ಕೃಷಿಗೆ, ಗ್ರಾಮೀಣ ಬದುಕಿನ ಅವಿಭಾಜ್ಯ ಅಂಗವಾಗಿರುವ ಗೋ ಸಂರಕ್ಷಣೆಯ ಕೆಲಸ ಹಲವು ಕಡೆ ಸದ್ದಿಲ್ಲದೆ ನಡೆಯುತ್ತಿದೆ. ಇಂದು ಗೋವನ್ನು ಹಾಲಿಗಿಂತಲೂ ಇತರ ಉತ್ಪನ್ನಗಳ ಕಾರಣದಿಂದ ಸಾಕಬೇಕಾಗಿದೆ. ಹಾಲು ಉತ್ಪಾದನೆಗಿಂತಲೂ ಮಣ್ಣಿನ ಸಂರಕ್ಷಣೆಯ ಕಾರಣದಿಂದ ಸೆಗಣಿ, ಗೋಮೂತ್ರ ಬಳಕೆ ಬಗ್ಗೆ ಜಾಗೃತಿ ಆಗಬೇಕಿದೆ. ಇದಕ್ಕಾಗಿ ಗೋವಿನ ಉತ್ಪನ್ನ ತಯಾರಕ ಕೃಷಿಕರ ಹಾಗೂ ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ “ಗೋಸುರಭಿ” ಯನ್ನು ರೂರಲ್ ಮಿರರ್ ಡಿಜಿಟಲ್ ಮಿಡಿಯಾ ನಡೆಸುತ್ತಿದೆ. ಸದ್ಯದಲ್ಲೇ ನಿರೀಕ್ಷಿಸಿ….
ಗೋವನ್ನು ಹಾಲಿಗಾಗಿ ಮಾತ್ರಾ ಸಾಕುತ್ತಿಲ್ಲ ಎನ್ನುವ ಹಲವು ಕೃಷಿಕರು ಇದ್ದಾರೆ. ಹಾಲು ಹಾಗೂ ಅದರ ಉತ್ಪನ್ನಗಳ ಹೊರತಾಗಿ ಅನೇಕ ಉತ್ಪನ್ನಗಳು ತಯಾರಾಗುತ್ತಿದೆ. ಇದರಿಂದ ಗೋಸಾಕಾಣಿಕೆ ಲಾಭದಾಯಕ ಮಾಡುವವರು ಇದ್ದಾರೆ. ಇಂತಹ ಕೃಷಿಕರ ಪರಿಚಯ ಮಾಡುವ ಅಭಿಯಾನ ನಡೆಸಲು ನಮ್ಮ ಡಿಜಿಟಲ್ ಮೀಡಿಯಾ ಮುಂದಾಗಿದೆ.ಇದಕ್ಕೆ “ಗೋಸುರಭಿ” ಎಂದು ಕರೆದಿದ್ದೇವೆ. ಕನಿಷ್ಠ 15 ದಿನಗಳಲ್ಲಿ ನಮಗೆ ಸಾಧ್ಯವಾಗುವ ಪ್ರಯತ್ನ ಮಾಡಬೇಕು. ಭಾರತೀಯ ಗೋವಿನ ಉಳಿಸುವ ಹಾಗೂ ಅದರ ಉತ್ಪನ್ನಗಳ ತಯಾರಿಕೆಗೆ ಆದ್ಯತೆ ನೀಡುತ್ತೇವೆ. ಇಷ್ಟು ಮಾತ್ರ ಅಲ್ಲ, ಮಣ್ಣಿನ ಸಂರಕ್ಷಣೆಯಲ್ಲೂ ಗೋವಿನ ಪಾತ್ರ ಬಹುಮುಖ್ಯವಾಗಿದೆ. ಈ ಮಣ್ಣು ಹಾಗೂ ಪರಿಸರದ ಸಂರಕ್ಷಣೆಯೂ ಅಗತ್ಯವಾಗಿದೆ.
ಹಾಲಿನ ಹೊರತಾಗಿ ಗೋವಿನ ಉತ್ಪನ್ನಗಳನ್ನು ತಯಾರಿಸುವ ಕೃಷಿಕರು,ಉದ್ಯಮಿಗಳು ಇದ್ದರೆ ನಮಗೆ ಮಾಹಿತಿ ನೀಡಿ. ನಮ್ಮ ಸಂಪರ್ಕ : 9449125447
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…