Advertisement
ಸುದ್ದಿಗಳು

ಆರ್ಟಿಕಲ್ 370 ರದ್ದು ಹಿನ್ನೆಲೆ | ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿಸಿದವರ ಸಂಖ್ಯೆ ಹೆಚ್ಚಳ, ಹೂಡಿಕೆಗೆ ಉತ್ತೇಜನ |

Share

ಸಂವಿಧಾನ ಪರಿಚ್ಛೇದ 370 ಮತ್ತು 35A ರದ್ದತಿ ಮತ್ತು ಜಮ್ಮು ಮತ್ತು ಕಾಶ್ಮೀರ  ರಾಜ್ಯವನ್ನು ಕೇಂದ್ರವು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ  ವಿಭಜಿಸಿ ಆಗಸ್ಟ್ 5, 2019ರಂದು ಘೋಷಣೆ ಮಾಡಿತು. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಹಲವು ಪರ-ವಿರೋಧ ಅಭಿಪ್ರಾಯಗಳು ಕೇಳಿಬಂದವು.

ಈ ಪ್ರಕ್ರಿಯೆ ಬಳಿಕ 185 ಸ್ಥಳೀಯೇತರರು ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಮಿಯನ್ನು ಖರೀದಿಸಿದ್ದಾರೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ 1,559 ಕಂಪನಿಗಳು ಹೂಡಿಕೆ ಮಾಡಿವೆ ಎಂಬ ವಿಚಾರ ತಿಳಿದುಬಂದಿದೆ.

ಆದರೆ ಸ್ಥಳೀಯ ಜನರ ಹಕ್ಕುಗಳು, ಉದ್ಯೋಗ ಸುರಕ್ಷತೆಯನ್ನು ನೀಡುವ ಸಂವಿಧಾನ ವಿಧಿ 6ನೇ ಶೆಡ್ಯೂಲ್ ಜಾರಿಗೆ ತರುವಂತೆ ಅನೇಕ ರಾಜಕೀಯ ಪಕ್ಷಗಳು, ವ್ಯಾಪಾರಸ್ಥರು ಮತ್ತು ನಾಗರಿಕ ಸೊಸೈಟಿಗಳು ಒತ್ತಾಯಿಸುತ್ತಿರುವ ಲಡಾಕ್ ನಲ್ಲಿ ಸ್ಥಳೀಯೇತರರು ಯಾರೂ ಭೂಮಿ ಖರೀದಿಸಿಲ್ಲ.

ಈ ವಿಷಯವನ್ನು ನಿನ್ನೆ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಲಿಖಿತ ಉತ್ತರದಲ್ಲಿ ತಿಳಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಮೂರು ವರ್ಷಗಳಲ್ಲಿ 185 ಮಂದಿ ಹೊರಗಿನವರು ಆಸ್ತಿ ಖರೀದಿಸಿಕೊಂಡಿದ್ದಾರೆ.

ಅಂಕಿಅಂಶಗಳ ಪ್ರಕಾರ, 2020 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ  ಹೊರಗಿನ ಒಬ್ಬ ವ್ಯಕ್ತಿ ಮಾತ್ರ ಭೂಮಿಯನ್ನು ಖರೀದಿಸಿದ್ದಾರೆ, ನಂತರ 2021 ರಲ್ಲಿ 57 ಮತ್ತು 2022 ರಲ್ಲಿ 127 ಮಂದಿ ಆಸ್ತಿ ಖರೀದಿಸಿದ್ದಾರೆ. ಆಗಸ್ಟ್ 5, 2019 ರಂದು ಕೇಂದ್ರವು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಆರ್ಟಿಕಲ್ 370 ಮತ್ತು ಆರ್ಟಿಕಲ್ 35A ನ್ನು ರದ್ದುಗೊಳಿಸಿತು.

ಜಮ್ಮು-ಕಾಶ್ಮೀರದಲ್ಲಿ ಭೂಮಿ ಮತ್ತು ಆಸ್ತಿಯನ್ನು ಖರೀದಿಸುವುದನ್ನು ಹೊರಗಿನವರಿಗೆ 2019ರ ಮೊದಲು ನಿರ್ಬಂಧಿಸಲಾಗಿತ್ತು. ಕೇಂದ್ರ ಸರ್ಕಾರವು ಜಮ್ಮು-ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಹೊರಗಿವರೂ ಆಸ್ತಿ ಖರೀದಿಸಬಹುದೆಂದು ನಿಯಮ ತರಲಾಯಿತು. ಲಡಾಕ್ ಗೆ ಸಹ ಇದೇ ನಿಯಮ ಅನ್ವಯವಾಗುತ್ತದೆ.

ಜಮ್ಮು-ಕಾಶ್ಮೀರ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ಇದುವರೆಗೆ 1,559 ಕಂಪೆನಿಗಳು, ಬಹುರಾಷ್ಟ್ರೀಯ ಕಂಪೆನಿಗಳು ಹೂಡಿಕೆ ಮಾಡಿವೆ. ಅಂಕಿಅಂಶ ಪ್ರಕಾರ, 310 ಕಂಪೆನಿಗಳು 2020-21ರಲ್ಲಿ ಹೂಡಿಕೆ ಮಾಡಿದ್ದು, 2021-22ರಲ್ಲಿ 175 ಕಂಪೆನಿಗಳು, 2022-23ರಲ್ಲಿ 1,074 ಕಂಪೆನಿಗಳು ಹೂಡಿಕೆ ಮಾಡಿವೆ. ಜಮ್ಮು-ಕಾಶ್ಮೀರ ಸರ್ಕಾರಕ್ಕೆ ಇತ್ತೀಚೆಗೆ 66,000 ಕೋಟಿ ರೂಪಾಯಿ ಖಾಸಗಿ ಹೂಡಿಕೆ ಪ್ರಸ್ತಾವನೆಗಳು ಬಂದಿವೆ ಎಂದು ಜಮ್ಮು-ಕಾಶ್ಮೀರ ಗವರ್ನರ್ ಮನೋಜ್ ಸಿನ್ಹ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 minutes ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

12 minutes ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

27 minutes ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

11 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

11 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

11 hours ago