Advertisement
MIRROR FOCUS

ಫೆ.12 ರಿಂದ ಅಂತರಾಷ್ಟ್ರೀಯ ಕಾಫಿ ಉತ್ಸವ | ಜಾಗತಿಕ ಕಾಫಿ ಭೂಪಟದಲ್ಲಿ ಬೆಂಗಳೂರು

Share

ಭಾರತ ಅಂತಾರಾಷ್ಟ್ರೀಯ ಕಾಫಿ ಉತ್ಸವ 2026  ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ನಗರದ ಜಯಮಹಲ್ ಪ್ಯಾಲೆಸ್‌ ಚಾಮರವಜ್ರ ಸಭಾಂಗಣದಲ್ಲಿ ಈ ಮಹತ್ವದ ಉತ್ಸವ ನಡೆಯಲಿದೆ.

ಈ ಕುರಿತು Specialty Coffee Association of India ಅಧ್ಯಕ್ಷೆ Hamsini Appadurai ಮತ್ತು Coffee Board of Indiaಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ  ಕೂರ್ಮ ರಾವ್‌ ಮಾಹಿತಿ ನೀಡಿದರು.

ಕಾಫಿ ಅಸೋಸಿಯೇಶನ್‌ ಅಧ್ಯಕ್ಷೆ ಹಂಸಿಣಿ ಅಪ್ಪದುರೈ ಮಾತನಾಡಿ, ಫೆಬ್ರವರಿ 12ರಿಂದ 14ರವರೆಗೆ ನಡೆಯಲಿರುವ ಈ ಅಂತರಾಷ್ಟ್ರೀಯ ಕಾಫಿ ಉತ್ಸವಕ್ಕೆ ದೇಶ-ವಿದೇಶಗಳ ಕಾಫಿ ಪ್ರೇಮಿಗಳು, ಬೆಳೆಗಾರರು, ರೋಸ್ಟರ್‌ಗಳು ಹಾಗೂ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು. ಎಲ್ಲರೂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಗಬೇಕೆಂದು ಅವರು ಮನವಿ ಮಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೂರ್ಮಾ ರಾವ್ ಅವರು 2025 ಅನ್ನು ‘ಅಂತರಾಷ್ಟ್ರೀಯ ಸಹಕಾರಿ ವರ್ಷ’ ಎಂದು ಘೋಷಿಸಿರುವ ಹಿನ್ನೆಲೆ, ಕಾಫಿ ಬೆಳೆಗಾರರು, ಉದ್ಯಮಿಗಳು ಹಾಗೂ ಗ್ರಾಹಕರನ್ನು ಒಂದೇ ವೇದಿಕೆಗೆ ತರಲು ಈ ಬಾರಿಯ ಉತ್ಸವ ವಿಶೇಷ ಮಹತ್ವ ಪಡೆದುಕೊಂಡಿದೆ ಎಂದರು. ಕಾಫಿ ಮೌಲ್ಯ ಸರಪಳಿಯ ಎಲ್ಲ ಹಂತದ ಭಾಗಿದಾರರನ್ನು ಸಂಪರ್ಕಿಸುವ ವೇದಿಕೆಯಾಗಲಿದೆ ಎಂದು ವಿವರಿಸಿದರು.

ಬೆಂಗಳೂರು ಈಗಾಗಲೇ ಭಾರತದ ಪ್ರಮುಖ ಕಾಫಿ ಕೇಂದ್ರವಾಗಿದ್ದು, ಈ ಉತ್ಸವದ ಮೂಲಕ ಜಾಗತಿಕ ಕಾಫಿ ಭೂಪಟದಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಇದನ್ನೂ ಓದಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…

6 hours ago

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

8 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

9 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 day ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

1 day ago