Advertisement
The Rural Mirror ವಾರದ ವಿಶೇಷ

World Forestry Day | ಭೂಮಿಯ ಮೇಲೆ ಜೀವ ಉಳಿಸುವ ಕಾಡನ್ನು ಉಳಿಸೋಣ… |

Share

ಈಚೆಗೆ ದೆಹಲಿಯಲ್ಲಿ ವಾಯುಮಾಲಿನ್ಯದ ಕಾರಣದಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಯಿತು.ಕಾಡು ಉಳಿಸಿ ನಾಡು ಬೆಳೆಸಿ ಎನ್ನುವ ಶಾಲಾ ಮಕ್ಕಳೇ ಹೊಗೆಯ ಕಾರಣದಿಂದ ರಜೆಯೊಂದಿಗೆ ಮನೆ ಸೇರಿದರು. ಸಾವಿರಾರು ಮಂದಿ ಅಸ್ತಮಾ ಕಾಯಿಲೆಗೆ ತುತ್ತಾದರು..!. ಕಾರಣ ಮಾಲಿನ್ಯ.. ಭೂಮಿಯ ಮೇಲೆ ಹಸಿರು ಇದ್ದರೆ ಮಾತ್ರವೇ ಈ ಭೂಮಿಯಲ್ಲಿ ಎಲ್ಲಾ ಪ್ರಾಣಿಗಳೂ ನೆಮ್ಮದಿಯಿಂದ ಇರಲು ಸಾಧ್ಯ. ಇದಕ್ಕಾಗಿಯೇ ಹಸಿರು ಉಳಿಸೋಣ, ಹಸಿರು ಬೆಳೆಸೋಣ. ಇಂದು ಅಂತರಾಷ್ಟ್ರೀಯ ಅರಣ್ಯ ದಿನ.

ಈ ವರ್ಷದ ಅಂತರಾಷ್ಟ್ರೀಯ ಅರಣ್ಯ ದಿನವನ್ನು “ಅರಣ್ಯಗಳು ಮತ್ತು ಆವಿಷ್ಕಾರ – ಉತ್ತಮ ಜಗತ್ತಿಗಾಗಿ ಹೊಸ ಪರಿಹಾರ” ಎಂಬ ವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ. ಅರಣ್ಯ-ಪರಿಸರ ವ್ಯವಸ್ಥೆಗಳ ಸಂರಕ್ಷಣೆಯಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರಗಳ ಅಗತ್ಯ ಪಾತ್ರ ಇದೆ.ಅರಣ್ಯನಾಶ ಮತ್ತು ಹವಾಮಾನ ಬದಲಾವಣೆಯ ಬೆಳವಣಿಗೆಯು ಈಗಾಗಲೇ ಅಪಾಯವನ್ನು ಸೂಚಿಸಿದೆ. ಇದಕ್ಕಾಗಿ ಈ ಬದಲಾವಣೆಯನ್ನು ನಿಯಂತ್ರಿಸಲು ನಮ್ಮ ಕಾಡುಗಳಿಗೆ ತಾಂತ್ರಿಕವಾದ ಹೊಸ ಆವಿಷ್ಕಾರಗಳನ್ನು ಬಳಸಿಕೊಳ್ಳುವುದು ಅಗತ್ಯವಾಗಿದೆ. ಕಾಡನ್ನು ಉಳಿಸುವುದು ಹಾಗೂ ಬೆಳೆಸುವುದು ಅತೀ ಅಗತ್ಯವಾದ ವಿಷಯವಾಗಿದೆ.

ನಮ್ಮ ನಾಡಿನ ಹಸಿರು , ಅವುಗಳು ಭೂಮಿಯ ಮೇಲಿನ  ಹಸಿರಿನ ತೇಪೆಗಳಲ್ಲ. ಅವು ನಮ್ಮ ಅಸ್ತಿತ್ವದ ಜೀವಾಳ. ಅದರ ಬಗ್ಗೆ ಸುಮ್ಮನೆ ಯೋಚಿಸಿದಾಗ ಕೃತಜ್ಞತಾ ಭಾವವು ಜಾಗೃತವಾಗುತ್ತದೆ. ಪ್ರತೀ ಕ್ಷಣ ನಾವು ತೆಗೆದುಕೊಳ್ಳುವ ಪ್ರತಿ ಉಸಿರು, ಆನಂದಿಸುವ ಕ್ಷಣ,  ಸೌಕರ್ಯದ ಪ್ರತಿ ಕ್ಷಣವು ಕೂಡಾ ಕಾಡುಗಳಿಗೆ ಅರ್ಪಣೆಯಾಗಬೇಕು. ಇದಕ್ಕಾಗಿಯೇ ಅರಣ್ಯಗಳನ್ನು ಭೂಮಿಯ ಶ್ವಾಸಕೋಶ ಎಂದು ಪರಿಗಣಿಸಲಾಗುತ್ತದೆ. ಮರಗಳು ಕಾರ್ಬನ್‌ ಡೈ ಆಕ್ಸೈಡ್ ಅನ್ನು ಕಡಿಮೆ ಮಾಡುವ ಮೂಲಕ ಗಾಳಿಯನ್ನು ಫಿಲ್ಟರ್ ಮಾಡುತ್ತವೆ‌,  ಪರಿಸರದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತವೆ.

