ಫೆ.12 ರಿಂದ ಅಂತರಾಷ್ಟ್ರೀಯ ಕಾಫಿ ಉತ್ಸವ | ಜಾಗತಿಕ ಕಾಫಿ ಭೂಪಟದಲ್ಲಿ ಬೆಂಗಳೂರು

February 10, 2026
6:38 AM
ಫೆಬ್ರವರಿ 12 ರಿಂದ 14 ರವರೆಗೆ ಬೆಂಗಳೂರಿನ ಜಯಮಹಲ್ ಪ್ಯಾಲೆಸ್‌ನಲ್ಲಿ ಭಾರತ ಅಂತಾರಾಷ್ಟ್ರೀಯ ಕಾಫಿ ಉತ್ಸವ 2026 ನಡೆಯಲಿದೆ. ಕಾಫಿ ಬೆಳೆಗಾರರು, ಉದ್ಯಮಿಗಳು ಮತ್ತು ಗ್ರಾಹಕರನ್ನು ಒಂದೇ ವೇದಿಕೆಗೆ ತರುವ ಉತ್ಸವಕ್ಕೆ ಜಾಗತಿಕ ಗಮನ ಸೆಳೆದಿದೆ.

ಭಾರತ ಅಂತಾರಾಷ್ಟ್ರೀಯ ಕಾಫಿ ಉತ್ಸವ 2026  ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ನಗರದ ಜಯಮಹಲ್ ಪ್ಯಾಲೆಸ್‌ ಚಾಮರವಜ್ರ ಸಭಾಂಗಣದಲ್ಲಿ ಈ ಮಹತ್ವದ ಉತ್ಸವ ನಡೆಯಲಿದೆ.

ಈ ಕುರಿತು Specialty Coffee Association of India ಅಧ್ಯಕ್ಷೆ Hamsini Appadurai ಮತ್ತು Coffee Board of Indiaಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ  ಕೂರ್ಮ ರಾವ್‌ ಮಾಹಿತಿ ನೀಡಿದರು.

ಕಾಫಿ ಅಸೋಸಿಯೇಶನ್‌ ಅಧ್ಯಕ್ಷೆ ಹಂಸಿಣಿ ಅಪ್ಪದುರೈ ಮಾತನಾಡಿ, ಫೆಬ್ರವರಿ 12ರಿಂದ 14ರವರೆಗೆ ನಡೆಯಲಿರುವ ಈ ಅಂತರಾಷ್ಟ್ರೀಯ ಕಾಫಿ ಉತ್ಸವಕ್ಕೆ ದೇಶ-ವಿದೇಶಗಳ ಕಾಫಿ ಪ್ರೇಮಿಗಳು, ಬೆಳೆಗಾರರು, ರೋಸ್ಟರ್‌ಗಳು ಹಾಗೂ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು. ಎಲ್ಲರೂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಗಬೇಕೆಂದು ಅವರು ಮನವಿ ಮಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೂರ್ಮಾ ರಾವ್ ಅವರು 2025 ಅನ್ನು ‘ಅಂತರಾಷ್ಟ್ರೀಯ ಸಹಕಾರಿ ವರ್ಷ’ ಎಂದು ಘೋಷಿಸಿರುವ ಹಿನ್ನೆಲೆ, ಕಾಫಿ ಬೆಳೆಗಾರರು, ಉದ್ಯಮಿಗಳು ಹಾಗೂ ಗ್ರಾಹಕರನ್ನು ಒಂದೇ ವೇದಿಕೆಗೆ ತರಲು ಈ ಬಾರಿಯ ಉತ್ಸವ ವಿಶೇಷ ಮಹತ್ವ ಪಡೆದುಕೊಂಡಿದೆ ಎಂದರು. ಕಾಫಿ ಮೌಲ್ಯ ಸರಪಳಿಯ ಎಲ್ಲ ಹಂತದ ಭಾಗಿದಾರರನ್ನು ಸಂಪರ್ಕಿಸುವ ವೇದಿಕೆಯಾಗಲಿದೆ ಎಂದು ವಿವರಿಸಿದರು.

ಬೆಂಗಳೂರು ಈಗಾಗಲೇ ಭಾರತದ ಪ್ರಮುಖ ಕಾಫಿ ಕೇಂದ್ರವಾಗಿದ್ದು, ಈ ಉತ್ಸವದ ಮೂಲಕ ಜಾಗತಿಕ ಕಾಫಿ ಭೂಪಟದಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಇದನ್ನೂ ಓದಿ…

ರಾಜ್ಯಕ್ಕೆ 191.67 ಕೋಟಿ ಬೇಳೆ ಮಿಷನ್ ಅನುದಾನ | 35 ಗಿರಣಿಗಳಿಗೆ ಕೇಂದ್ರದಿಂದ ಭರ್ಜರಿ ಬೆಂಬಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror