Advertisement
ಸುದ್ದಿಗಳು

ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಚೆಸ್‌ ಪಂದ್ಯಾಟ | ಕರಾವಳಿ ಜಿಲ್ಲೆಯಲ್ಲಿ ವಿದೇಶದ ಚೆಸ್ ಆಟಗಾರರು

Share

ಮಂಗಳೂರಿನ ಶಾರದಾ ವಿದ್ಯಾಲಯದ ಆವರಣದಲ್ಲಿ ರಾವ್ಸ್‌ ಚೆಸ್‌ ಕಾರ್ನರ್‌  ಆಯೋಜಿಸಿದ ಅಂತರಾಷ್ಟ್ರೀಯ ಚೆಸ್‌ ಪಂದ್ಯಾಟವು ಅದ್ದೂರಿಯಾಗಿ ನಡೆಯುತ್ತಿದೆ. ಆರು ದಿನಗಳ ಚೆಸ್‌ ಪಂದ್ಯಾಟಕ್ಕೆ ಗುರುವಾರ ಚಾಲನೆ ದೊರೆತಿತ್ತು. ಕ್ಲಾಸಿಕಲ್‌, ರಾಪಿಡ್‌ ಹಾಗೂ ಬ್ಲಿಟ್ಸ್‌ ಮೂರು ವಿಭಾಗದಲ್ಲೂ ಪಂದ್ಯಾಟ ಆಯೋಜನೆಯಾಗಿತ್ತು. ಅಮೇರಿಕಾ, ಕೆನಡಾ, ಶ್ರೀಲಂಕಾ, ಕಿನ್ಯಾ, ಸಿಂಗಾಪುರ ಸೇರಿದಂತೆ ದೇಶದ ವಿವಿದೆಡೆಯಿಂದ ಚೆಸ್‌ ಕ್ರೀಡಾಪಟುಗಳು ಆಗಮಿಸಿದ್ದರು.  ಸುಮಾರು 459 ಚೆಸ್‌ ಆಟಗಾರರು ಭಾಗವಹಿಸಿದ್ದಾರೆ. ಕ್ಲಾಸಿಕಲ್‌ ಪಂದ್ಯಾಟವು 9 ಸುತ್ತುಗಳಿಂದ ನಡೆಯುತ್ತಿದ್ದು ಸೆ.30 ರಂದು ಕೊನೆಗೊಳ್ಳಲಿದೆ. ಈಗಾಗಲೇ ರಾಪಿಡ್‌ ಹಾಗೂ ಬ್ಲಿಟ್ಸ್‌ ಪಂದ್ಯಗಳು ಮುಗಿದಿವೆ.

ಗುರುವಾರ ಬೆಳಿಗ್ಗೆ ನಡೆದ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಭೂಮರೆಡ್ಡಿ ಅವರು ಪಂದ್ಯಾಟಕ್ಕೆ ಚಾಲನೆ ನೀಡಿದರು. ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಬಿ ಪುರಾಣಿಕ್, ಕರ್ನಾಟಕ ಚೆಸ್‌ ಸಂಸ್ಥೆಯ ಅಧ್ಯಕ್ಷ ಟಿ.ಎನ್ ಮಧುಕರ, ದಕ್ಷಿಣ ಕನ್ನಡ ಚೆಸ್ ಸಂಸ್ಥೆಯ ಅಧ್ಯಕ್ಷೆ ಡಾ.ಅಮರಶ್ರೀ ಅಮರನಾಥ ಶೆಟ್ಟಿ ಹಿಂದಿನ ಅಧ್ಯಕ್ಷ ರಮೇಶ್ ಕೋಟೆ ಅತಿಥಿಗಳಾಗಿದ್ದರು.  ರಾವ್ ಚೆಸ್ ಕಾರ್ನರ್ ಸ್ಥಾಪಕ, ಚೆಸ್‌ ಆಟಗಾರ (ಐಎಂ) ಶರಣ್ ರಾವ್, ಚೆಸ್‌ ಆಟಗಾರ್ತಿ (ಡಬ್ಯುಐಎಂ) ಇಶಾ ಶರ್ಮಾ, ಸಂಘಟಕ ಶುಭಾನಂದ ರಾವ್ ಮೊದಲಾದವರಿದ್ದರು.