ಪರಿಸರ ವ್ಯವಸ್ಥೆಗಳ ಮರುಸ್ಥಾಪನೆ ಹೇಗೆ…? ತಾಂತ್ರಿಕತೆ ಬಳಕೆ ಹೇಗೆ..? : ಪರಿಸರ ವ್ಯವಸ್ಥೆಯಲ್ಲಿ ಮತ್ತೆ ಕಾಡುಗಳ ಮರುಸ್ಥಾಪನೆ, ಉಳಿಸಿಕೊಳ್ಳುವ ತೀವ್ರ ಅನಿವಾರ್ಯತೆ ಇದೆ.  ಏಕೆಂದರೆ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಗ್ಗಿಸುವಿಕೆಲ್ಲಿ ಬಹುಮುಖ್ಯವಾದ ಪಾತ್ರ ವಹಿಸಿಕೊಂಡಿದೆ. ಹವಾಮಾನ ಬದಲಾವಣೆಯು ಆಹಾರ ಭದ್ರತೆಯ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಕಾಡು ನಾಶವು ಆಹಾರ ಭದ್ರತೆಯ ಮೇಲೆ, ಉಸಿರಾಡುವ ಗಾಳಿಯ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಇದಕ್ಕಾಗಿಯೇ ಕಳೆದುಹೋದ ಹಸಿರು ಹೊದಿಕೆಯನ್ನು ಪುನಃ ತುಂಬಿಸುವ ಕಾರ್ಯ ನಡೆಯಬೇಕಿದೆ.

ಹೊಸ ತಂತ್ರಜ್ಞಾನಗಳ ಮೂಲಕ, ಡ್ರೋನ್ ಮತ್ತು ಉಪಗ್ರಹ ತಂತ್ರಜ್ಞಾನದಲ್ಲಿನ ಕ್ಷಿಪ್ರ ಪ್ರಗತಿಗಳು ಅರಣ್ಯ ನಿರ್ವಹಣೆಯಲ್ಲಿ ಬಳಸಿಕೊಳ್ಳಬೇಕಿದೆ. ಈ ಆವಿಷ್ಕಾರಗಳು ಅರಣ್ಯಗಳ ಉಳಿಸಿಕೊಳ್ಳುವಿಕೆ, ಅರಣ್ಯ ನಿರ್ವಹಣೆ, ಬೆಂಕಿಯನ್ನು ಪತ್ತೆಹಚ್ಚಲು ಹಾಗೂ ಸೂಕ್ಷ್ಮ ಪರಿಸರ ವ್ಯವಸ್ಥೆಗಳನ್ನು ರಕ್ಷಿಸಲು ಸಹಾಯ ಮಾಡುತ್ತವೆ.

ಹವಾಮಾನ ಬದಲಾವಣೆ ನಿಯಂತ್ರಣದಲ್ಲಿ ಅರಣ್ಯಗಳ ಪಾತ್ರ : ಹವಾಮಾನ ಬಿಕ್ಕಟ್ಟು ಈಗ ಬಹುದೊಡ್ಡ ಸವಾಲಾಗಿದೆ. ಇಡೀ ಪ್ರಪಂಚದಲ್ಲಿಯೇ ಈ ಬಗ್ಗೆ ಚರ್ಚೆ, ಅಧ್ಯಯನ ನಡೆಯುತ್ತಿದೆ. ಜಾಗತಿಕ ತಾಪಮಾನ ಏರಿಕೆಯ  ಪರಿಣಾಮಗಳನ್ನು ತಪ್ಪಿಸುವಲ್ಲಿ ಅರಣ್ಯಗಳೇ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅಧ್ಯಯನ ವರದಿಗಳು ಹೇಳಿವೆ.

ರಾಜ್ಯದಲ್ಲಿಯೂ ಅರಣ್ಯ ರಕ್ಷಣೆಗೆ ಪ್ರಮುಖವಾದ ಕಾರ್ಯಗಳು ಜನರಿಂದಲೇ ನಡೆಯಬೇಕಿದೆ. ಕಳೆದ 7 ವರ್ಷಗಳಲ್ಲಿ  15 ಸಾವಿರ ಹೆಕ್ಟೇರ್‌ಗೂ ಹೆಚ್ಚು ಅರಣ್ಯ ನಾಶವಾಗಿದೆ. ಹೀಗಾಗಿ ಜನರು ಜಾಗೃತರಾಗಿ ಕಾಡು ಉಳಿಸುವ-ಬೆಳೆಸುವ ಕಾರ್ಯವನ್ನು ನಡೆಸಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ

ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…

7 hours ago

ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ

ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…

7 hours ago

ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…

8 hours ago

ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…

10 hours ago

ತೆಂಗು-ಕೊಬ್ಬರಿ ಮಾರುಕಟ್ಟೆಗೆ ಭಾರೀ ಹೊಡೆತ – ಬೆಲೆ ಕುಸಿತ ತಾತ್ಕಾಲಿಕವೇ ಅಥವಾ ದೀರ್ಘಾವಧಿ ಸಂಕಷ್ಟವೇ?

ದಕ್ಷಿಣ ಭಾರತದ ತೆಂಗು ಹಾಗೂ ಕೊಬ್ಬರಿ ಮಾರುಕಟ್ಟೆಯಲ್ಲಿ ಬೆಲೆಗಳು ಭಾರೀ ಕುಸಿತ ಕಂಡಿದ್ದು,…

12 hours ago

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…

17 hours ago