ಔಷಧಿಯ ಗುಣಗಳುಳ್ಳ ಇಪ್ಪೆ ಮರ | ಎಲೆ, ಹೂ, ಕಾಯಿ, ತೊಗಟೆ ಎಲ್ಲವೂ ಉಪಯೋಗ….! |

April 7, 2023
10:55 AM

ಔಷಧಿಯ ಗುಣಗಳುಳ್ಳ ಇಪ್ಪೆ ಮರ ಮಲೆನಾಡಿನ ಕಾಡು ಬೆಳೆಗಳಲ್ಲಿ ಒಂದು.ಮರದ ಬುಡದಲ್ಲಿ ಕುಳಿತರು ಸಾಕು ಮನಸ್ಸು ಶಾಂತವಾಗುತ್ತದೆ. ಇದರ ಎಲೆ ಹೂವು ಕಾಯಿ ತೊಗಟೆ ಇವು ಉತ್ತಮ ಔಷಧಿಯು ಹೌದು. ರುಚಿಯು ಹೌದು.

ಸಾಧಾರಣವಾಗಿ ಮೇ ಕೊನೆಯ ವಾರಗಳಲ್ಲಿ ಇದರ ಹಣ್ಣು ಬೀಜ ಸಿಕ್ಕುತ್ತದೆ. ಬೀಜವನ್ನು ಸಂಗ್ರಹಿಸಿ ಉಪ್ಪಾಗೆ, ಮುರುಗನ ಬೀಜ ದಿಂದ ಎಣ್ಣೆ ತೆಗೆದಂತೆ (ತುಪ್ಪ) ತೆಗೆಯಬೇಕು ಇದು ಎರಡು ವರ್ಷಕ್ಕೂ ಹಾಳಾಗುವುದಿಲ್ಲ.

1) ಇಪ್ಪೆ ತುಪ್ಪವನ್ನು ಬಿಸಿ ಮಾಡಿ ಹಚ್ಚುವುದರಿಂದ ಸಂಧಿವಾತ ಗುಣವಾಗುತ್ತದೆ.
2) ತಲೆಗೆ ಹಾಕುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ ಮತ್ತು ತಲೆನೋವು ಗುಣವಾಗುತ್ತದೆ.
3) ಇಪ್ಪೇಚಕ್ಕೆ ಕಷಾಯ ಸಂಧಿವಾತಕ್ಕೆ ಒಳ್ಳೆಯ ಔಷಧಿ.
4) ತೊಗಟೆಯ ಪುಡಿಯಲ್ಲಿ ಹಲ್ಲು ಉಜ್ಜುವುದರಿಂದ ಹಲ್ಲಿನ ಸಮಸ್ಯೆಗಳು ದೂರವಾಗುತ್ತವೆ.
5) ತೊಗಟೆಯ ಪುಡಿಯನ್ನು ತೋನ್ನು ರೋಗದಲ್ಲಿ ಉಪಯೋಗಿಸುತ್ತೇನೆ.
6) ತೊಗಟೆಯ ಪುಡಿಯನ್ನು ಕ್ಯಾನ್ಸರ್ ರೋಗದಲ್ಲಿ ಬಳಸುತ್ತೇನೆ.
7) ತಿಪ್ಪೆಯ ಹೂವಿನಲ್ಲಿ ಮಾಡಿದ ಲೇಹ್ಯ ನಿದ್ದೆಗೆ ಮತ್ತು ಪುಷ್ಟಿಗೆ ತುಂಬಾ ಒಳ್ಳೆಯದು.
8) ಹೂವನ್ನು ನೆರಳಿನಲ್ಲಿ ಒಣಗಿಸಿ ಪುಡಿ ಮಾಡಿ ಬೇಕಾದಾಗ ಶರಭತ್ ಮಾಡಿ ಕುಡಿಯಬಹುದು.
9) ಹೂವನ್ನು ನೀರು ಅಥವಾ ಹಾಲು ಹಾಕಿ ಕುದಿಸಿ ಕುಡಿಯುವುದರಿಂದ ಕರುಳಿನ ಹುಣ್ಣು ಗುಣವಾಗುತ್ತದೆ.
10) ಹಸಿ ಹೂವನ್ನು ತಿನ್ನುವುದರಿಂದ ಕೆಮ್ಮು ಗುಣವಾಗುತ್ತದೆ.
11) ಅರೆಬರೆ ವಣಗಿದ ಹಣ್ಣು ಯಾವ ಡ್ರೈಫ್ರೂಟಿಗೂ ಕಡಿಮೆ ಇಲ್ಲ. ಶಾಲಾ ದಿನಗಳಲ್ಲಿ ಮರದ ಕೆಳಗೆ ಹೆಕ್ಕಿ ತಿನ್ನುವುದೇ ಒಂದು ಸಂಭ್ರಮ. ಹೆಚ್ಚಾಗಿ ಮತ್ತು ಬರುವ ಸಾಧ್ಯತೆಯೂ ಇದೆ.
12) ಇದರ ಎಳೆಯ ಎಲೆಗಳನ್ನು ಎಣ್ಣೆಯಲ್ಲಿ ಕುದಿಸಿ ಕಿವಿಗೆ ಹಾಕುವುದರಿಂದ ಕಿವಿ ನೋವು ಗುಣವಾಗುತ್ತದೆ.
13) ಬೆಳೆದ ಮರದಿಂದ ಮಣೆ (ಕುಳಿತು ಕೊಳ್ಳಲು) ಮಾಡಿ ಕುಳಿತು ಜಪ ಮಾಡುವುದರಿಂದ ಬೇಗನೆ ಸಿದ್ದಿ ಆಗುವುದು ಎನ್ನುವ ನಂಬಿಕೆ.
14) ಮರದ ಕಡಗೋಲು ತಯಾರಿಸಿ ಮಜ್ಜಿಗೆ ಕಡೆಯುವುದರಿಂದ ವಾತರೋಗ ನಿವಾರಣೆ ಆಗುತ್ತದೆ. ದೇಹಕ್ಕೂ ತಂಪು.

ಖ್ಯಾತ ನಾಟಿ ವೈದ್ಯೆ ಸುಮನಾ ಮಳಗದ್ದೆಯವರು ಇಪ್ಪೆ ಮರದ ಉಪಯೋಗಗಳ ಬಗ್ಗೆ ಬಹಳ ಸೊಗಸಾಗಿ ಹೇಳಿದ್ದಾರೆ. ಅವರನ್ನು ಸಂಪರ್ಕಿಸೋದಾದ್ರೆ :  ಸುಮನಾ ಮಳಲಗದ್ದೆ 9980182883.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror