Advertisement
ಸುದ್ದಿಗಳು

#Yogaday | ಅಂತರಾಷ್ಟ್ರೀಯ ಯೋಗ ದಿನ | ಯೋಗ ದಿನದ ಇತಿಹಾಸ, ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ

Share

ಪ್ರತಿ ವರ್ಷ ವಿಶ್ವ ಯೋಗ ದಿನವನ್ನು ಜೂನ್‌ 21 ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತೆ . ಇಂದು 9ನೇ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. 2015 ರ ಜೂನ್ 21ರಂದು ಮೊದಲ ಬಾರಿಗೆ ಅಧಿಕೃತವಾಗಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಯೋಗ ಪ್ರಾಚೀನ ಕಲೆ. ಇದು 5000 ವರ್ಷಗಳ ಆಳವಾದ ಬೇರೂರಿರುವ ಇತಿಹಾಸವನ್ನು ಹೊಂದಿದೆ. ದೈಹಿಕ ಭಂಗಿಗಳೊಂದಿಗೆ (ಆಸನಗಳು) ಉಸಿರಾಟದ ವ್ಯಾಯಾಮಗಳ (ಪ್ರಾಣಾಯಾಮ) ಸಂಯೋಜನೆಯ ಮೂಲಕ ಮನಸ್ಸು ಮತ್ತು ದೇಹದ ಆಧ್ಯಾತ್ಮಿಕ, ಭಾವನಾತ್ಮಕ ಮತ್ತು ಮಾನಸಿಕ ಯೋಗಕ್ಷೇಮಕ್ಕೆ ಇದು ಸಮಗ್ರ ವಿಧಾನವಾಗಿದೆ. ಅಂತರರಾಷ್ಟ್ರೀಯ ಯೋಗ ದಿನವು ಯೋಗ ಮಾಡುವುದರಿಂದಾಗುವ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಯಾವ ರೀತಿ ಪ್ರಯೋಜನಗಳನ್ನು ಹೊಂದಿದೆ ಹಾಗೂ ಯೋಗವನ್ನು ವಿಶ್ವಾದ್ಯಂತ ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಭಾರತ ಮತ್ತು ಯೋಗದ ನಡುವಿನ ವಿಶಿಷ್ಟ ಸಂಪರ್ಕ: ಭಾರತ ಮತ್ತು ಯೋಗವು ಪ್ರಪಂಚದ ಇತರ ದೇಶಗಳಿಗಿಂತ ವಿಶೇಷವಾದ ಸಂಬಂಧವನ್ನು ಹೊಂದಿದೆ. ಆಧ್ಯಾತ್ಮಿಕ ಭಾರತಕ್ಕೆ ತೆರೆದುಕೊಳ್ಳಲು ಮತ್ತು ಆಳವಾದ ಪರಿಕಲ್ಪನೆಗಳನ್ನು ಅರ್ಥಮಾಡಿಕೊಳ್ಳಲು ಇದು ಅತ್ಯುತ್ತಮ ಮಾರ್ಗವಾಗಿದೆ. ಯೋಗದ ಮೂಲಕ್ಕೆ ಯಾವುದೇ ಬಲವಾದ ಪುರಾವೆಗಳಿಲ್ಲ. ಆದಾಗ್ಯೂ, ಅನೇಕ ಪುರಾತತ್ವಶಾಸ್ತ್ರಜ್ಞರು ಬುದ್ಧನ ಕಾಲದಲ್ಲಿ ಯೋಗವು ಭಾರತದಲ್ಲಿ ಹುಟ್ಟಿಕೊಂಡಿರಬೇಕು ಎಂದು ಬಲವಾಗಿ ಪ್ರತಿಪಾದಿಸುತ್ತಾರೆ. ವಿಪರ್ಯಾಸವೆಂದರೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ಯೋಗಕ್ಕಾಗಿ ಒಂದು ದಿನವನ್ನು ಮೀಸಲಿಡುವ ಕ್ರಮಗಳನ್ನು ಪ್ರಾರಂಭಿಸುವ ದೇಶ ಭಾರತವಾಗಿದೆ.

2014 ರ ಯುನೈಟೆಡ್ ನೇಷನ್ಸ್ ಅಸೆಂಬ್ಲಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕಲ್ಪನೆಯನ್ನು ಪ್ರಸ್ತಾಪಿಸಿದರು. ಈ ಪ್ರಸ್ತಾವನೆಗೆ 177 ಸದಸ್ಯ ರಾಷ್ಟ್ರಗಳಿಂದ ಅನುಮೋದನೆ ಸಿಕ್ಕಿತ್ತು. ವಿಶ್ವ ರಾಷ್ಟ್ರಗಳಿಂದ ಅತ್ಯಧಿಕ ಬೆಂಬಲವನ್ನು ಪಡೆದಿರುವ ಪ್ರಸ್ತಾವನೆ ಇದಾಗಿದ್ದು, ನಂತರ, ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನವೆಂದು ಆಚರಣೆಗೆ ತರಲಾಯಿತು.

2015 ರ ಜೂನ್ 21ರಂದು ಮೊದಲ ಬಾರಿಗೆ ಅಧಿಕೃತವಾಗಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ವಿಶೇಷ ದಿನದಂದು ಪ್ರಧಾನಿ ಮೋದಿಯವರ ಉಪಸ್ಥಿತಿಯಲ್ಲಿ ಸುಮಾರು 36000 ಉನ್ನತ ವ್ಯಕ್ತಿಗಳೊಂದಿಗೆ 35 ನಿಮಿಷಗಳ ಕಾಲ 21 ಯೋಗ ಆಸನಗಳನ್ನು ಪ್ರದರ್ಶಿಸಿದರು. ಅಂದಿನಿಂದ ಇಂದಿನವರೆಗೂ ಅದನ್ನು ಅನುಸರಿಸಿಕೊಂಡು ಬರಲಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

7 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

7 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

14 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

16 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

23 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

1 day ago