ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಆರೋಗ್ಯದ(Health) ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕಾಗಿದೆ. ಜೀವನ ಶೈಲಿ( Life style), ಆಹಾರ ಪದ್ಧತಿ(food habit), ವಿಷಕಾರಿ ತರಕಾರಿ(poisoned vegetables), ಕಲಬೆರಕೆ ಆಹಾರಗಳು.. ಯಾವುದನ್ನು ತಿಂದರು ಆರೋಗದ ಮೇಲೆ ಪರಿಣಾಮ ಬೀರೋದು ಗ್ಯಾರಂಟಿ. ಇವುಗಳಿಂದ ಹೊರಬರಲು ಖ್ಯಾತ ವಿಜ್ಞಾನಿ(scientist), ಕೃಷಿಕ(agriculturist), ವೈದ್ಯರೂ(doctor) ಆದ ಡಾ. ಖಾದರ್(Dr Khadar) ಅವರು ಒಂದಷ್ಟು ಸಲಹೆ ಹಾಗೂ ಕಷಾಯಗಳನ್ನು ಹೇಳಿದ್ದಾರೆ. ಈ ಕಷಾಯಗಳನ್ನು ಒಂದು ತಿಂಗಳು ಕುಡಿದರೆ 12 ತಿಂಗಳು ನಿಮಗೆ ಯಾವ ಕಾಯಿಲೆಯು ಬರುವುದಿಲ್ಲ..!
ಇದು ಸತ್ಯ… ಬನ್ನಿ, ಹಾಗಾದರೆ ಅದು ಯಾವುದರ ಕಷಾಯ ಎನ್ನುವುದನ್ನು ತಿಳಿಯೋಣ:
1. ಗರಿಕೆ ಹುಲ್ಲು ಕಷಾಯ.
2. ತುಳಸಿ ಎಲೆಕಷಾಯ.
3. ಅಮೃತ ಬಳ್ಳಿ ಕಷಾಯ.
4. ಬಿಲ್ವ ಪತ್ರೆ ಕಷಾಯ.
5. ಹೊಂಗೆ ಎಲೆ ಕಷಾಯ.
6. ಬೇವಿನ ಎಲೆ ಕಷಾಯ.
7. ಅರಳಿ ಎಲೆ ಕಷಾಯ. ಈ ಏಳು ಕಷಾಯಗಳನ್ನು ಮಾಡಲು, ಅರ್ಧ ಹಿಡಿ ಯಾವುದೇ ಎಲೆಗಳನ್ನು ತೆಗೆದುಕೊಳ್ಳಿ, ಚೆನ್ನಾಗಿ ತೊಳೆಯಿರಿ. ನಂತರ ಒಂದು ಲೋಟ (ಕಾಲು ಲೀಟರ್) ನೀರನ್ನು, ತೊಳೆದ ಎಲೆಗಳನ್ನು ಒಂದು ಪಾತ್ರೆಯಲ್ಲಿ ಹಾಕಿ ಚೆನ್ನಾಗಿ ಕುದಿಸಿ (4 ನಿಮಿಷ) ನಂತರ ಉರಿ ನಿಲ್ಲಿಸಿ. ಆ ಪಾತ್ರೆಗೆ ಮುಚ್ಚಳ ಮುಚ್ಚಿ ಹಾಗೆ ಇಡಿ ಮತ್ತೆ 5 ನಿಮಿಷ ಬಿಟ್ಟು ಅದನ್ನು ಸೋಸಿಕೊಂಡು, ಬಿಸಿ ಇರುವಾಗ ಸ್ವಲ್ಪ ಸ್ವಲ್ಪ ವಾಗಿ ಕುಡಿಯಿರಿ. ಈ ಕಷಾಯವನ್ನು ಖಾಲಿ ಹೊಟ್ಟೆಯಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಕುಡಿದರೆ ಉತ್ತಮ. ಚಹಾ, ಕಾಫಿ, ಹಾಲು ಕುಡಿಯುವುದನ್ನು ಬಿಟ್ಟುಬಿಡಲು ಪ್ರಯತ್ನಪಡಿ. ಒಂದೊಂದು ಕಷಾಯವನ್ನು ನಾಲ್ಕು ದಿನದಂತೆ ಒಂದು ತಿಂಗಳು ಕುಡಿಯಿರಿ. (ಪ್ರತಿದಿನ ಕುಡಿದರೆ ಒಳ್ಳೆಯದು)
ಇದರ ಜೊತೆಗೆ ಸಿರಿಧಾನ್ಯಗಳನ್ನು ತಿನ್ನಿರಿ. ಅವುಗಳೆಂದರೆ, “ಸಾಮೆ / ಸಾವೆ, ನವಣೆ, ಕೊರಲೆ, ಹಾರಕ / ಆರ್ಕ, ಉದಲು, ರಾಗಿ, ಜೋಳ, ಕಮ್ಮು / ಸಜ್ಜೆ”
ಈ ಸಿರಿಧಾನ್ಯಗಳಲ್ಲಿ ನೀವು ಅಕ್ಕಿಯಲ್ಲಿ ಏನೆಲ್ಲ ತಿಂಡಿ ಮಾಡುತ್ತಿರೋ ಅವೆಲ್ಲ ತಿಂಡಿಗಳನ್ನು ಮಾಡಬಹುದು. ಇಂತಹ ಆರೋಗ್ಯಕರವಾದ ತಿಂಡಿಗಳನ್ನು ನಿಮ್ಮ ಮನೆಯವರಿಗೆ ಮಾಡಿ ಕೊಡಿ. ನಿಮ್ಮ ಹಾಗೂ ನಿಮ್ಮ ಕುಟುಂಬದವರ ಆರೋಗ್ಯವನ್ನು ಕಾಪಾಡಿ.
ಇದಕ್ಕಿಂತ ಮುಖ್ಯವಾಗಿ ನೀವು ಬಿಡಬೇಕಾಗಿರುವುದು:
1. ಮೊಟ್ಟೆ ಮತ್ತು ದಾಲ್ಡ ತುಪ್ಪ
2. ಗೋದಿ / ಮೈದಾ ಹಿಟ್ಟು
3. ಹಾಲು
4. ಸಕ್ಕರೆ
5. ರಿಫೈನ್ಡ್ ಎಣ್ಣೆ
6. ಪಾಲಿಷ್ ಅಕ್ಕಿ
7. ಬ್ಲೀಚ್ ಮಾಡಿದ ಉಪ್ಪು
ಇದನ್ನು 25 ವರ್ಷದಿಂದ ಸಂಶೋಧನೆ ಮಾಡಿರುವ, ಕೃಷಿಕರು, ವಿಜ್ಞಾನಿಗಳು ಮತ್ತು ಸ್ವಯಂ ಹೋಮಿಯೋಪತಿ ವೈದ್ಯರು ಆದ ಖಾದರ್ ಅವರು ಹೇಳುತ್ತಲೇ ಬಂದಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…