Advertisement
ಕ್ರೀಡೆ

ನಾಳೆ ಐಪಿಎಲ್ 2023ಕ್ಕೆ ತೆರೆ: ಅದ್ಧೂರಿಯಾಗಿ ನಡೆಯಲಿದೆ ಸಮಾರೋಪ ಸಮಾರಂಭ

Share

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ (IPL 2023) ಅಂತಿಮ ಘಟ್ಟಕ್ಕೆ ಬಂದು ನಿಂತಿದೆ ಹಂತದಲ್ಲಿದೆ. ಇನ್ನು ಉಳಿದಿರುವುದು ಕೇವಲ ಒಂದು ಪಂದ್ಯ ಮಾತ್ರ. ಶುಕ್ರವಾರ ನಡೆದ ಕ್ವಾಲಿಫೈಯರ್-2 (Qualifier 2) ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಗುಜರಾತ್ ಟೈಟಾನ್ಸ್ ಫೈನಲ್​ಗೆ ಪ್ರವೇಶ ಪಡೆದಿದೆ. ಈ ಮೂಲಕ ಮೇ 28 ಭಾನುವಾರದಂದು ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾರ್ದಿಕ್ ಪಾಂಡ್ಯ ಅವರ ಗುಜರಾತ್ ಟೈಟಾನ್ಸ್ (CSK vs GT) ಐಪಿಎಲ್ 2023 ಫೈನಲ್​ನಲ್ಲಿ ಮುಖಾಮುಖಿ ಆಗಲಿದೆ. ಹಾಲಿ ಚಾಂಪಿಯನ್ ಮತ್ತು ಮಾಜಿ ಚಾಂಪಿಯನ್ನರ್ ಕಾದಾಟಕ್ಕೆ ಇಡೀ ವಿಶ್ವವೇ ಕಾದುಕುಳಿತಿದೆ.

ಈ ರೋಚಕ ಕಾದಾಟ ಆರಂಭಕ್ಕೂ ಮುನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಪಿಎಲ್ 2023 ಸಮಾರೋಪ ಸಮಾರಂಭ ಏರ್ಪಡಿಸಲು ಮುಂದಾಗಿದೆ. ಇದನ್ನು ಅದ್ಧೂರಿಯಾಗಿ ನೆರವೇರಿಸಲು ತೀರ್ಮಾನಿಸಿದೆ. ಇದರಲ್ಲಿ ಖ್ಯಾತ ರ‍್ಯಾಪರ್​​ಗಳು ಪ್ರದರ್ಶನ ನೀಡಲಿದ್ದಾರೆ. ರ‍್ಯಾಪರ್​​ಗಳಾದ ಕಿಂಗ್ ಮತ್ತು ಡಿಜೆ ನ್ಯೂಕ್ಲಿಯಾ ಪ್ರದರ್ಶನ ನೀಡಲಿದ್ದಾರೆ. ಅವರ ಜೊತೆಗೆ, ಡಿವೈನ್ ಮತ್ತು ಜೋನಿತಾ ಗಾಂಧಿ ಮಿಡ್ ಟೈಮ್ ಶೋನಲ್ಲಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಪಂದ್ಯಕ್ಕೂ ಮುನ್ನ ಕಿಂಗ್​ ಮತ್ತು ನ್ಯೂಕ್ಲಿಯಾ ಅಭಿಮಾನಿಗಳನ್ನು ರಂಜಿಸಿದರೆ, ಪಂದ್ಯದ ಮೊದಲ ಇನ್ನಿಂಗ್ಸ್ ನಂತರ, ಜೋನಿತಾ ಗಾಂಧಿ ಮತ್ತು ಡಿವೈನ್ ತಮ್ಮ ಪ್ರದರ್ಶನ ನೀಡಲಿದ್ದಾರೆ.

ಹಾಗಾದರೆ ಐಪಿಎಲ್ 2023 ಕ್ಲೋಸಿಂಗ್ ಸೆರಮನಿ ಯಾವಾಗ?, ಎಷ್ಟು ಗಂಟೆಗೆ?, ಯಾರೆಲ್ಲ ಸಾಕ್ಷಿಯಾಗಲಿದ್ದಾರೆ ಎಂಬುದನ್ನು ನೋಡೋಣ.

ಐಪಿಎಲ್ 2023 ರ ಸಮಾರೋಪ ಸಮಾರಂಭ ಎಲ್ಲಿ ನಡೆಯಲಿದೆ?

ಐಪಿಎಲ್ 2023 ಸಮಾರೋಪ ಸಮಾರಂಭ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಐಪಿಎಲ್ 2023 ರ ಸಮಾರೋಪ ಸಮಾರಂಭ ಯಾವಾಗ ನಡೆಯಲಿದೆ?

ಐಪಿಎಲ್ 2023 ರ ಸಮಾರೋಪ ಸಮಾರಂಭ ಭಾನುವಾರ (ಮೇ 28) ನಡೆಯಲಿದೆ. ಅದ್ಧೂರಿ ಕಾರ್ಯಕ್ರಮ ಸಂಜೆ ಸುಮಾರು 6 ಗಂಟೆಯಿಂದ ಶುರುವಾಗುವ ನಿರೀಕ್ಷೆಯಿದೆ.

ಐಪಿಎಲ್ 2023 ರ ಸಮಾರೋಪ ಸಮಾರಂಭದಲ್ಲಿ ಯಾರು ಭಾಗವಹಿಸಲಿದ್ದಾರೆ?

ರ‍್ಯಾಪರ್​​ಗಳಾದ ಕಿಂಗ್ ಮತ್ತು ಡಿಜೆ ನ್ಯೂಕ್ಲಿಯಾ ಪ್ರದರ್ಶನ ನೀಡಲಿದ್ದಾರೆ. ಅವರ ಜೊತೆಗೆ, ಡಿವೈನ್ ಮತ್ತು ಜೋನಿತಾ ಗಾಂಧಿ ಮಿಡ್ ಟೈಮ್ ಶೋನಲ್ಲಿ ರಂಜಿಸಲಿದ್ದಾರೆ.

ಐಪಿಎಲ್ 2023 ಸಮಾರೋಪ ಸಮಾರಂಭದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ವೀಕ್ಷಕರು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಐಪಿಎಲ್ 2023 ರ ಸಮಾರೋಪ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸಬಹುದು. ಲೈವ್ ಸ್ಟ್ರೀಮ್ ಜಿಯೋ ಸಿನಿಮಾದಲ್ಲಿ ವೀಕ್ಷಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

2 hours ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

3 hours ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

3 hours ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…

3 hours ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…

3 hours ago

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

12 hours ago