Advertisement
ಕ್ರೀಡೆ

ನಾಳೆ ಐಪಿಎಲ್ 2023ಕ್ಕೆ ತೆರೆ: ಅದ್ಧೂರಿಯಾಗಿ ನಡೆಯಲಿದೆ ಸಮಾರೋಪ ಸಮಾರಂಭ

Share

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ (IPL 2023) ಅಂತಿಮ ಘಟ್ಟಕ್ಕೆ ಬಂದು ನಿಂತಿದೆ ಹಂತದಲ್ಲಿದೆ. ಇನ್ನು ಉಳಿದಿರುವುದು ಕೇವಲ ಒಂದು ಪಂದ್ಯ ಮಾತ್ರ. ಶುಕ್ರವಾರ ನಡೆದ ಕ್ವಾಲಿಫೈಯರ್-2 (Qualifier 2) ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಗುಜರಾತ್ ಟೈಟಾನ್ಸ್ ಫೈನಲ್​ಗೆ ಪ್ರವೇಶ ಪಡೆದಿದೆ. ಈ ಮೂಲಕ ಮೇ 28 ಭಾನುವಾರದಂದು ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾರ್ದಿಕ್ ಪಾಂಡ್ಯ ಅವರ ಗುಜರಾತ್ ಟೈಟಾನ್ಸ್ (CSK vs GT) ಐಪಿಎಲ್ 2023 ಫೈನಲ್​ನಲ್ಲಿ ಮುಖಾಮುಖಿ ಆಗಲಿದೆ. ಹಾಲಿ ಚಾಂಪಿಯನ್ ಮತ್ತು ಮಾಜಿ ಚಾಂಪಿಯನ್ನರ್ ಕಾದಾಟಕ್ಕೆ ಇಡೀ ವಿಶ್ವವೇ ಕಾದುಕುಳಿತಿದೆ.

ಈ ರೋಚಕ ಕಾದಾಟ ಆರಂಭಕ್ಕೂ ಮುನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಪಿಎಲ್ 2023 ಸಮಾರೋಪ ಸಮಾರಂಭ ಏರ್ಪಡಿಸಲು ಮುಂದಾಗಿದೆ. ಇದನ್ನು ಅದ್ಧೂರಿಯಾಗಿ ನೆರವೇರಿಸಲು ತೀರ್ಮಾನಿಸಿದೆ. ಇದರಲ್ಲಿ ಖ್ಯಾತ ರ‍್ಯಾಪರ್​​ಗಳು ಪ್ರದರ್ಶನ ನೀಡಲಿದ್ದಾರೆ. ರ‍್ಯಾಪರ್​​ಗಳಾದ ಕಿಂಗ್ ಮತ್ತು ಡಿಜೆ ನ್ಯೂಕ್ಲಿಯಾ ಪ್ರದರ್ಶನ ನೀಡಲಿದ್ದಾರೆ. ಅವರ ಜೊತೆಗೆ, ಡಿವೈನ್ ಮತ್ತು ಜೋನಿತಾ ಗಾಂಧಿ ಮಿಡ್ ಟೈಮ್ ಶೋನಲ್ಲಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಪಂದ್ಯಕ್ಕೂ ಮುನ್ನ ಕಿಂಗ್​ ಮತ್ತು ನ್ಯೂಕ್ಲಿಯಾ ಅಭಿಮಾನಿಗಳನ್ನು ರಂಜಿಸಿದರೆ, ಪಂದ್ಯದ ಮೊದಲ ಇನ್ನಿಂಗ್ಸ್ ನಂತರ, ಜೋನಿತಾ ಗಾಂಧಿ ಮತ್ತು ಡಿವೈನ್ ತಮ್ಮ ಪ್ರದರ್ಶನ ನೀಡಲಿದ್ದಾರೆ.

ಹಾಗಾದರೆ ಐಪಿಎಲ್ 2023 ಕ್ಲೋಸಿಂಗ್ ಸೆರಮನಿ ಯಾವಾಗ?, ಎಷ್ಟು ಗಂಟೆಗೆ?, ಯಾರೆಲ್ಲ ಸಾಕ್ಷಿಯಾಗಲಿದ್ದಾರೆ ಎಂಬುದನ್ನು ನೋಡೋಣ.

ಐಪಿಎಲ್ 2023 ರ ಸಮಾರೋಪ ಸಮಾರಂಭ ಎಲ್ಲಿ ನಡೆಯಲಿದೆ?

ಐಪಿಎಲ್ 2023 ಸಮಾರೋಪ ಸಮಾರಂಭ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಐಪಿಎಲ್ 2023 ರ ಸಮಾರೋಪ ಸಮಾರಂಭ ಯಾವಾಗ ನಡೆಯಲಿದೆ?

ಐಪಿಎಲ್ 2023 ರ ಸಮಾರೋಪ ಸಮಾರಂಭ ಭಾನುವಾರ (ಮೇ 28) ನಡೆಯಲಿದೆ. ಅದ್ಧೂರಿ ಕಾರ್ಯಕ್ರಮ ಸಂಜೆ ಸುಮಾರು 6 ಗಂಟೆಯಿಂದ ಶುರುವಾಗುವ ನಿರೀಕ್ಷೆಯಿದೆ.

ಐಪಿಎಲ್ 2023 ರ ಸಮಾರೋಪ ಸಮಾರಂಭದಲ್ಲಿ ಯಾರು ಭಾಗವಹಿಸಲಿದ್ದಾರೆ?

ರ‍್ಯಾಪರ್​​ಗಳಾದ ಕಿಂಗ್ ಮತ್ತು ಡಿಜೆ ನ್ಯೂಕ್ಲಿಯಾ ಪ್ರದರ್ಶನ ನೀಡಲಿದ್ದಾರೆ. ಅವರ ಜೊತೆಗೆ, ಡಿವೈನ್ ಮತ್ತು ಜೋನಿತಾ ಗಾಂಧಿ ಮಿಡ್ ಟೈಮ್ ಶೋನಲ್ಲಿ ರಂಜಿಸಲಿದ್ದಾರೆ.

ಐಪಿಎಲ್ 2023 ಸಮಾರೋಪ ಸಮಾರಂಭದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ವೀಕ್ಷಕರು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಐಪಿಎಲ್ 2023 ರ ಸಮಾರೋಪ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸಬಹುದು. ಲೈವ್ ಸ್ಟ್ರೀಮ್ ಜಿಯೋ ಸಿನಿಮಾದಲ್ಲಿ ವೀಕ್ಷಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

8 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

9 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

11 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

12 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

19 hours ago