Advertisement

ಮಂಗಳೂರಿನಲ್ಲಿ ಈಚೆಗಿನ ವರ್ಷಗಳಲ್ಲಿ ಅತ್ಯಂತ ವ್ಯವಸ್ಥಿತವಾಗಿರುವ ಹಾಗೂ ವಿದೇಶಗಳಿಂದ ಮತ್ತು ದೇಶದ ವಿವಿದೆಡೆಯಿಂದ ರೇಟೆಡ್‌ ಆಟಗಾರರು ಇಷ್ಟೊಂದು ಸಂಖ್ಯೆಯಲ್ಲಿ ಬಂದಿರುವುದು ಮೊದಲ ಬಾರಿಯಾಗಿದೆ. ಚೆಸ್‌ ಆಟಕ್ಕೆ ಈಗಾಗಲೇ ಸಾಕಷ್ಟು ಪ್ರೋತ್ಸಾಹ ನೀಡಲಾಗುತ್ತಿದೆ. ದೇಶದಲ್ಲೂ, ರಾಜ್ಯದಿಂದಲೂ ಸಹಕಾರಗಳು ಲಭ್ಯವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌, ರಾಜ್ಯ ಚೆಸ್‌ ಎಸೋಸಿಯೇಶನ್‌ ಈ ನಿಟ್ಟಿನಲ್ಲಿಯೂ ಕೆಲಸ ಮಾಡುತ್ತಿದೆ. ಚೆಸ್‌ ತರಬೇತು ಸಂಸ್ಥೆ ರಾವ್ಸ್‌ ಚೆಸ್‌ ಕಾರ್ನರ್‌   ಕೂಡಾ ವಿಶೇಷವಾಗಿ ಚೆಸ್‌ ತರಬೇತಿಯನ್ನು ನೀಡುವುದರ ಜೊತೆಗೆ ಕ್ರೀಡಾಲೋಕಕ್ಕೆ ಕೊಡುಗೆ ನೀಡುತ್ತಿದೆ.

Advertisement

ಕರಾವಳಿ ಜಿಲ್ಲೆಯಲ್ಲಿ ಸೆ.25 ರಿಂದ ವಿದೇಶದ ಹಾಗೂ ದೇಶದ ವಿವಿದೆಡೆಯ ಚೆಸ್‌ ಆಟಗಾರರು ಕೂಡಾ ಇದ್ದು ಇಲ್ಲಿನ ಸಂಸ್ಕೃತಿ, ನವರಾತ್ರಿ ಆರಾಧನಾ ಉತ್ಸವ ಇತ್ಯಾದಿಗಳು ಕೂಡಾ ಗಮನ ಸೆಳೆದಿವೆ.  ಹೀಗಾಗಿ ಕರಾವಳಿ ಜಿಲ್ಲೆಯ ಸಂಸ್ಕೃತಿಯನ್ನು ಕೂಡಾ ಚೆಸ್‌ ಆಟದ ಹಿನ್ನೆಲೆಯಲ್ಲಿ ರಾವ್ಸ್‌ ಚೆಸ್‌ ಕಾರ್ನರ್‌ ಹಾಗೂ ಶಾರದಾ ವಿದ್ಯಾಲಯ  ವಿದೇಶದ ಕೆಲವು ಮಂದಿಗೆ ಪರಿಚಯಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ಸಮಯಗಳಿಂದ ಚೆಸ್‌ ಆಟಕ್ಕೆ ವಿಶೇಷವಾದ ಆದ್ಯತೆ ನೀಡಿ ಆಗಾಗ ಪಂದ್ಯಾಟಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಮೂಲಕ ಆಟಗಾರರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ರಾವ್ಸ್‌ ಚೆಸ್‌ ಕಾರ್ನರ್‌   ಈ ಬಾರಿ ಉತ್ತಮವಾಗಿ ಪಂದ್ಯಾಟವನ್ನು ಸಂಯೋಜಿಸಿದೆ ಎಂದು ಹೇಳುತ್ತಾರೆ ರಾಜ್ಯ ಚೆಸ್‌ ಎಸೋಸಿಯೇಶನ್‌ ಉಪಾಧ್ಯಕ್ಷ ರಮೇಶ್‌ ಕೋಟೆ.

Advertisement

ಕರ್ನಾಟಕದಲ್ಲೂ ಚೆಸ್‌ ಪ್ರತಿಭೆಗಳಿದ್ದಾರೆ | ಗ್ರಾಮೀಣ ಭಾಗದಲ್ಲೂ ಚೆಸ್‌ ಬೆಳೆಯಬೇಕು |”ಚೆಸ್‌ ಇನ್‌ ಸ್ಕೂಲ್”‌ ಆರಂಭವಾಗಲಿ |

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

11 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

13 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

19 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago