Advertisement
ಕ್ರೀಡೆ

ನಾಳೆ ಐಪಿಎಲ್ 2023ಕ್ಕೆ ತೆರೆ: ಅದ್ಧೂರಿಯಾಗಿ ನಡೆಯಲಿದೆ ಸಮಾರೋಪ ಸಮಾರಂಭ

Share

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ (IPL 2023) ಅಂತಿಮ ಘಟ್ಟಕ್ಕೆ ಬಂದು ನಿಂತಿದೆ ಹಂತದಲ್ಲಿದೆ. ಇನ್ನು ಉಳಿದಿರುವುದು ಕೇವಲ ಒಂದು ಪಂದ್ಯ ಮಾತ್ರ. ಶುಕ್ರವಾರ ನಡೆದ ಕ್ವಾಲಿಫೈಯರ್-2 (Qualifier 2) ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಗುಜರಾತ್ ಟೈಟಾನ್ಸ್ ಫೈನಲ್​ಗೆ ಪ್ರವೇಶ ಪಡೆದಿದೆ. ಈ ಮೂಲಕ ಮೇ 28 ಭಾನುವಾರದಂದು ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾರ್ದಿಕ್ ಪಾಂಡ್ಯ ಅವರ ಗುಜರಾತ್ ಟೈಟಾನ್ಸ್ (CSK vs GT) ಐಪಿಎಲ್ 2023 ಫೈನಲ್​ನಲ್ಲಿ ಮುಖಾಮುಖಿ ಆಗಲಿದೆ. ಹಾಲಿ ಚಾಂಪಿಯನ್ ಮತ್ತು ಮಾಜಿ ಚಾಂಪಿಯನ್ನರ್ ಕಾದಾಟಕ್ಕೆ ಇಡೀ ವಿಶ್ವವೇ ಕಾದುಕುಳಿತಿದೆ.

ಈ ರೋಚಕ ಕಾದಾಟ ಆರಂಭಕ್ಕೂ ಮುನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಪಿಎಲ್ 2023 ಸಮಾರೋಪ ಸಮಾರಂಭ ಏರ್ಪಡಿಸಲು ಮುಂದಾಗಿದೆ. ಇದನ್ನು ಅದ್ಧೂರಿಯಾಗಿ ನೆರವೇರಿಸಲು ತೀರ್ಮಾನಿಸಿದೆ. ಇದರಲ್ಲಿ ಖ್ಯಾತ ರ‍್ಯಾಪರ್​​ಗಳು ಪ್ರದರ್ಶನ ನೀಡಲಿದ್ದಾರೆ. ರ‍್ಯಾಪರ್​​ಗಳಾದ ಕಿಂಗ್ ಮತ್ತು ಡಿಜೆ ನ್ಯೂಕ್ಲಿಯಾ ಪ್ರದರ್ಶನ ನೀಡಲಿದ್ದಾರೆ. ಅವರ ಜೊತೆಗೆ, ಡಿವೈನ್ ಮತ್ತು ಜೋನಿತಾ ಗಾಂಧಿ ಮಿಡ್ ಟೈಮ್ ಶೋನಲ್ಲಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಪಂದ್ಯಕ್ಕೂ ಮುನ್ನ ಕಿಂಗ್​ ಮತ್ತು ನ್ಯೂಕ್ಲಿಯಾ ಅಭಿಮಾನಿಗಳನ್ನು ರಂಜಿಸಿದರೆ, ಪಂದ್ಯದ ಮೊದಲ ಇನ್ನಿಂಗ್ಸ್ ನಂತರ, ಜೋನಿತಾ ಗಾಂಧಿ ಮತ್ತು ಡಿವೈನ್ ತಮ್ಮ ಪ್ರದರ್ಶನ ನೀಡಲಿದ್ದಾರೆ.

ಹಾಗಾದರೆ ಐಪಿಎಲ್ 2023 ಕ್ಲೋಸಿಂಗ್ ಸೆರಮನಿ ಯಾವಾಗ?, ಎಷ್ಟು ಗಂಟೆಗೆ?, ಯಾರೆಲ್ಲ ಸಾಕ್ಷಿಯಾಗಲಿದ್ದಾರೆ ಎಂಬುದನ್ನು ನೋಡೋಣ.

ಐಪಿಎಲ್ 2023 ರ ಸಮಾರೋಪ ಸಮಾರಂಭ ಎಲ್ಲಿ ನಡೆಯಲಿದೆ?

ಐಪಿಎಲ್ 2023 ಸಮಾರೋಪ ಸಮಾರಂಭ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಐಪಿಎಲ್ 2023 ರ ಸಮಾರೋಪ ಸಮಾರಂಭ ಯಾವಾಗ ನಡೆಯಲಿದೆ?

ಐಪಿಎಲ್ 2023 ರ ಸಮಾರೋಪ ಸಮಾರಂಭ ಭಾನುವಾರ (ಮೇ 28) ನಡೆಯಲಿದೆ. ಅದ್ಧೂರಿ ಕಾರ್ಯಕ್ರಮ ಸಂಜೆ ಸುಮಾರು 6 ಗಂಟೆಯಿಂದ ಶುರುವಾಗುವ ನಿರೀಕ್ಷೆಯಿದೆ.

ಐಪಿಎಲ್ 2023 ರ ಸಮಾರೋಪ ಸಮಾರಂಭದಲ್ಲಿ ಯಾರು ಭಾಗವಹಿಸಲಿದ್ದಾರೆ?

ರ‍್ಯಾಪರ್​​ಗಳಾದ ಕಿಂಗ್ ಮತ್ತು ಡಿಜೆ ನ್ಯೂಕ್ಲಿಯಾ ಪ್ರದರ್ಶನ ನೀಡಲಿದ್ದಾರೆ. ಅವರ ಜೊತೆಗೆ, ಡಿವೈನ್ ಮತ್ತು ಜೋನಿತಾ ಗಾಂಧಿ ಮಿಡ್ ಟೈಮ್ ಶೋನಲ್ಲಿ ರಂಜಿಸಲಿದ್ದಾರೆ.

ಐಪಿಎಲ್ 2023 ಸಮಾರೋಪ ಸಮಾರಂಭದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ವೀಕ್ಷಕರು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಐಪಿಎಲ್ 2023 ರ ಸಮಾರೋಪ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸಬಹುದು. ಲೈವ್ ಸ್ಟ್ರೀಮ್ ಜಿಯೋ ಸಿನಿಮಾದಲ್ಲಿ ವೀಕ್ಷಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

9 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

10 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

20 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

24 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

24 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

1 day ago