Advertisement
MIRROR FOCUS

ಫೆ.12 ರಿಂದ ಅಂತರಾಷ್ಟ್ರೀಯ ಕಾಫಿ ಉತ್ಸವ | ಜಾಗತಿಕ ಕಾಫಿ ಭೂಪಟದಲ್ಲಿ ಬೆಂಗಳೂರು

Share

ಭಾರತ ಅಂತಾರಾಷ್ಟ್ರೀಯ ಕಾಫಿ ಉತ್ಸವ 2026  ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ನಗರದ ಜಯಮಹಲ್ ಪ್ಯಾಲೆಸ್‌ ಚಾಮರವಜ್ರ ಸಭಾಂಗಣದಲ್ಲಿ ಈ ಮಹತ್ವದ ಉತ್ಸವ ನಡೆಯಲಿದೆ.

ಈ ಕುರಿತು Specialty Coffee Association of India ಅಧ್ಯಕ್ಷೆ Hamsini Appadurai ಮತ್ತು Coffee Board of Indiaಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ  ಕೂರ್ಮ ರಾವ್‌ ಮಾಹಿತಿ ನೀಡಿದರು.

ಕಾಫಿ ಅಸೋಸಿಯೇಶನ್‌ ಅಧ್ಯಕ್ಷೆ ಹಂಸಿಣಿ ಅಪ್ಪದುರೈ ಮಾತನಾಡಿ, ಫೆಬ್ರವರಿ 12ರಿಂದ 14ರವರೆಗೆ ನಡೆಯಲಿರುವ ಈ ಅಂತರಾಷ್ಟ್ರೀಯ ಕಾಫಿ ಉತ್ಸವಕ್ಕೆ ದೇಶ-ವಿದೇಶಗಳ ಕಾಫಿ ಪ್ರೇಮಿಗಳು, ಬೆಳೆಗಾರರು, ರೋಸ್ಟರ್‌ಗಳು ಹಾಗೂ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು. ಎಲ್ಲರೂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಗಬೇಕೆಂದು ಅವರು ಮನವಿ ಮಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೂರ್ಮಾ ರಾವ್ ಅವರು 2025 ಅನ್ನು ‘ಅಂತರಾಷ್ಟ್ರೀಯ ಸಹಕಾರಿ ವರ್ಷ’ ಎಂದು ಘೋಷಿಸಿರುವ ಹಿನ್ನೆಲೆ, ಕಾಫಿ ಬೆಳೆಗಾರರು, ಉದ್ಯಮಿಗಳು ಹಾಗೂ ಗ್ರಾಹಕರನ್ನು ಒಂದೇ ವೇದಿಕೆಗೆ ತರಲು ಈ ಬಾರಿಯ ಉತ್ಸವ ವಿಶೇಷ ಮಹತ್ವ ಪಡೆದುಕೊಂಡಿದೆ ಎಂದರು. ಕಾಫಿ ಮೌಲ್ಯ ಸರಪಳಿಯ ಎಲ್ಲ ಹಂತದ ಭಾಗಿದಾರರನ್ನು ಸಂಪರ್ಕಿಸುವ ವೇದಿಕೆಯಾಗಲಿದೆ ಎಂದು ವಿವರಿಸಿದರು.

ಬೆಂಗಳೂರು ಈಗಾಗಲೇ ಭಾರತದ ಪ್ರಮುಖ ಕಾಫಿ ಕೇಂದ್ರವಾಗಿದ್ದು, ಈ ಉತ್ಸವದ ಮೂಲಕ ಜಾಗತಿಕ ಕಾಫಿ ಭೂಪಟದಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಇದನ್ನೂ ಓದಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

4 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

5 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

6 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

11 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

12 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

15 hours ago