ಔಷಧಿಯ ಗುಣಗಳುಳ್ಳ ಇಪ್ಪೆ ಮರ | ಎಲೆ, ಹೂ, ಕಾಯಿ, ತೊಗಟೆ ಎಲ್ಲವೂ ಉಪಯೋಗ….! |

April 7, 2023
10:55 AM

ಔಷಧಿಯ ಗುಣಗಳುಳ್ಳ ಇಪ್ಪೆ ಮರ ಮಲೆನಾಡಿನ ಕಾಡು ಬೆಳೆಗಳಲ್ಲಿ ಒಂದು.ಮರದ ಬುಡದಲ್ಲಿ ಕುಳಿತರು ಸಾಕು ಮನಸ್ಸು ಶಾಂತವಾಗುತ್ತದೆ. ಇದರ ಎಲೆ ಹೂವು ಕಾಯಿ ತೊಗಟೆ ಇವು ಉತ್ತಮ ಔಷಧಿಯು ಹೌದು. ರುಚಿಯು ಹೌದು.

Advertisement
Advertisement

ಸಾಧಾರಣವಾಗಿ ಮೇ ಕೊನೆಯ ವಾರಗಳಲ್ಲಿ ಇದರ ಹಣ್ಣು ಬೀಜ ಸಿಕ್ಕುತ್ತದೆ. ಬೀಜವನ್ನು ಸಂಗ್ರಹಿಸಿ ಉಪ್ಪಾಗೆ, ಮುರುಗನ ಬೀಜ ದಿಂದ ಎಣ್ಣೆ ತೆಗೆದಂತೆ (ತುಪ್ಪ) ತೆಗೆಯಬೇಕು ಇದು ಎರಡು ವರ್ಷಕ್ಕೂ ಹಾಳಾಗುವುದಿಲ್ಲ.

1) ಇಪ್ಪೆ ತುಪ್ಪವನ್ನು ಬಿಸಿ ಮಾಡಿ ಹಚ್ಚುವುದರಿಂದ ಸಂಧಿವಾತ ಗುಣವಾಗುತ್ತದೆ.
2) ತಲೆಗೆ ಹಾಕುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ ಮತ್ತು ತಲೆನೋವು ಗುಣವಾಗುತ್ತದೆ.
3) ಇಪ್ಪೇಚಕ್ಕೆ ಕಷಾಯ ಸಂಧಿವಾತಕ್ಕೆ ಒಳ್ಳೆಯ ಔಷಧಿ.
4) ತೊಗಟೆಯ ಪುಡಿಯಲ್ಲಿ ಹಲ್ಲು ಉಜ್ಜುವುದರಿಂದ ಹಲ್ಲಿನ ಸಮಸ್ಯೆಗಳು ದೂರವಾಗುತ್ತವೆ.
5) ತೊಗಟೆಯ ಪುಡಿಯನ್ನು ತೋನ್ನು ರೋಗದಲ್ಲಿ ಉಪಯೋಗಿಸುತ್ತೇನೆ.
6) ತೊಗಟೆಯ ಪುಡಿಯನ್ನು ಕ್ಯಾನ್ಸರ್ ರೋಗದಲ್ಲಿ ಬಳಸುತ್ತೇನೆ.
7) ತಿಪ್ಪೆಯ ಹೂವಿನಲ್ಲಿ ಮಾಡಿದ ಲೇಹ್ಯ ನಿದ್ದೆಗೆ ಮತ್ತು ಪುಷ್ಟಿಗೆ ತುಂಬಾ ಒಳ್ಳೆಯದು.
8) ಹೂವನ್ನು ನೆರಳಿನಲ್ಲಿ ಒಣಗಿಸಿ ಪುಡಿ ಮಾಡಿ ಬೇಕಾದಾಗ ಶರಭತ್ ಮಾಡಿ ಕುಡಿಯಬಹುದು.
9) ಹೂವನ್ನು ನೀರು ಅಥವಾ ಹಾಲು ಹಾಕಿ ಕುದಿಸಿ ಕುಡಿಯುವುದರಿಂದ ಕರುಳಿನ ಹುಣ್ಣು ಗುಣವಾಗುತ್ತದೆ.
10) ಹಸಿ ಹೂವನ್ನು ತಿನ್ನುವುದರಿಂದ ಕೆಮ್ಮು ಗುಣವಾಗುತ್ತದೆ.
11) ಅರೆಬರೆ ವಣಗಿದ ಹಣ್ಣು ಯಾವ ಡ್ರೈಫ್ರೂಟಿಗೂ ಕಡಿಮೆ ಇಲ್ಲ. ಶಾಲಾ ದಿನಗಳಲ್ಲಿ ಮರದ ಕೆಳಗೆ ಹೆಕ್ಕಿ ತಿನ್ನುವುದೇ ಒಂದು ಸಂಭ್ರಮ. ಹೆಚ್ಚಾಗಿ ಮತ್ತು ಬರುವ ಸಾಧ್ಯತೆಯೂ ಇದೆ.
12) ಇದರ ಎಳೆಯ ಎಲೆಗಳನ್ನು ಎಣ್ಣೆಯಲ್ಲಿ ಕುದಿಸಿ ಕಿವಿಗೆ ಹಾಕುವುದರಿಂದ ಕಿವಿ ನೋವು ಗುಣವಾಗುತ್ತದೆ.
13) ಬೆಳೆದ ಮರದಿಂದ ಮಣೆ (ಕುಳಿತು ಕೊಳ್ಳಲು) ಮಾಡಿ ಕುಳಿತು ಜಪ ಮಾಡುವುದರಿಂದ ಬೇಗನೆ ಸಿದ್ದಿ ಆಗುವುದು ಎನ್ನುವ ನಂಬಿಕೆ.
14) ಮರದ ಕಡಗೋಲು ತಯಾರಿಸಿ ಮಜ್ಜಿಗೆ ಕಡೆಯುವುದರಿಂದ ವಾತರೋಗ ನಿವಾರಣೆ ಆಗುತ್ತದೆ. ದೇಹಕ್ಕೂ ತಂಪು.

ಖ್ಯಾತ ನಾಟಿ ವೈದ್ಯೆ ಸುಮನಾ ಮಳಗದ್ದೆಯವರು ಇಪ್ಪೆ ಮರದ ಉಪಯೋಗಗಳ ಬಗ್ಗೆ ಬಹಳ ಸೊಗಸಾಗಿ ಹೇಳಿದ್ದಾರೆ. ಅವರನ್ನು ಸಂಪರ್ಕಿಸೋದಾದ್ರೆ :  ಸುಮನಾ ಮಳಲಗದ್ದೆ 9980182883.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ
June 20, 2025
7:13 AM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group