಂತಿಯ(dhanvantari jayanti) ಹಾರ್ದಿಕ ಶುಭಾಶಯಗಳು. ಆಯುರ್ವೇದವು(Aayurveda) 3,000 ವರ್ಷಗಳಿಗೂ ಹಳೆಯದಾದ ಭಾರತದಲ್ಲಿ(Bharat) ಹುಟ್ಟಿದ ಔಷಧ ಮತ್ತು ಚಿಕಿತ್ಸಾ ಪದ್ಧತಿ(Medicine and therapy)ಯಾಗಿದೆ. ನೈಸರ್ಗಿಕ ಚಿಕಿತ್ಸಾ ಪದ್ಧತಿ ಆಗಿದ್ದು ಯಾವುದೇ ಅಡ್ಡ ಪರಿಣಾಮಗಳಿಂದ ಮುಕ್ತವಾಗಿರುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಆರೋಗ್(Health)ಯ ಹಾಗೂ ದೀರ್ಘ ಆಯಸ್ಸು(Long life) ಪಡೆಯುವುದು ಹೇಗೆ ಎಂಬುದನ್ನು ಹೇಳುವುದೇ ಆಯುರ್ವೇದದ ಮೂಲ ಉದ್ದೇಶ.

ಹಿಂದೂ ಸಂಪ್ರದಾಯಕ್ಕೆ ಹೊಂದಿಕೊಂಡಂತಿರುವ ಈ ಆಯುರ್ವೇದ ಚಿಕಿತ್ಸೆ ಪ್ರಾಚೀನ ಭಾರತದಿಂದ ಬೆಳೆದು ಬಂದಿದೆ. ಆಯುರ್ವೇದ ಎಂಬುವುದು ಜೀವ ವಿಜ್ಞಾನ ನಮ್ಮ ಹಿರಿಯರ, ಋಷಿಮುನಿಗಳ ಸಾವಿರಾರು ವರ್ಷಗಳ ಅನ್ವೇಷಣೆಯ ಫಲ ಇದಾಗಿದೆ. ಮಾನವನ ಶರೀರ, ಇಂದ್ರಿಯ, ಮನಸ್ಸು ಹಾಗೂ ಆತ್ಮ ಈ ನಾಲ್ಕು ಭಾಗಗಳು ಸಮತೋಲನದಲ್ಲಿರುವುದೇ ಸ್ವಾಸ್ಥ್ಯ /ಆರೋಗ್ಯ ಎಂಬುದಾಗಿ ಹೇಳಲಾಗುತ್ತದೆ.

ಸ್ವಸ್ಥಸ್ಯ ಸ್ವಾಸ್ತ್ಯ ರಕ್ಷಣಂ ಆತುರಸ್ಯ ವಿಕಾರ ಪ್ರಶಮನo  ರೋಗಬಾರದ ಹಾಗೆ ಮುನ್ನೆಚ್ಚರಿಕೆಯಿಂದ ಇರಲು ಬೇಕಾದ ಸುಲಭೋಪಾಯಗಳನ್ನು ತಿಳಿಸುವುದು ಹಾಗೂ ರೋಗ ಬಂದಾಗ ಅದರ ಮೂಲ ಕಾರಣವನ್ನು ತಿಳಿದು ನಿವಾರಣೋಪಾಯವನ್ನು ತಿಳಿಸುವುದೇ ಆಯುರ್ವೇದದ ಮೂಲ ಉದ್ದೇಶ.

ಚತುರ್ವೇದಗಳಲ್ಲಿ ಒಂದಾದ ಅಥರ್ವ ವೇದದಲ್ಲಿ ಆಯುರ್ವೇದದ ಬಗ್ಗೆ ಅತ್ಯದ್ಭುತ ಹಾಗೂ ವಿಚಾರಪೂರಿತ ವಿವರಗಳನ್ನು ವರ್ಣಿಸಲಾಗಿದೆ. ಮೊಟ್ಟಮೊದಲಾಗಿ ಆಯುರ್ವೇದವನ್ನು ಜಗತ್ತಿಗೆ ಕೊಟ್ಟವರು ಶ್ರೀ ಧನ್ವಂತರಿ ಎಂಬ ದಿವ್ಯತೇಜಸ್ವಿ ಹಾಗೂ ದೇವಪುರುಷ ಎಂಬುದಾಗಿ ತಿಳಿದು ಬಂದಿದೆ.. ಆಯುರ್ವೇದದ ಆದಿದೇವತೆ ಎಂದು ಪೂಜಿಸಲ್ಪಡುವ ಶ್ರೀ ಧನ್ವಂತರಿ ಜಯಂತಿಯಂದು ಆಯುರ್ವೇದ ದಿನಾಚರಣೆಯನ್ನಾಗಿ ಪ್ರತಿ ವರ್ಷವೂ ಆಚರಿಸಲಾಗುತ್ತದೆ. ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಪಂಚಕರ್ಮ ಚಿಕಿತ್ಸೆ,. ದಿನಾಚರ್ಯ,ಪಥ್ಯ ಆಹಾರ ವಿಹಾರ, ಯೋಗಾಸನ, ವ್ಯಾಯಾಮ, ನೈಸರ್ಗಿಕ ಗಿಡ ಮೂಲಿಕೆಗಳಿಂದ ತಯಾರಿಸಿದ ಔಷಧಿಗಳ ಬಳಕೆ ಇವುಗಳನ್ನು ವಿವರವಾಗಿ ತಿಳಿಸಲಾಗಿದೆ.

ಪ್ರಾಚೀನ ಭಾರತದಿಂದ ಬೆಳೆದು ಬಂದ ಈ ಆಯುರ್ವೇದ ವೈದ್ಯ ಪದ್ಧತಿಯನ್ನು ತಾವೆಲ್ಲರೂ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಲಿ. ಭಗವಾನ್ ಶ್ರೀ ಧನ್ವಂತರಿಯು ಎಲ್ಲರಿಗೂ ಉತ್ತಮವಾದ ಆರೋಗ್ಯವನ್ನು ನೀಡಲಿ ಎಂದು ಶುಭ ಹಾರೈಸುವ…

ಬರಹ :
ಡಾ. ಜ್ಯೋತಿ ಕೆ BAMS MD, ಲಕ್ಷ್ಮೀ ಕ್ಲಿನಿಕ್ ಮಂಗಳೂರು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

2 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

2 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

1 day ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

3 days ago