Advertisement
ಸುದ್ದಿಗಳು

#YogaDay | ಭಾರತದ ಕರೆಗೆ 180ಕ್ಕೂ ಹೆಚ್ಚು ದೇಶಗಳು ಭಾಗಿ | ಯೋಗ ದಿನ ಆಚರಣೆಯಿಂದ ಇಡೀ ವಿಶ್ವವೇ ಒಂದಾಗಿದೆ – ಪ್ರಧಾನಿ ಮೋದಿ |

Share

ಇಂದು ಅಂತಾರಾಷ್ಟ್ರೀಯ ಯೋಜ ದಿನಾಚರಣೆ. ಅಂತಾರಾಷ್ಟ್ರೀಯ ಯೋಗ ದಿನದ  ಆಚರಣೆಯಿಂದ ಇಡೀ ವಿಶ್ವವೇ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement
Advertisement
ವಿಶ್ವ ಯೋಗ ದಿನದ ಹಿನ್ನೆಲೆಯಲ್ಲಿ ವೀಡಿಯೋ ಸಂದೇಶದಲ್ಲಿ ಮಾತನಾಡಿದ ಅವರು, ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿ ಆಗುತ್ತದೆ. ಯೋಗ ದಿನಾಚರಣೆಗೆ ಭಾರತ ಕರೆ ನೀಡಿತ್ತು. ಭಾರತ ಕರೆ ನೀಡಿದಂತೆ ವಿಶ್ವದ ಹಲವು ದೇಶಗಳಲ್ಲಿ ಯೋಗ ಮಾಡಲಾಗುತ್ತಿದೆ ಎಂದು ಹೇಳಿದರು. ವಿಶ್ವಸಂಸ್ಥೆಯ  ಪ್ರಧಾನ ಕಚೇರಿಯಲ್ಲಿ ಆಯೋಜಿಸಿರುವ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ಭಾರತದ ಕರೆಗೆ 180ಕ್ಕೂ ಹೆಚ್ಚು ದೇಶಗಳು ಒಗ್ಗೂಡಿರುವುದು ಐತಿಹಾಸಿಕ. 2014ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಯೋಗ ದಿನಾಚರಣೆಯ ಪ್ರಸ್ತಾಪ ಬಂದಾಗ ಅದಕ್ಕೆ ದಾಖಲೆ ಸಂಖ್ಯೆಯ ದೇಶಗಳು ಬೆಂಬಲ ನೀಡಿದ್ದವು ಎಂದರು.

ಅಮೇರಿಕ ಅಧ್ಯಕ್ಷ ಜೋ ಬೈಡೆನ್‌ ಆಹ್ವಾನ ಮೇರೆಗೆ ಮೂರು ದಿನಗಳ ಪ್ರವಾಸ ಹಮ್ಮಿಕೊಂಡಿರುವ ಮೋದಿ ಅವರಿಗೆ ರಾಜತಾಂತ್ರಿಕ ಅಧಿಕಾರಿಗಳಿಂದ ಅದ್ಧೂರಿ ಸ್ವಾಗತ ಕೋರಲಾಯಿತು. ಇಂದು ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ 9ನೇ ಯೋಗ ದಿನಾಚರಣೆಯ ನೇತೃತ್ವವನ್ನು ಮೋದಿ ವಹಿಸಲಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ಸಂಜೆ 5:25 ರಿಂದ 6:30ರ ಅವಧಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. 180ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ.

ಇದಾದ ಬಳಿಕ ಅವರು ರಾತ್ರಿ 8 ಗಂಟೆಗೆ ವಾಷಿಂಗ್ಟನ್ ಡಿಸಿಗೆ ಪ್ರಯಾಣ ಮಾಡಲಿದ್ದಾರೆ. ವಾಷಿಂಗ್ಟನ್ ಡಿಸಿ ತಲುಪಿದ ಬಳಿಕ ಅಮೇರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡೆನ್ ಅವರು ಆಯೋಜಿಸಿರುವ ಭೋಜನಕೂಟದಲ್ಲಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

4 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

11 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

17 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

18 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

18 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

18 hours ago