ಮಂಗಳೂರಿನ ಶಾರದಾ ವಿದ್ಯಾಲಯದ ಆವರಣದಲ್ಲಿ ರಾವ್ಸ್ ಚೆಸ್ ಕಾರ್ನರ್ ಆಯೋಜಿಸಿದ ಅಂತರಾಷ್ಟ್ರೀಯ ಚೆಸ್ ಪಂದ್ಯಾಟವು ಅದ್ದೂರಿಯಾಗಿ ನಡೆಯುತ್ತಿದೆ. ಆರು ದಿನಗಳ ಚೆಸ್ ಪಂದ್ಯಾಟಕ್ಕೆ ಗುರುವಾರ ಚಾಲನೆ ದೊರೆತಿತ್ತು. ಕ್ಲಾಸಿಕಲ್, ರಾಪಿಡ್ ಹಾಗೂ ಬ್ಲಿಟ್ಸ್ ಮೂರು ವಿಭಾಗದಲ್ಲೂ ಪಂದ್ಯಾಟ ಆಯೋಜನೆಯಾಗಿತ್ತು. ಅಮೇರಿಕಾ, ಕೆನಡಾ, ಶ್ರೀಲಂಕಾ, ಕಿನ್ಯಾ, ಸಿಂಗಾಪುರ ಸೇರಿದಂತೆ ದೇಶದ ವಿವಿದೆಡೆಯಿಂದ ಚೆಸ್ ಕ್ರೀಡಾಪಟುಗಳು ಆಗಮಿಸಿದ್ದರು. ಸುಮಾರು 459 ಚೆಸ್ ಆಟಗಾರರು ಭಾಗವಹಿಸಿದ್ದಾರೆ. ಕ್ಲಾಸಿಕಲ್ ಪಂದ್ಯಾಟವು 9 ಸುತ್ತುಗಳಿಂದ ನಡೆಯುತ್ತಿದ್ದು ಸೆ.30 ರಂದು ಕೊನೆಗೊಳ್ಳಲಿದೆ. ಈಗಾಗಲೇ ರಾಪಿಡ್ ಹಾಗೂ ಬ್ಲಿಟ್ಸ್ ಪಂದ್ಯಗಳು ಮುಗಿದಿವೆ.
ಗುರುವಾರ ಬೆಳಿಗ್ಗೆ ನಡೆದ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಭೂಮರೆಡ್ಡಿ ಅವರು ಪಂದ್ಯಾಟಕ್ಕೆ ಚಾಲನೆ ನೀಡಿದರು. ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಬಿ ಪುರಾಣಿಕ್, ಕರ್ನಾಟಕ ಚೆಸ್ ಸಂಸ್ಥೆಯ ಅಧ್ಯಕ್ಷ ಟಿ.ಎನ್ ಮಧುಕರ, ದಕ್ಷಿಣ ಕನ್ನಡ ಚೆಸ್ ಸಂಸ್ಥೆಯ ಅಧ್ಯಕ್ಷೆ ಡಾ.ಅಮರಶ್ರೀ ಅಮರನಾಥ ಶೆಟ್ಟಿ ಹಿಂದಿನ ಅಧ್ಯಕ್ಷ ರಮೇಶ್ ಕೋಟೆ ಅತಿಥಿಗಳಾಗಿದ್ದರು. ರಾವ್ ಚೆಸ್ ಕಾರ್ನರ್ ಸ್ಥಾಪಕ, ಚೆಸ್ ಆಟಗಾರ (ಐಎಂ) ಶರಣ್ ರಾವ್, ಚೆಸ್ ಆಟಗಾರ್ತಿ (ಡಬ್ಯುಐಎಂ) ಇಶಾ ಶರ್ಮಾ, ಸಂಘಟಕ ಶುಭಾನಂದ ರಾವ್ ಮೊದಲಾದವರಿದ್ದರು.
ಮಂಗಳೂರಿನಲ್ಲಿ ಈಚೆಗಿನ ವರ್ಷಗಳಲ್ಲಿ ಅತ್ಯಂತ ವ್ಯವಸ್ಥಿತವಾಗಿರುವ ಹಾಗೂ ವಿದೇಶಗಳಿಂದ ಮತ್ತು ದೇಶದ ವಿವಿದೆಡೆಯಿಂದ ರೇಟೆಡ್ ಆಟಗಾರರು ಇಷ್ಟೊಂದು ಸಂಖ್ಯೆಯಲ್ಲಿ ಬಂದಿರುವುದು ಮೊದಲ ಬಾರಿಯಾಗಿದೆ. ಚೆಸ್ ಆಟಕ್ಕೆ ಈಗಾಗಲೇ ಸಾಕಷ್ಟು ಪ್ರೋತ್ಸಾಹ ನೀಡಲಾಗುತ್ತಿದೆ. ದೇಶದಲ್ಲೂ, ರಾಜ್ಯದಿಂದಲೂ ಸಹಕಾರಗಳು ಲಭ್ಯವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಎಸೋಸಿಯೇಶನ್, ರಾಜ್ಯ ಚೆಸ್ ಎಸೋಸಿಯೇಶನ್ ಈ ನಿಟ್ಟಿನಲ್ಲಿಯೂ ಕೆಲಸ ಮಾಡುತ್ತಿದೆ. ಚೆಸ್ ತರಬೇತು ಸಂಸ್ಥೆ ರಾವ್ಸ್ ಚೆಸ್ ಕಾರ್ನರ್ ಕೂಡಾ ವಿಶೇಷವಾಗಿ ಚೆಸ್ ತರಬೇತಿಯನ್ನು ನೀಡುವುದರ ಜೊತೆಗೆ ಕ್ರೀಡಾಲೋಕಕ್ಕೆ ಕೊಡುಗೆ ನೀಡುತ್ತಿದೆ.
ಕರಾವಳಿ ಜಿಲ್ಲೆಯಲ್ಲಿ ಸೆ.25 ರಿಂದ ವಿದೇಶದ ಹಾಗೂ ದೇಶದ ವಿವಿದೆಡೆಯ ಚೆಸ್ ಆಟಗಾರರು ಕೂಡಾ ಇದ್ದು ಇಲ್ಲಿನ ಸಂಸ್ಕೃತಿ, ನವರಾತ್ರಿ ಆರಾಧನಾ ಉತ್ಸವ ಇತ್ಯಾದಿಗಳು ಕೂಡಾ ಗಮನ ಸೆಳೆದಿವೆ. ಹೀಗಾಗಿ ಕರಾವಳಿ ಜಿಲ್ಲೆಯ ಸಂಸ್ಕೃತಿಯನ್ನು ಕೂಡಾ ಚೆಸ್ ಆಟದ ಹಿನ್ನೆಲೆಯಲ್ಲಿ ರಾವ್ಸ್ ಚೆಸ್ ಕಾರ್ನರ್ ಹಾಗೂ ಶಾರದಾ ವಿದ್ಯಾಲಯ ವಿದೇಶದ ಕೆಲವು ಮಂದಿಗೆ ಪರಿಚಯಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…